ಇಳುವರಿ ಹೆಚ್ಚಳದ ತಂತ್ರಜ್ಞಾನ ಬಳಸಿ: ಉಷಾರಾಣಿ


Team Udayavani, Jun 19, 2019, 5:31 AM IST

usha-rani

ಕಾಸರಗೋಡು: ಮಾರುಕಟ್ಟೆಯಲ್ಲಿ ತೆಂಗಿನ ಕಾಯಿಯ ಬೆಲೆ ಏರಿಳಿತದಿಂದ ತೊಂದರೆ ಅನುಭವಿಸುತ್ತಿರುವ ತೆಂಗು ಬೆಳೆಗಾರರು ಈ ಸಮಸ್ಯೆಯನ್ನು ಪರಿಹರಿಸಲು ಇಳುವರಿ ಹೆಚ್ಚಳದ ತಂತ್ರಜ್ಞಾನವನ್ನು ಬಳಸಿ ಕೊಳ್ಳಬೇಕೆಂದು ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಹೇಳಿದರು.

ಅವರು ಕಾಸರಗೋಡಿನ ಕೇಂದ್ರ ಬೆಳೆಗಳ ಸಂಶೋಧನಾ ಸಂಸ್ಥೆ (ಸಿಪಿಸಿಆರ್‌ಐ)ಯಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗಾಗಿ ನಡೆಸಿದ ತೆಂಗು ಬೆಳೆಯಲ್ಲಿ ಸುಧಾರಿತ ತಂತ್ರಜ್ಞಾನ ಎಂಬ ಪುನಶ್ಚೇತನ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ತೆಂಗು ಬೆಳೆಗಾರರು ಆಧುನಿಕ ತಂತ್ರಜ್ಞಾನ ಬಳಸಿ ಉತ್ಪಾದನೆ ಮತ್ತು ಆದಾಯವನ್ನು ಹೆಚ್ಚಿಸಿ ಕೊಳ್ಳಬೇಕು. ತೆಂಗು ಸಣ್ಣ ಹಿಡುವಳಿದಾರರ ಬೆಳೆಯಾಗಿರುವುದರಿಂದ ರೈತ ಆಧಾರಿತ ತಂತ್ರಜ್ಞಾನ ವರ್ಗಾವಣೆ ಉಪಕ್ರಮಗಳ ಆಯೋಜನೆ ಅಗತ್ಯವಿದೆ. ತೆಂಗಿನ ಕೃಷಿಯಿಂದ ಆದಾಯವನ್ನು ಹೆಚ್ಚಿಸುವ ತಂತ್ರಜ್ಞಾನ ಪ್ರದರ್ಶಿಸಲು ಮತ್ತು ಸುಧಾರಿತ (ಹೈಬ್ರಿಡ್‌) ತಳಿಯ ತೆಂಗಿನ ಕಾಯಿ ಸಸಿ ಉತ್ಪಾದನೆಯನ್ನು ಹೆಚ್ಚಿಸಲು ದೇಶದ ವಿವಿಧ ಭಾಗಗಳಲ್ಲಿರುವ ಸಿಡಿಬಿ ಅಡಿಯಲ್ಲಿ ಪ್ರದರ್ಶನ ಹಾಗೂ ಸುಧಾರಿತ ತಳಿಯ ಬೀಜ ಸಸಿ ಉತ್ಪಾದನಾ ಫಾರ್ಮ್ಗಳನ್ನು (ಡಿಎಸ್‌ಪಿ ಫಾರ್ಮ್) ಸಜ್ಜುಗೊಳಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದರು.

ತರಬೇತಿಯಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರಗಳನ್ನು ಅವರು ವಿತರಿಸಿದರು. ಅವರು ಸಿಪಿಸಿಆರ್‌ಐನಲ್ಲಿ ವಿವಿಧ ಪ್ರಯೋಗಾಲಯ ಘಟಕಗಳಿಗೆ ಭೇಟಿ ನೀಡಿದರು. ಸಿಡಿಬಿಯ ಆರ್ಥಿಕ ನೆರವಿನೊಂದಿಗೆ ಸಂಸ್ಥೆಯಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ಸಿಡಿಬಿಯಿಂದ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ತೆಂಗು ಕೃಷಿ ವಿಸ್ತರಣೆ, ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿದರು.

ತೆಂಗಿನ ಕಾಯಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಗುಣಮಟ್ಟದ ಸಸಿ ನಾಟಿ ಮತ್ತು ಇಳುವರಿ ಹೆಚ್ಚಳದ ತಂತ್ರಗಳು ಎಂಬ ತರಬೇತಿ ಕೈಪಿಡಿಯನ್ನು ಅವರು ಬಿಡುಗಡೆಗೊಳಿಸಿದರು. ಸಿಪಿಸಿಆರ್‌ಐ ಐಸಿಎಆರ್‌ನ ಪ್ರಭಾರ ನಿರ್ದೇ ಶಕ ಡಾ| ಕೆ. ಮುರಳೀಧರನ್‌ ಅಧ್ಯಕ್ಷತೆ ವಹಿಸಿದ್ದರು.

ವಿಜ್ಞಾನಿ ಡಾ| ತಂಬಾನ್‌ ಸಿ. ತರಬೇತಿ ಕಾರ್ಯಕ್ರಮದ ವರದಿ ಮಂಡಿಸಿದರು. ವಿಜ್ಞಾನಿ ಡಾ| ಶಂಸುದ್ದೀನ್‌ ವಂದಿಸಿದರು. ತೆಂಗಿನಕಾಯಿ ಅಭಿವೃದ್ಧಿ ಮಂಡಳಿ, ಸುಧಾರಿತ ತೆಂಗು ಸಸಿ ಅಭಿವೃದ್ಧಿ ಕೇಂದ್ರದ 20 ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.