ಹಾವಿನ ಭಯದ ಭೀತಿಯಲ್ಲಿ ಉದ್ಯಾವರ ಗೇಟ್‌ ಶಾಲೆ ವಿದ್ಯಾರ್ಥಿಗಳು

ವಯನಾಡಿನ ಘಟನೆ ಮರುಕಳಿಸುವ ಸಾಧ್ಯತೆ

Team Udayavani, Nov 28, 2019, 4:36 AM IST

aa-7

ಮಂಜೇಶ್ವರ: ಕೇರಳದ ವಯನಾಡ್‌ ಸರಕಾರಿ ಶಾಲಾ ಕೊಠಡಿಯಲ್ಲಿ ಹಾವು ಕಚ್ಚಿ ಹತ್ತು ವರ್ಷದ ಬಾಲಕಿ ಮೃತಪಟ್ಟು ನಾಡನ್ನು ನಡುಗಿಸಿದ ಪ್ರಕರಣ ನಡೆದ ಬಳಿಕ ಇನ್ನು ಎಚ್ಚೆತ್ತುಕೊಳ್ಳದ ಅಧಿಕೃತರ ಅನಾಸ್ಥೆಯಿಂದಾಗಿ ಮಂಜೇಶ್ವರ ಉದ್ಯಾವರ ಗೇಟ್‌ ಜಿ.ಎಲ್‌.ಪಿ. ಶಾಲೆಯ ವಿದ್ಯಾರ್ಥಿಗಳು ಹಾವಿನ ಭೀತಿಯಲ್ಲಿ ಕಳೆಯುತ್ತಿದ್ದಾರೆ.

ಈ ಶಾಲೆಯ ವಿದ್ಯಾರ್ಥಿಗಳು ಕಲಿಯುವ ಕೊಠಡಿಯ ಹಿಂಬಾಗ ಕಾಡು ಪೊದರುಗಳಿಂದ ತುಂಬಿದ್ದು, ಜೊತೆಯಾಗಿ ಅಲ್ಲಲ್ಲಿ ದೊಡ್ಡ ದೊಡ್ಡ ಕಲ್ಲುಗಳು ರಾಶಿ ಬಿದ್ದುಕೊಂಡಿದೆ. ಈ ಭಾಗದಲ್ಲಿ ಸ್ಥಳೀಯರು ಹಾಗೂ ಹಳೆ ವಿದ್ಯಾರ್ಥಿಗಳು ಹಾವುಗಳನ್ನು ಹಲವು ಸಲ ಕಂಡಿದ್ದಾರೆ. ಇದಕ್ಕೆ ತಾಗಿಕೊಂಡೇ ಮಕ್ಕಳು ಕಿಟಿಕಿಯ ಭಾಗದಲ್ಲಿ ಕುಳಿತು ಕಲಿಯುತ್ತಿದ್ದಾರೆ. ಈ ಕಿಟಿಕಿಯ ಬಾಗಿಲನ್ನು ಮುಚ್ಚುವ ಸ್ಥಿತಿ ಕೂಡಾ ಇಲ್ಲದಂತಾಗಿದೆ. ರಾತ್ರಿ ವೇಳೆಗಳಲ್ಲೂ ಕಿಟಿಕಿಯ ಭಾಗದಲ್ಲಿ ಹಾವು ಕಂಡಿರುವುದಾಗಿ ಪರಿಸರವಾಸಿಗಳು ಹೇಳುತ್ತಿದ್ದಾರೆ. ಕಿಟಿಕಿಯ ಭಾಗದಲ್ಲೇ ಮಕ್ಕಳು ಶಾಲಾ ಬ್ಯಾಗುಗಳನ್ನು ಕೂಡಾ ಇಡುತ್ತಿದ್ದಾರೆ. ಕಿಟಿಕಿ ಮುಚ್ಚಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾಡು ಪೊದರಿನಲ್ಲಿರುವ ವಿಷ ಪೂರಿತ ಹಾವುಗಳು ರಾತ್ರಿ ಕಾಲದಲ್ಲೂ ಅದೇ ರೀತಿ ತರಗತಿ ನಡೆಯುವ ಸಂದರ್ಭಗಳಲ್ಲೂ ವಿದ್ಯಾರ್ಥಿಗಳ ಹತ್ತಿರ ಸುಳಿಯುವ ಸಾಧ್ಯತೆ ತೋರುತ್ತಿದೆ. ತರಗತಿ ನಡೆಯುವ ಸಂದರ್ಭಗಳಲ್ಲೂ ಹಾವುಗಳನ್ನು ಕಂಡಿರುವ ಬಗ್ಗೆ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.

ಈ ಸ್ಥಳದಲ್ಲಿ ಹಾವನ್ನು ಕಂಡಂತಹ ಸ್ಥಳೀಯರು ಶಾಲಾ ರಕ್ಷಕ ಶಿಕ್ಷಕ ಸಂಘಕ್ಕೆ ಮಾಹಿತಿ ನೀಡಿದ್ದಾರೆ. ಜೊತೆಯಾಗಿ ಮಾಧ್ಯಮ ಪ್ರತಿನಿಧಿಗಳಿಗೂ ಮಾಹಿತಿ ನೀಡಿದ್ದಾರೆ. ಮಂಜೇಶ್ವರ ಗ್ರಾ.ಪಂ.ನ ಮೇಲ್ನೋಟದಲ್ಲಿರುವ ಈ ಶಾಲೆಯ ಬಗ್ಗೆ ಈಗಾಗಲೇ ಅಧಿಕೃತರಿಗೆ ಮಾಹಿತಿಯನ್ನು ನೀಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲವೆಂಬುದಾಗಿ ಶಾಲಾ ಅಧಿಕೃತರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಪಂ. ಅಧ್ಯಕ್ಷರನ್ನು ಸಂಪರ್ಕಿಸಿದಾಗ ನಮಗೆ ಅಂತಹ ಯಾವುದೇ ದೂರು ಲಭಿಸಿಲ್ಲವೆಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ಶಾಲೆಯ ಮಕ್ಕಳಿಗಾಗಿ ಮೀಸಲಿಟ್ಟ ಆಟದ ಮೈದಾನ ಕೂಡಾ ಕಾಡು ಪೊದರುಗಳಿಂದ ತುಂಬಿಕೊಂಡಿದೆ.

ಅವಘಡ ಸಂಭವಿಸಿದ ಬಳಿಕ ಎಚ್ಚೆತ್ತುಕೊಳ್ಳುವ ಚಾಳಿಯನ್ನು ಅಭ್ಯಾಸಮಾಡಿಕೊಂಡಿರುವ ಅಧಿಕೃತರು ಇದೊಂದು ರಾಷ್ಟ್ರ ಮಟ್ಟದ ಸುದ್ದಿಯಾಗುವುದಕ್ಕಿಂತ ಮೊದಲು ಮಕ್ಕಳನ್ನು ವಿಷಪೂರಿತ ಹಾವುಗಳ ಕಾಟದಿಂದ ರಕ್ಷಿಸುವರೇಎಂಬುದು ಇಲ್ಲಿಯ ಸ್ಥಳೀಯರ ಪ್ರಶ್ನೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.