ಕಾರು, ಟೆಂಪೋಗೆ ಟಿಪ್ಪರ್ ಢಿಕ್ಕಿ
Team Udayavani, Apr 20, 2019, 9:36 AM IST
ಗುರುಪುರ: ಅತಿವೇಗದಿಂದ ಬಂದ ಟಿಪ್ಪರ್ ಲಾರಿಯೊಂದು ಟೆಂಪೋ ಹಾಗೂ ಕಾರಿಗೆ ಗುದ್ದಿ ಬಳಿಕ ಮಗುಚಿಬಿದ್ದ ಘಟನೆ ಗುರುಪುರ ಕುಕ್ಕುದಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದೆ.
ಗುರುಪುರದಿಂದ ಜಲ್ಲಿಹುಡಿಯನ್ನು ತುಂಬಿಸಿಕೊಂಡು ವಾಮಂಜೂರಿನತ್ತ ಸಾಗುತ್ತಿದ್ದ ಟಿಪ್ಪರ್, ಇಂಟರ್ಲಾಕ್ ಹೇರಿಕೊಂಡು ಎದುರಿನಿಂದ ಬರುತ್ತಿದ್ದ ಟೆಂಪೋಗೆ ಗುದ್ದಿದೆ. ಬಳಿಕ ಮುಂದೆ ಸಾಗಿ ಕಾರಿಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಟಿಪ್ಪರ್ನ ಟಯರ್ ಎಂಡ್ ತುಂಡಾಗಿ ಮಗುಚಿಬಿದ್ದಿತು. ಟೆಂಪೋ ಹಾಗೂ ಕಾರು ಜಖಂಗೊಂಡಿದೆ. ಕಾರಿನ ಚಾಲಕ ಗಂಜಿಮಠದ ಬಾಲಕೃಷ್ಣ ಶೆಟ್ಟಿ ಅವರಿಗೆ ತರಚು ಗಾಯಗಳಾಗಿವೆ.
ಟಿಪ್ಪರ್ನಲ್ಲಿದ್ದ ವಾಮಂಜೂರಿನ ವ್ಯಕ್ತಿ ಹೊರಗೆ ಜಿಗಿದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸುಮಾರು ಅರ್ಧಗಂಟೆ ಟ್ರಾಫಿಕ್ ಜಾಂ ಉಂಟಾಗಿತ್ತು. ಬಜಪೆ ಪೊಲೀಸರು ಧಾವಿಸಿ ಕ್ರೇನ್ ಮೂಲಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ