ಕೆಥೋಲಿಕ್ ಶಿಕ್ಷಣ ಮಂಡಳಿ: ಕಾರ್ಯದರ್ಶಿ ಪದಗ್ರಹಣ
Team Udayavani, Jun 24, 2018, 12:36 PM IST
ಮಹಾನಗರ : ವಂ| ಆ್ಯಂಟನಿ ಮೈಕಲ್ ಶೇರಾ ಅವರು ಮಂಗಳೂರು ಧರ್ಮ ಪ್ರಾಂತ್ಯದ ಕೆಥೋಲಿಕ್ ಶಿಕ್ಷಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಪದಗ್ರಹಣಗೈದರು. ಕೆಥೋಲಿಕ್ ಶಿಕ್ಷಣ ಮಂಡಳಿಯ ಅಧ್ಯಕ್ಷ ವಂ| ಡಾ| ಅಲೋಶಿಯಸ್ ಪೌಲ್ ಡಿ’ಸೋಜಾ, ಉಪಾಧ್ಯಕ್ಷ ವಂ| ಡೆನಿಸ್ ಮೊರಾಸ್ ಅವರು ವಂ| ಆ್ಯಂಟನಿ ಮೈಕಲ್ ಶೇರಾ ಅವರನ್ನು ಶಿಕ್ಷಣ ಮಂಡಳಿಯ ಕಾರ್ಯದರ್ಶಿಯನ್ನಾಗಿ
ನೇಮಕ ಮಾಡಿದ ಆದೇಶವನ್ನು ಓದಿದ ಬಳಿಕ ನೂತನ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯದರ್ಶಿ ವಂ| ಜೆರಾಲ್ಡ್ ಡಿ’ಸೋಜಾ ಅವರು ಮಂಡಳಿಯ ಕಡತಗಳನ್ನು ಹಸ್ತಾಂತರಿಸಿದರು. ನೂತನ ಕಾರ್ಯದರ್ಶಿ ವಂ| ಶೇರಾ ಮಾತನಾಡಿ, ಈ ಸಂಸ್ಥೆಯಲ್ಲಿ ಹಿಂದೆ ಉಪಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುವೆ. ಆದರೆ 30 ವರ್ಷಗಳ ಹಿಂದಿನ ಪರಿಸ್ಥಿತಿ ಈಗಿಲ್ಲ. ಪ್ರಸ್ತುತ ಆಡಳಿತವನ್ನು ನಡೆಸುವುದು ಅಷ್ಟು ಸುಲಭವಲ್ಲ. ಹಿರಿಯರು ನನ್ನ ಮೇಲಿನ ವಿಶ್ವಾಸದಿಂದ ಈ ಮಹತ್ತರವಾದ ಜವಾಬ್ದಾರಿಯನ್ನು ನೀಡಿದ್ದಾರೆ. ಎಲ್ಲರ ಸಹಕಾರದಿಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುತ್ತೇನೆ ಎಂದರು.
ಅಪಾರ ಅನುಭವಿ
ಅಧ್ಯಕ್ಷತೆ ವಹಿಸಿದ್ದ ವಂ| ಡೆನಿಸ್ ಮೊರಾಸ್ ಮಾತನಾಡಿ, ಶೇರಾ ಅವರು ಮಂಡಳಿಯ ಒಳ ಹೊರಗು ಬಲ್ಲವರು. ಅನೇಕ ಶಿಕ್ಷಣ ಸಂಸ್ಥೆಗಳ ಸಂಚಾಲಕರಾಗಿಯೂ ಅಪಾರ ಅನುಭವ ಹೊಂದಿದ್ದಾರೆ ಎಂದರು. ಆಡಳಿತ ಮಂಡಳಿಯ ಸದಸ್ಯ ವಂ| ಆ್ಯಂಟನಿ ಪ್ರಕಾಶ್ ಮೊಂತೆರೋ ನೂತನ ಕಾರ್ಯದರ್ಶಿಯವರನ್ನು ಪರಿಚಯಿಸಿ ಆಡಳಿತ ಮಂಡಳಿ ಸದಸ್ಯರ ಹಾಗೂ ಎಲ್ಲ ಶಿಕ್ಷಣ ಸಂಸ್ಥೆಗಳ ಪರವಾಗಿ ಶುಭಕೋರಿ ಸಹಕಾರ ನೀಡುವ ಭರವಸೆ ನೀಡಿದರು. ನಿಕಟಪೂರ್ವ ಕಾರ್ಯದರ್ಶಿ ವಂ| ಜೆರಾಲ್ಡ್ ಡಿ’ಸೋಜಾ ಸ್ವಾಗತಿಸಿ, ಆಡಳಿತ ಮಂಡಳಿಯ ಸದಸ್ಯೆ ಡಾ| ಪ್ರಸಿಲ್ಲಾ ಡಿ’ಸೋಜಾ ವಂದಿಸಿದರು.
ಪದುವಾ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಫ್ರಾನ್ಸಿಸ್ ಡಿ’ಕುನ್ಹಾ ನಿರ್ವಹಿಸಿದರು. ಮಂಗಳೂರು ಧರ್ಮಪ್ರಾಂತ್ಯದ ಕೆಥೋಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೆ 8 ಕಾಲೇಜುಗಳು, 11 ಪಿ.ಯು. ಕಾಲೇಜುಗಳು, 43 ಹೈಸ್ಕೂಲ್ ಗಳು, 74 ಹೈಯರ್ ಪ್ರೈಮರಿ ಸ್ಕೂಲ್ ಗಳು, 24 ಆಂ.ಮಾ. ಶಾಲೆಗಳು ಹಾಗೂ ಕಾಸರಗೋಡು ಜಿಲ್ಲೆಯ 14 ಶಾಲೆಗಳು ಒಳಪಡುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ