ಕೆಎಸ್‌ಆರ್‌ಟಿಸಿ ಡಿಪೋ ಪರಿಸರದಲ್ಲಿ ತ್ಯಾಜ್ಯ ರಾಶಿ

ಆರೋಗ್ಯ ಇಲಾಖೆಯ ಸೂಚನೆ ನಿರ್ಲಕ್ಷ್ಯ

Team Udayavani, Sep 30, 2019, 5:12 AM IST

29KSDE2

ಕಾಸರಗೋಡು: ನಗರದ ಕೆಎಸ್‌ಆರ್‌ಟಿಸಿ ಡಿಪೋ ಪರಿಸರದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ರಾಶಿ ರಾಶಿಯಾಗಿ ಬಿದ್ದುಕೊಂಡಿವೆ. ಡಿಪ್ಪೋದ ಪೂರ್ವ ಭಾಗದಲ್ಲಿ ಪ್ಲಾಸ್ಟಿಕ್‌ ಬಾಟಲಿಗಳು ಸಹಿತ ಪ್ಲಾಸ್ಟಿಕ್‌ ತ್ಯಾಜ್ಯ ತುಂಬಿಕೊಂಡಿರುವುದರಿಂದ ಸಾರ್ವಜನಿಕರು ಹೆಚ್ಚಿನ ತೊಂದರೆ ಅನುಭವಿಸುವಂತಾಗಿದೆ.

ಪ್ಲಾಸ್ಟಿಕ್‌ ಮಾಲಿನ್ಯ ಸಂಸ್ಕರಿಸದಿದ್ದರೆ ಮಾರಕವಾದಂತಹ ರೋಗಗಳಿಗೆ ತುತ್ತಾಗಬಹುದೆಂಬ ಬಗ್ಗೆ ಆರೋಗ್ಯ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿತ್ತಾದರೂ ಇಲ್ಲಿ ಯಾವುದೇ ಪ್ರಯೋಜನವಾಗಲಿಲ್ಲ. ಪ್ಲಾಸ್ಟಿಕ್‌ಮಾಲಿನ್ಯ ಮಣ್ಣಿನೊಂದಿಗೆ ಬೆರೆಯುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದಾಗಿದೆ.

ರಾಜ್ಯದಲ್ಲಿ ಪ್ಲಾಸ್ಟಿಕ್‌ ನಿಷೇಧ ಆದೇಶವು ಜಾರಿಗೆ ಬಂದಿರುವಂತೆಯೇ ಕೆಎಸ್‌ಆರ್‌ಟಿಸಿ ಡಿಪ್ಪೋ ಪರಿಸರದಲ್ಲಿ ಪ್ಲಾಸ್ಟಿಕ್‌ ಮಾಲಿನ್ಯ ರಾಶಿ ಜನಸಾಮಾನ್ಯರಿಗೆ ಹೆಚ್ಚಿನ ಸಮಸ್ಯೆಯಾಗಿ ಪರಿಣಮಿಸಿದೆ. ಕೆಎಸ್‌ಆರ್‌ಟಿಸಿ ನೌಕರರು ಹಾಗೂ ಪ್ರಯಾಣಿಕರು ಕುಡಿಯುವ ನೀರಿನ ಬಾಟಲಿಯನ್ನು ತೆಗದುಕೊಂಡು ಉಪಯೋಗ ನಂತರ ಬಿಸಾಡುವ ಬಾಟಲಿಗಳು ಇದರಲ್ಲಿ ಹೆಚ್ಚಿನವುಗಳಾಗಿವೆ. ಬಸ್‌ ನಿಲ್ದಾಣ ಕೇಂದ್ರದಿಂದ ಸಂಗ್ರಹಿಸುವ ಬಾಟಲಿಗಳು ಸಮರ್ಪಕವಾದ ರೀತಿಯಲ್ಲಿ ಸಂಸ್ಕರಿಸಲು ವ್ಯವಸ್ಥೆ ಇಲ್ಲದಿರುವುದರಿಂದ ಅಲ್ಲಲ್ಲಿ ರಾಶಿ ಹಾಕಲಾಗುತ್ತಿದೆ. ಬಸ್ಸಿನ ಬಿಡಿ ಭಾಗಗಳ ದುರಸ್ತಿ ಕೆಲಸಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಡಿಪ್ಪೋದಲ್ಲಿ ನಿಲ್ಲಿಸಲಾಗುತ್ತಿದೆ.

ಈ ಪ್ರದೇಶದಲ್ಲಿಯೇ ಈ ರೀತಿಯ ಪ್ಲಾಸ್ಟಿಕ್‌ ಮಾಲಿನ್ಯ, ತ್ಯಾಜ್ಯ ರಾಶಿ ಹಾಕಿರುವುದು ನಾಗರಿಕ ಸಮಾಜಕ್ಕೆ ಒಳ್ಳೆಯದಲ್ಲ.

ಮಾತ್ರವಲ್ಲದೆ ಅದರೊಂದಿಗೆ ಆಹಾರದ ತ್ಯಾಜ್ಯ ವಸ್ತುಗಳನ್ನೂ ಹಾಕಲಾಗಿದ್ದು, ಇದನ್ನು ಸೇವಿಸಲು ಬೀದಿನಾಯಿಗಳ ಹಿಂಡು ಕೆಎಸ್‌ಆರ್‌ಟಿಸಿ ಬಸ್‌ ಪರಿಸರದಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿದೆ. ಡಿಪ್ಪೋ ಪ್ರದೇಶವು ಶುಚಿಯಾಗಿರದ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವಾಗಿದೆ.

ಮಾಲಿನ್ಯ ತುಂಬಿಕೊಂಡಿರುವ ಕೆಎಸ್‌ಆರ್‌ಟಿಸಿ ಡಿಪ್ಪೋದ ಸಮೀಪದಲ್ಲಿಯೇ ಬಿದ್ದುಕೊಂಡಿರುವ ಪ್ಲಾಸ್ಟಿಕ್‌ ತುಂಡುಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು, ಕಾಲ್ನಡೆ ಪ್ರಯಾಣಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕಾಗಿದೆ.

ಹೀಗೆ ಪ್ಲಾಸ್ಟಿಕ್‌ ಮಾಲಿನ್ಯ ತುಂಬಿಕೊಂಡಿರುವುದಿಂದ ಸಂಜೆಯ ವೇಳೆಗಳಲ್ಲಿ ಸೊಳ್ಳೆಗಳ ಕಾಟವೂ ಹೆಚ್ಚಾಗಿ ಕಾಣುತ್ತಿವೆ. ಅಲ್ಲದೆ ಪ್ಲಾಸ್ಟಿಕ್‌ ಮಾಲಿನ್ಯದೊಂದಿಗೆ ಆಹಾರ ತ್ಯಾಜ್ಯ ವಸ್ತುಗಳನ್ನು ಹಾಕುವುದರಿಂದ ಡಿಪ್ಪೋ ಪರಿಸರವು ಗಬ್ಬು ವಾಸನೆಯೂ ಬೀರುತ್ತಿದೆ

ಆರೋಗ್ಯ ಸಮಸ್ಯೆ ಆತಂಕ
ಕಾಸರಗೋಡು ಕೆಎಸ್‌ಆರ್‌ಟಿಸಿ ಡಿಪೋದಲ್ಲಿನ ಮಾಲಿನ್ಯ ಸಂಸ್ಕರಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಾಣಬೇಕಾಗಿದೆ. ಇಲ್ಲವಾದರೆ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಕೆಎಸ್‌ಆರ್‌ಟಿಸಿ ಡಿಪ್ಪೋದ ಅಧಿಕಾರಿಗಳು ಹಾಗೂ ನಗರಸಭಾ ಅಧಿಕಾರಿಗಳು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಜನರಿಗೆ ಆರೋಗ್ಯ ತೊಂದರೆ ಕಾಡುವ ಆತಂಕ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.