ಅವಳಿ ಕೊಲೆ: ಶಾಂತಿ ಸಭೆಯಲ್ಲಿ ಖಂಡನೆ


Team Udayavani, May 23, 2019, 6:08 AM IST

avali-kole

ಕುಂಬಳೆ: ಪೆರಿಯ ಕಲೊÂàಟ್‌ ನಲ್ಲಿ ಜೋಡಿಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಶಾಂತಿಯುತ ವಾತಾವರಣ ಪುನಃ ನಿರ್ಮಿಸಲು ಸರ್ವಪಕ್ಷ ಶಾಂತಿ ಸಭೆ ಬೆಂಬಲ ಸೂಚಿಸಿದೆ. ಜಿಲ್ಲಾಧಿಕಾರಿ ಅವರ ಛೇಂಬರ್‌ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ಅಧ್ಯಕ್ಷತೆ ವಹಿಸಿದ್ದರು.

ಕೊಲೆ ಪ್ರಕರಣದಲ್ಲಿ ಸರ್ವಪಕ್ಷಗಳು ಏಕಕಂಠದಿಂದ ಖಂಡನೆ ವ್ಯಕ್ತಡಿಸಿದುವು. ಮುಂದೆ ಯಾವ ರೀತಿಯ ಅಕ್ರಮ ಘಟನೆಗಳೂ ನಡೆಯದಂತೆ, ಶಾಂತಿಭಂಗವಾಗದಂತೆ ಒಗ್ಗಟ್ಟಿನ ತೀರ್ಮಾನ ಕೈಗೊಳ್ಳಲಾಯಿತು.

ಜೋಡಿಕೊಲೆ ಹಿನ್ನೆಲೆಯಲ್ಲಿ ಫೆ. 26ರಂದು ನಡೆದಿದ್ದ ಸರ್ವಪಕ್ಷ ಶಾಂತಿ ಸಭೆ ಮತ್ತು ತದನಂತರದಜರಗಿದ್ದ ಜಿಲ್ಲಾ ಪೊಲೀಸ್‌ ವರಿಷ್ಠ ಅಧಿಕಾರಿ, ಉಪ ಜಿಲ್ಲಾಧಿಕಾರಿ, ಡಿ.ವೈ.ಎಸ್‌. ಪಿ. ಸಹಿತ ಹಿರಿಯ ಅಧಿಕಾರಿಗಳ ಸಭೆಗಳ ನಿರ್ಧಾರದಂತೆ ಈ ಸಭೆ ನಡೆಸಲಾಗಿತ್ತು. ಜಿಲ್ಲಾಡಳಿತೆಯ ನೇತƒತ್ವದಲ್ಲಿ ಕಲೋÂಟ್‌ ಪ್ರದೇಶ ಸೇರಿರುವ ಪುಲ್ಲೂರು-ಪೆರಿಯ ಪಂಚಾಯತ್‌ ಪ್ರದೇಶದಲ್ಲಿ ರಾಜಕೀಯ ಪಕ್ಷಗಳ ನೇತಾರರನ್ನು ಮಾತ್ರ ಸೇರಿಸಿ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಪರಸ್ಪರ ವಿಶ್ವಾಸ ಹೆಚ್ಚಿಸಿಕೊಳ್ಳಲು, ಇದಕ್ಕೆ ಪೂರಕವಾಗಿ ಜಿಲ್ಲಾಧಿಕಾರಿ ಮಂಡಿಸಿರುವ ಕೆಲವು ಸಲಹೆಗಳನ್ನು ಪಕ್ಷಗಳು ತಮ್ಮ ಮಟ್ಟದಲ್ಲಿ ಚರ್ಚಿಸಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇದು ಪೂರಕ ಎಂದು ತಿಳಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಲ್ಲಿ ತಕ್ಷಣ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನೇರವಾಗಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳ ಸ್ಥಳೀಯ ಮಟ್ಟದ ತಲಾ ಮೂವರು ನೇತಾರರನ್ನು ಸೇರಿಸಿ ಆರು ಮಂದಿಯ ಸಮಿತಿಯೊಂದನ್ನು ರಚಿಸಲಾಗುವುದು. ಕಲೊÂàಟ್‌ನಲ್ಲಿ ಉಪಜಿಲ್ಲಾಧಿಕಾರಿ ಅವರ ನೇತƒತ್ವದಲ್ಲಿ ಪೊಲೀಸ್‌ ಏಯ್ಡ ಪೋಸ್ಟ್‌ ಒಂದನ್ನು ಸ್ಥಾಪಿಸಲಾಗುವುದು. ಈ ಪ್ರದೇಶದಲ್ಲಿ ಶಾಂತಿಭಂಗ ಉಂಟುಮಾಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಸಹಿತ ವಿವಿಧ ವಿಚಾರಗಳ ಬಗ್ಗೆ ನಿಗಾ ಇರಿಸುವ ನಿಟ್ಟಿನಲ್ಲಿ ಪೊಲೀಸರಿಗೆ ಆದೇಶ ನೀಡಲಾಗಿದೆ.

ಕ್ರಿಮಿನಲ್‌ ಪ್ರಕರಣಗಳಲ್ಲಿ ಶಾಮೀಲಾಗಿರು ವವರನ್ನು ಬೆಂಬಲಿಸುವ ಕ್ರಮವನ್ನು ರಾಜಕೀಯ ಪಕ್ಷಗಳು ಕೈಬಿಡುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.
ಉಪಜಿಲ್ಲಾಧಿಕಾರಿ ಅರುಣೆR ವಿಜಯನ್‌, ಸಹಾಯಕ ಜಿಲ್ಲಾಧಿಕಾರಿ ಕೆ. ಜಯಲಕ್ಷ್ಮೀ ಸಹಾಯಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಬಿ. ಪ್ರಷೋಬ್‌, ಸಂಸದ ಪಿ. ಕರುಣಾಕರನ್‌, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಂ.ವಿ. ಬಾಲಕೃಷ್ಣನ್‌, ಕೆ.ಪಿ. ಸತೀಶ್ಚಂದ್ರನ್‌, ಹಕೀಂಕುನ್ನಿಲ್‌, ಎ. ಗೋವಿಂದನ್‌ ನಾಯರ್‌, ಕೆ.ಪಿ. ಕುಂಞಿಕಣ್ಣನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.