ಗುರುಪುರ: ಬೈಕ್ ಸವಾರನಿಗೆ ಮೃತ್ಯುವಾದ ವೇಗದೂತ ಬಸ್
Team Udayavani, Mar 19, 2019, 6:38 AM IST
ಗುರುಪುರ: ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಗುರುಪುರದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರರನ್ನು ಮೂಡಬಿದ್ರೆ ಸಮೀಪದ ಬೆಳುವಾಯಿಯ ಮಹೇಹ್ ಲಮಾಣಿ (32) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಸುಮಾರು ಒಂದು ಗಂಟೆ ಸುಮಾರಿಗೆ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮೊದಲು ಕೈಕಂಬಕ್ಕೆ ಹೋಗುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದು ನಂತರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ರಸ್ತೆಯ ಒಂದು ಕಡೆ ಬಿದ್ದರೆ ಸವಾರ ಮತ್ತೊಂದು ಕಡೆ ಬಿದ್ದಿದ್ದರು. ರಸ್ತೆಯ ಮೇಲೆ ಬಿದ್ದ ಮಹೇಶ್ ಅವರ ಮೇಲೆ ಬಸ್ ಚಲಿಸಿದ್ದು, ಅವರ ಮೃತದೇಹ ಛಿದ್ರಛಿದ್ರವಾಗಿದೆ. ಬಜಪೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸಂಚಾರ ಅಸ್ತವ್ಯಸ್ತ: ಗುರುಪುರ ಜಂಕ್ಷನ್ ನಲ್ಲಿ ನಡೆದ ಈ ಅಪಘಾತದಿಂದ ಹೆದ್ದಾರಿಯಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಸಂಚಾರ ಸ್ಥಗಿತವಾಗಿತ್ತು. ನಂತರ ಪೊಲೀಸರು ಪರ್ಯಾಯ ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ