“ಅಭಿವೃದ್ಧಿಗೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯ’
Team Udayavani, Jan 21, 2020, 4:14 AM IST
ಮಹಾನಗರ: ಮಂಗಳೂರು ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ಇಲಾಖೆಗಳ ಸಹ ಕಾರ ಅಗತ್ಯ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರು ನಗರ ಪ್ರಾ ಧಿಕಾರ ಸಭಾಂಗಣದಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಡೆದ ನಗರ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅವರು ಶನಿವಾರ ಮಾತನಾಡಿದರು.
ಮಂಗಳೂರು ಸ್ಮಾರ್ಟ್ಸಿಟಿ ಯೋಜನೆಯು ಯಶಸ್ವಿಯಾಗ ಬೇಕಾದರೆ ಎಲ್ಲ ಇಲಾಖೆಗಳು ಕೈ ಜೋಡಿಸಿ ಕೆಲಸ ಮಾಡಬೇಕು. ಜತೆಗೆ ಯಾವುದೇ ಯೋಜನೆ ಕಾರ್ಯ ರೂಪಕ್ಕೆ ತರುವಾಗ ಜನಸಾಮಾನ್ಯ ರಿಗೆ ಸದುಪಯೋಗ ಆಗುವವಂತೆ ಯೋಗ್ಯವಾದ ರೀತಿಯಲ್ಲಿ ಕಾರ್ಯರೂಪಕ್ಕೆ ತರಬೇಕು. ಕಾಮ ಗಾರಿಯ ಕೆಲಸವನ್ನು ಅರ್ಧಕ್ಕೆ ಸ್ಥಗಿತಗೊಳಿಸಬೇಡಿ ಎಂದು ಸಂಬಂಧಪಟ್ಟ ಅ ಧಿಕಾರಿಗಳಿಗೆ ಅವರು ನಿರ್ದೇಶಿಸಿದರು.
ವಿವಿಧ ಕಾಮಗಾರಿ ಪೂರ್ಣ
ಈಗಾಗಲೇ ಈ ಯೋಜನೆಯ ಅನ್ವಯ 1.91 ಕೋಟಿ ರೂ. ವೆಚ್ಚದಲ್ಲಿ ಎಲ್ಇಡಿ ಲೈಟ್ ಆಳವಡಿಸಲಾಗಿದೆ. 0.75 ಕೋಟಿ ರೂ. ವೆಚ್ಚದಲ್ಲಿ ಹಂಪನಕಟ್ಟೆಯ ಕ್ಲಾಕ್ ಟವರ್ ನಿರ್ಮಾಣಗೊಂಡಿದೆ. 6.16 ಕೋ. ರೂ. ವೆಚ್ಚದಲ್ಲಿ ನೆಹರೂ ಮೈದಾನದಿಂದ ಹಂಪನಕಟ್ಟೆ ಕ್ಲಾಕ್ ಟವರ್, ಎ.ಬಿ. ಶೆಟ್ಟಿ ವೃತ್ತದವರೆಗೆ ಸ್ಮಾರ್ಟ್ ರಸ್ತೆಯು ಕಾಮಗಾರಿಯಲ್ಲಿದೆ. ಎಬಿಡಿ ಪ್ರದೇಶಗಳಲ್ಲಿ ಯುಜಿಡಿ ಮತ್ತು ಸ್ಮಾರ್ಟ್ರೋಡ್, ಮಾಹಿತಿ ಸಂವಹನ ಮತ್ತು ತಂತ್ರಜ್ಞಾನದಿಂದ ಕಸಬಾ-ಬೆಂಗ್ರೆ ಪ್ರಾಥಮಿಕ ಶಾಲೆ ಮತ್ತು ಬೆಂಗ್ರೆ ಪ್ರೌಢಶಾಲೆಗಳಿಗೆ ಇ-ಸ್ಮಾರ್ಟ್ ಸ್ಕೂಲ್, ಮಾಸ್ಟರ್ ಪ್ಲಾನ್ ಮೂಲಕ ರೈಲು ನಿಲ್ದಾಣ, ಮಿಲಾಗ್ರಿಸ್ ಚರ್ಚ್, ವೆನಲಾಕ್ ಆಸ್ಪತ್ರೆಯವರೆಗೆ ರಸ್ತೆ ಅಗಲೀಕರಣ ಮತ್ತು ಹಳೆ ಬಸ್ ನಿಲ್ದಾಣಗಳ ಅಭಿವೃದ್ಧಿ, ಹಂಪನಕಟ್ಟೆಯ ಹತ್ತಿರ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ವ್ಯವಸ್ಥೆ, ರಥಬೀದಿ ಮತ್ತು ಶ್ರೀ ವೆಂಕಟರಮಣ ದೇವಸ್ಥಾನ ಪ್ರದೇಶದ ಮರು ಸುಧಾರಣೆ, ವೆನಾಕ್ ಆಸ್ಪತ್ರೆ ಹಾಗೂ ಲೇಡಿಗೋಶನ್ ಮಾಸ್ಟರ್ ಪ್ಲಾನ್ ಯೋಜನೆಯನ್ನು ರೂಪಿಸುವ ಮೂಲಕ ಉನ್ನತೀಕರಣ, ಮಂಗಳಾ ಸ್ಟೇಡಿಯಂ ಅಭಿವೃದ್ಧಿ, ಉರ್ವ ಮಾರ್ಕೆಟ್ ಹತ್ತಿರ ಕಬ್ಬಡ್ಡಿ ಹಾಗೂ ಶೆಟಲ್ ಬ್ಯಾಡ್ಮಿಟನ್ ಕ್ರೀಡೆಗೆ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಶಾಸಕ ಡಾ| ಭರತ್ ಶೆಟ್ಟಿ ವೈ. , ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಸ್ಮಾರ್ಟ್ಸಿಟಿ ಲಿ. ಸ್ವತಂತ್ರ ನಿರ್ದೇಶಕಿ ಅಂಬಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮೂಲ ಸೌಕರ್ಯ ಒದಗಿಸಲು ಕ್ರಮ
ಸ್ಮಾರ್ಟ್ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಮಾತ ನಾಡಿ, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರದೇಶ ಆಧಾರಿತ ಅಭಿ ವೃದ್ಧಿಯ ಮೂಲಕ ನಗರಾವೃದ್ಧಿ, ಮರು ಸುಧಾರಣೆ, ಹಸುರು ಪ್ರದೇಶದ ಅಭಿವೃದ್ಧಿ ಈ ರೀತಿ ವಿಂಗಡಣೆ ಮಾಡುವ ಮೂಲಕ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಾನ್ ಸಿಟಿ ಉತ್ತೇಜನದ ಮೂಲಕ ಮಾಹಿತಿ ತಂತ್ರಜ್ಞಾನ ಅಳವಡಿಕೆ ಜತೆಗೆ ನಗರದ ಜನರಿಗೆ ಮೂಲ ಸೌಕರ್ಯ ಸೇವೆಗಳನ್ನು ಒದಗಿಸುವಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ