ಹೈನುಗಾರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘ

ಎಡಪದವು ಹಾಲು ಉತ್ಪಾದಕರ ಸಹಕಾರ ಸಂಘ

Team Udayavani, Feb 25, 2020, 5:22 AM IST

majji-32

ಎಡಪದವು ಹಾಲು ಉತ್ಪಾದಕರ ಸಹಕಾರ ಸಂಘವು ಆರಂಭವಾಗಿ 35 ವರ್ಷಗಳೇ ಕಳೆದಿವೆ. ಆರಂಭ ಕಾಲದಿಂದಲೂ ಇಂದಿನವರೆಗೆ ಪ್ರದೇಶ ಹೈನುಗಾರರಿಗೆ ಮತ್ತು ಕೃಷಿಕರಿಗೆ ಸೊದ್ಯೋಗ ಒದಗಿಸುವುದರ ಜತೆಗೆ ಆರ್ಥಿಕ ಪುನಶ್ಚೇತನಕ್ಕೆ ಒತ್ತು ನೀಡಲಾಗುತ್ತಿದೆ. ಸಂಘವು ಸಾಮಾಜಿಕ ಕಾರ್ಯಚಟುವಟಿಕೆಗಳಿಂದ ವ್ಯಾಪ್ತಿಯಲ್ಲಿ ಗುರುತಿಸಿಕೊಂಡಿದೆ.

ಕೈಕಂಬ: ಎಡಪದವು ಹಾಲು ಉತ್ಪಾದಕರ ಸಹಕಾರ ಸಂಘ 1985ರಲ್ಲಿ ಸ್ಥಾಪನೆಗೊಂಡಿತು. ಬಡಗ ಎಡಪದವು, ತೆಂಕ ಎಡಪದವು ಗ್ರಾಮಗಳು ಈ ಸಂಘದ ಕಾರ್ಯಕ್ಷೇತ್ರ ವ್ಯಾಪ್ತಿಗೆ ಬರುತ್ತವೆ.

ಸದಸ್ಯರಿಂದ ಉತ್ತಮ ಗುಣಮಟ್ಟದ ಹಾಲನ್ನು ಯೋಗ್ಯ ಬೆಲೆಗೆ ಖರೀದಿಸಿ ಅದನ್ನು ಒಕ್ಕೂಟಕ್ಕೆ ಮಾರಾಟ ಮಾಡುವುದು, ಸದಸ್ಯರಿಗೆ ಹಾಲು ಉತ್ಪಾದನೆ ಹೆಚ್ಚಿಸುವುದು, ಸಮತೋಲನ ಪಶು ಆಹಾರ, ವೈದ್ಯಕೀಯ ಸೇವೆ ಒದಗಿಸುವುದು. ಸದಸ್ಯರು ಆರ್ಥಿಕ ಅಭಿವೃದ್ಧಿಗೆ ಸಹಕಾರ ನೀಡುವುದು. ಸದಸ್ಯರಿಗೆ ಸಮಯಕ್ಕೆ ಸರಿಯಾಗಿ ತರಬೇತಿ ಕಾರ್ಯಕ್ರಮ ನೀಡಿ ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಲು ಸಹಕರಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ.

ಸಂಘ ಆರಂಭದಿಂದಲೂ ತೆಂಕ ಎಡಪದವು ಗ್ರಾ.ಪಂ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತ ಬಂದಿದೆ. ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗದ ಬಗ್ಗೆ ಮನವಿಯನ್ನು ಸಲ್ಲಿಸಿದೆ.

ಈ ಸಂಘ 2017-18ರಲ್ಲಿ 3,86,416 ರೂ. ಲಾಭ ಗಳಿಸಿದ್ದು ಸದಸ್ಯ ರೈತರಿಗೆ 1,84,610 ರೂ. ಬೋನಸ್‌ ನೀಡಿದೆ. 2018-19ರಲ್ಲಿ 3,01,441 ರೂ. ಲಾಭ ಗಳಿಸಿದ್ದು ಸದಸ್ಯ ರೈತರಿಗೆ 1,44,014 ರೂ. ಬೋನಸ್‌ ನೀಡಿದೆ. ಕಳೆದ 2 ವರ್ಷಗಳಿಂದ ಸಂಘ ಕಂಪ್ಯೂಟರೀಕರಣಗೊಂಡಿದ್ದು ಹಾಲಿನ ಗುಣಮಟ್ಟವನ್ನು ಡಿಗ್ರಿ ಹಾಗೂ ಪ್ಯಾಟ್‌ನ್ನು ಮಾಪನ ಮಾಡಿ, ದರ ನಿಗದಿಗೊಳಿಸಲಾಗುತ್ತದೆ.

ಅಧ್ಯಕ್ಷರು
1985ರಿಂದ ಶ್ರೀಧರ್‌ ರಾವ್‌, 1998ರಿಂದ ಎಲ್‌.ಐ . ಸೋನ್ಸ್‌, ಶಿವ ಶೆಟ್ಟಿ, ವಾಸುದೇವ ನಾಯಕ್‌, ಆನಂದ ದೇವಾಡಿಗ, 2008ರಿಂದ ಆಲ್ವಿನ್‌ ಜೆ. ಪಿಂಟೋ, 2016ರಿಂದ ಮಾಧವ ದೇವಾಡಿಗ.

ಕಾರ್ಯದರ್ಶಿಗಳು
ಕಾರ್ಯದರ್ಶಿಗಳಾಗಿ 1985ರಿಂದ ಪಿ. ಜಯರಾಮ್‌, 2008 ರಿಂದ ನವೀನ ಕುಮಾರ್‌ ಮತ್ತು ತುಳಸಿ, 2016ರಿಂದ ಮನೋಜ್‌ ಕುಮಾರ್‌.

500 ಲೀ. ಹಾಲು ಉತ್ಪಾದನೆ
ಸಂಘವು ಸ್ಥಾಪನೆಯಾದ ಸಮಯದಲ್ಲಿ 57 ಸದಸ್ಯರನ್ನು ಹೊಂದಿದ್ದು, 1, 090ರೂ. ಪಾಲು ಬಂಡವಾಳದೊಂದಿಗೆ ಆರಂಭವಾಗಿತ್ತು. ದಿನಕ್ಕೆ 20ಲೀ. ಹಾಲು ಉತ್ಪಾದನೆಯಾಗಿತ್ತು. ಪ್ರಸ್ತುತ 25ಸಾವಿರ ರೂ. ಪಾಲು ಬಂಡವಾಳವನ್ನು ಹೊಂದಿದೆ. 226 ಸದಸ್ಯರನ್ನು ಹೊಂದಿದ್ದು ಇದರಲ್ಲಿ 53 ಮಹಿಳಾ ಸದಸ್ಯರನ್ನು ಹೊಂದಿದೆ. ಈ ಸಂಘ ದಿನಕ್ಕೆ 400ರಿಂದ 500ಲೀ. ಹಾಲನ್ನು ಉತ್ಪಾದಿಸುತ್ತಿದೆ.

ಆಧುನಿಕ ಹೈನುಗಾರಿಕೆ ತಂತ್ರಜ್ಞಾನ ಬಳಕೆ ಹಾಗೂ ಮಾಹಿತಿ ನೀಡುವ ಕಾರ್ಯಕ್ರಮ , ರೈತರಿಗೆ ಕೃಷಿಯ ಜತೆ ಹೈನುಗಾರಿಕೆಗೆ ಪ್ರೋತ್ಸಾಹ, ಸರಕಾರದ ಸವಲತ್ತುಗಳ ಸದ್ಬಳಕೆ , ಹಾಲು ಉತ್ಪಾದನೆಯ ಪ್ರಮಾಣ ಹೆಚ್ಚಿಸಿ ಅಧಿಕ ಲಾಭ ಗಳಿಸಿ, ಸದಸ್ಯರಿಗೆ ಇನ್ನಷ್ಟು ಸವಲತ್ತು ಹಾಗೂ ಸಹಕಾರ ನೀಡುವ ಬಗ್ಗೆ ಚಿಂತಿಸಲಾಗುತ್ತಿದೆ.
ಮಾಧವ ದೇವಾಡಿಗ,ಅಧ್ಯಕ್ಷರು, ಎಡಪದವು ಹಾಲು ಉತ್ಪಾದಕರ ಸಹಕಾರ ಸಂಘ

-  ಸುಬ್ರಾಯ ನಾಯಕ್‌, ಎಕ್ಕಾರು

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.