ತಂತ್ರಜ್ಞಾನದ ಅರಿವಿರಲಿ; ಮಾಹಿತಿಯುಕ್ತ ಸಮಾಜ ನಿರ್ಮಾಣವಾಗಲಿ

ವಿಶ್ವ ದೂರಸಂಪರ್ಕ, ಮಾಹಿತಿ ಸಮಾಜ ದಿನ

Team Udayavani, May 17, 2019, 6:10 AM IST

TELECOMMUNICATION

ಅಂತರ್ಜಾಲ ಮತ್ತು ಸಂವಹನ ತಂತ್ರಜ್ಞಾನಗಳ ಸದ್ಭಳಕೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹುಟ್ಟಿಕೊಂಡ ದಿನವೇ ವಿಶ್ವ ದೂರ ಸಂಪರ್ಕ, ಮಾಹಿತಿ ಸಮಾಜ ದಿನ. ದೂರದ ಊರಿನವರನ್ನು ಸಂಪರ್ಕಿಸಲು ದೂರ ಸಂಪರ್ಕ ನೆರವಾದರೆ, ವಿಶ್ವದಲ್ಲಿ ನಡೆಯುವ ಪ್ರತಿಯೊಂದು ವಿಷಯಗಳು ಜಗತ್ತಿನ ಮೂಲೆಮೂಲೆಗೂ ತಲುಪಿಸಲು ತಂತ್ರಜ್ಞಾನಗಳು ಸಹಕಾರಿ. ಅಭಿವೃದ್ಧಿಯ ಪಥದಲ್ಲಿ ಸಾಗುವಾಗ ಇದರ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡಿರುವುದು ಇಂದಿನ ಅನಿವಾರ್ಯ

ದೂರಸಂಪರ್ಕ ವ್ಯವಸ್ಥೆ ಮತ್ತು ಸಮಾಜದ ನಡುವೆ ಅವಿನಾಭಾವ ಸಂಬಂಧವಿದೆ. ದೂರಸಂಪರ್ಕ ವ್ಯವಸ್ಥೆಯನ್ನೇ ಕೇಂದ್ರವಾಗಿರಿಸಿಕೊಂಡು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವುದನ್ನು ಗಮನಿಸಬಹುದು.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಒಂದಂಶವಾಗಿರುವ ದೂರಸಂಪರ್ಕ ವ್ಯವಸ್ಥೆಯ ಸದುಪಯೋಗವಾಗಬೇಕು ಎನ್ನುವ ಸದುದ್ದೇಶ ಮತ್ತು ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1969ರಿಂದ ಪ್ರತಿ ವರ್ಷ ಮೇ 17ರಂದು ವಿಶ್ವ ದೂರಸಂಪರ್ಕ ದಿನವನ್ನು ಅಚರಿಸಿಕೊಂಡು ಬರಲಾಗುತ್ತಿದೆ.

ಇದರ ಜತೆಯಲ್ಲಿಯೇ ಮೇ 17ರಂದು ವಿಶ್ವ ಮಾಹಿತಿ ಸಮಾಜ ದಿನವನ್ನೂ ಆಚರಿಸಲಾಗುತ್ತದೆ. ಅಂತಾರ್ಜಲ, ಸಾಮಾಜಿಕ ಮಾಧ್ಯಮಗಳು ಅಭಿವೃದ್ಧಿ ಹೊಂದುತ್ತಿರುವ ಈ ಕಾಲದಲ್ಲಿ ಸಮಾಜವು ಮಾಹಿತಿಯುಕ್ತವಾಗಿರಬೇಕು. ತಂತ್ರಜ್ಞಾನಗಳ ಬಗ್ಗೆ ಅರಿವಿರಬೇಕು ಎಂಬುದೇ ಈ ದಿನದ ಆಚರಣೆಯ ಮುಖ್ಯ ಉದ್ದೇಶ.

ಮಾಹಿತಿ ಸಮಾಜದ ವಿಶ್ವ ಸಮಿತಿ
(ವರ್ಲ್ಡ್ ಸಮಿತ್‌ ಆನ್‌ ದಿ ಇನ್‌ಫಾರ್ಮೇಶನ್‌ ಸೊಸೈಟಿ) ಮೇ 17ರಂದು ವಿಶ್ವ ಮಾಹಿತಿ ಸಮಾಜ ದಿನವನ್ನು ಆಚರಿಸುವುದಾಗಿ ಘೋಷಿಸಲು 2005ರಲ್ಲಿ ಯುನೈಟೆಡ್‌ ನೇಶನ್ಸ್‌ನ ಸಾಮಾನ್ಯ ಸಭೆಯನ್ನು ಕರೆಯಿತು. ತಂತ್ರಜ್ಞಾನಗಳ ಅಭಿವೃದ್ಧಿಯ ಮೇಲೆ ಬೆಳಕು ಚೆಲ್ಲುವುದು, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದ ಮಾಹಿತಿಯ ಅರಿವು ಜನರಿಗೆ ಇರಬೇಕು ಎನ್ನುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶ ಎನ್ನುವುದು ಸಾಮಾನ್ಯ ಸಭೆಯ ಅಭಿಪ್ರಾಯವಾಗಿತ್ತು.

ಅನಂತರ 2006ರಲ್ಲಿ ಮೇ 17ರಂದು ಪ್ರತಿ ವರ್ಷ ವಿಶ್ವ ಮಾಹಿತಿ ದಿನವನ್ನು ಆಚರಿಸಲು ನಿರ್ಣಯಿಸಲಾಯಿತು. ಅನಂತರ ಟರ್ಕಿಯ ಅಂಟಾಲ್ಯಾದಲ್ಲಿ ನಡೆದ ಐಟಿಯುನ ಪೂರ್ಣಾಧಿಕಾರ ಸಮಾವೇಶದಲ್ಲಿ ವಿಶ್ವ ದೂರ ಸಂಪರ್ಕ ದಿನ ಮತ್ತು ವಿಶ್ವ ಮಾಹಿತಿ ಸಮಾಜ ದಿನವನ್ನು ಒಟ್ಟಾಗಿ ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸಮಾಜ ದಿನವೆಂದು ಮೇ 17ರಂದು ಆಚರಿಸಲು ತೀರ್ಮಾನಿಸಲಾಯಿತು. ಯುನೈಟೆಡ್‌ ನೇಶನ್ಸ್‌ನ ಪ್ರಕಾರ ಅಂತಾರಾಷ್ಟ್ರೀಯ ದೂರಸಂಪರ್ಕ ಯೂನಿಯನ್‌ ( ಐಟಿಯು) ಸ್ಥಾಪನೆ ಮತ್ತು 1865ರಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಟೆಲಿಗ್ರಾಫ್ ಸಮಾವೇಶದ ಸ್ಮರಣಾರ್ಥವಾಗಿ ವಿಶ್ವ ದೂರಸಂಪರ್ಕ ದಿನವನ್ನು ಆಚರಿಸಲಾಗುತ್ತಿದೆ.

ಉದ್ದೇಶ
ಸುಸ್ಥಿರ ಅಭಿವೃದ್ಧಿಯ ಭಾಗವಾಗಿ ಜನರಿಗೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಲಭ್ಯತೆ ಅತ್ಯಗತ್ಯ. 2020ರೊಳಗೆ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪ್ರತಿಯೊಬ್ಬರಿಗೂ ಅಂತರ್ಜಾಲದ ಲಭ್ಯತೆ ದೊರೆಯಬೇಕು. ಜಗತ್ತಿನಾದ್ಯಂತ ಬಿಲಿಯನ್‌ಗಟ್ಟಲೆ ಮಂದಿಗೆ ಅಂತರ್ಜಾಲದ ಬಗ್ಗೆ ತಿಳಿದಿಲ್ಲ. ಸರಿಯಾದ ದೂರವಾಣಿ ಸಂಪರ್ಕ ಕೂಡ ಇವರಿಗಿಲ್ಲ. ಈ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಸರಕಾರ ಈ ಕೆಲಸ ಮಾಡಲು ಮುಂದಾಗಬೇಕು ಎನ್ನುವ ನಿಟ್ಟಿನಲ್ಲಿ ಈ ವಿಶ್ವ ದೂರಸಂಪರ್ಕ ದಿನವನ್ನು ಆಚರಿಸಲಾಗುತ್ತಿದೆ.

– ಪ್ರಸನ್ನ ಹೆಗಡೆ ಊರಕೇರಿ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.