ನೇತ್ರಾವತಿ ಸೇತುವೆ-ಕಣ್ಣೂರು ರಿಂಗ್‌ ರಸ್ತೆ ನಿರ್ಮಾಣಕ್ಕೆ ಎದುರಾಗಿದೆ ಜಾಗದ ಸಮಸ್ಯೆ

ಅಡಕತ್ತರಿಯಲ್ಲಿ ಬಹು ನಿರೀಕ್ಷಿತ ಯೋಜನೆ

Team Udayavani, Jan 14, 2020, 5:40 AM IST

24

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರಿಂದ ರಾಷ್ಟ್ರೀಯ ಹೆದ್ದಾರಿ 75 ಅನ್ನು ಸಂಪರ್ಕಿಸುವ ನೇತ್ರಾವತಿ ಸೇತುವೆ- ಕಣ್ಣೂರು ರಿಂಗ್‌ ರಸ್ತೆ ನಿರ್ಮಾ ಣಕ್ಕೆ ಇದೀಗ ಭೂಮಿ ಲಭ್ಯತೆ ಸಮಸ್ಯೆ ಎದುರಾಗಿದ್ದು, ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಬಹು ನಿರೀಕ್ಷಿತ ಯೋಜನೆಯು ಅಡಕತ್ತರಿಯಲ್ಲಿ ಸಿಲುಕಿದೆ.

ನೇತ್ರಾವತಿ ನದಿ ಪಾತ್ರದಲ್ಲಿಯೇ 6.5 ಕಿ.ಮೀ. ಉದ್ದಕ್ಕೆ ದ್ವಿಪಥ ರಸ್ತೆ ನಿರ್ಮಾಣ ಯೋಜನೆ ಇದಾಗಿದ್ದು, ಈ ರಿಂಗ್‌ ರಸ್ತೆ ನಿರ್ಮಾಣಕ್ಕೆ ಬಹುತೇಕ ಕಡೆ ಜಮೀನು ಖಾಸಗಿ ಮೂಲಕವೇ ಹಾದು ಹೋಗ ಬೇಕಾ ಗಿರುವ ಕಾರಣ ಯೋಜನೆ ಅನುಷ್ಠಾನಕ್ಕೆ ಭೂಸ್ವಾಧೀನವೇ ದೊಡ್ಡ ಸಮಸ್ಯೆಯಾಗಿದೆ.

ಜಪ್ಪಿನಮೊಗರುನಲ್ಲಿ ಉಳ್ಳಾಲ ಸೇತುವೆಯಿಂದ ನದಿ ಬದಿಯಿಂದ ಪ್ರಾರಂಭವಾಗಿ ಕಣ್ಣೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ 30 ಅಡಿ ಅಗಲದ ಈ ಯೋಜನೆಗೆ 20 ಕೋಟಿ ರೂ. ವೆಚ್ಚ ಅಂದಾಜಿಸಲಾಗಿತ್ತು. ಯೋಜನೆ ಕಾರ್ಯಗತಗೊಂಡರೆ ತೊಕ್ಕೊಟ್ಟು ಕಡೆಯಿಂದ ಬೆಂಗಳೂರು, ಚಿಕ್ಕಮಗ ಳೂರು ಕಡೆಗೆ ಹೋಗುವ ವಾಹನಗಳು ಕಣ್ಣೂರಿಗೆ ಬಂದು ಮುಂದೆ ರಾ.ಹೆ.75 ಮೂಲಕ ಮುಂದಕ್ಕೆ ಸಾಗಲಿದೆ. ಇದರಿಂದಾಗಿ ತಲಪಾಡಿ ಕಡೆಯಿಂದ ಬಿ.ಸಿ.ರೋಡ್‌, ಬೆಳ್ತಂಗಡಿ, ಚಿಕ್ಕಮಗಳೂರು ಹಾಗೂ ಬಿ.ಸಿ.ರೋಡ್‌ ಮೂಲಕ ಬೆಂಗಳೂರಿಗೆ ಸಾಗುವ ವಾಹನಗಳು ಪಂಪ್‌ವೆಲ್‌ಗೆ ಬರಬೇಕಾದ ಆವಶ್ಯಕತೆ ಇರುವುದಿಲ್ಲ.

ಜೆ.ಆರ್‌. ಲೋಬೋ ಅವರು ಶಾಸಕರಾಗಿದ್ದ ಸಂದರ್ಭ ಈ ಯೋಜನೆ ಪ್ರಸ್ತಾವನೆಗೆ ಬಂದಿತ್ತು. ಆಗ ಲೋಕೋಪಯೋಗಿ ಸಚಿವರಾಗಿದ್ದ ಮಹಾದೇವಪ್ಪ ಅವರು ಈ ಯೋಜನೆ ಬಗ್ಗೆ ಆಸಕ್ತಿ ತೋರ್ಪಡಿಸಿದ್ದು, ಸಮೀಕ್ಷೆ ಹಾಗೂ ಸಾಧ್ಯತಾ ವರದಿ ಸಿದ್ಧಪಡಿಸಲು ಸೂಚಿಸಿದ್ದರು. ಲೋಕೋಪಯೋಗಿ ಇಲಾಖೆಯವರ ಜತೆಗೆ ಲೋಬೋ ಅವರು ಪ್ರಾಥಮಿಕವಾಗಿ ಪರಿಶೀಲನೆ ನಡೆಸಿದ್ದರು. ಆದರೆ ಭೂಸ್ವಾಧೀನ ಸಹಿತ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಯೋಜನೆ ನನೆಗುದಿಯಲ್ಲಿದೆ.

ಮೂರು ಹೆದ್ದಾರಿಗಳಿಗೆ ಸಂಪರ್ಕ
ನೇತ್ರಾವತಿ ಸೇತುವೆ- ಕಣ್ಣೂರು ರಸ್ತೆ ರಿಂಗ್‌ ರೋಡ್‌ ಯೋಜನೆ ಕಾರ್ಯಗತಗೊಂಡರೆ ಮೂರು ಹೆದ್ದಾರಿಗಳ ಸಂಪರ್ಕ ಸೇತುವಾಗಲಿದೆ.

ಪಡೀಲ್‌ ಸಮೀಪ ರಾಷ್ಟ್ರೀಯ ಹೆದ್ದಾರಿ 75ರ ಬಳಿಯಿಂದ ಕನ್ನಗುಡ್ಡೆ ಮೂಲಕ ಕುಲಶೇಖರವರೆಗೆ 5 ಕೋ.ರೂ. ವೆಚ್ಚದ ರಿಂಗ್‌ ರೋಡ್‌ ರಸ್ತೆ ನಿರ್ಮಾಣ ಯೋಜನೆಗೆ ಶಾಸಕ ವೇದವ್ಯಾಸ ಕಾಮತ್‌ ಶಿಲಾನ್ಯಾಸ ನೆರವೇರಿಸಿದ್ದಾರೆ. ನೇತ್ರಾವತಿ ಸೇತುವೆ- ಕಣ್ಣೂರು ರಸ್ತೆ ರಿಂಗ್‌ ರೋಡ್‌ ಯೋಜನೆಯೂ ಕಾರ್ಯಗತಗೊಂಡರೆ ನೇತ್ರಾವತಿ ಸೇತುವೆಯಿಂದ ಕುಲಶೇಖರದವರೆಗೆ ರಸ್ತೆ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿಗಳಾದ 66, 75 ಹಾಗೂ 169ರ ನಡುವೆ ಸಂಪರ್ಕವೇರ್ಪಡಲಿದೆ. ಮೂಡುಬಿದಿರೆ ಕಡೆಯಿಂದ ತೊಕ್ಕೊಟ್ಟು, ಉಳ್ಳಾಲ, ಕೇರಳ ಕಡೆಗೆ ಹೋಗುವ ವಾಹನಗಳು ಮಂಗಳೂರು ನಗರಕ್ಕೆ ಪ್ರವೇಶಿಸದೆ ಕಣ್ಣೂರು ಮೂಲಕ ನೇತ್ರಾವತಿ ಸೇತುವೆಗೆ ಬಂದು ಸಾಗಬಹುದಾಗಿದೆ. ಈ ಹಾದಿಯಲ್ಲಿ ಬರುವ ಪ್ರದೇಶಗಳು ಕೂಡ ಅಭಿವೃದ್ಧಿಯಾಗಲಿದ್ದು ಹಾಗೂ ಪ್ರವಾಸೋದ್ಯಮಕ್ಕೂ ಪೂರಕವಾಗಲಿದೆ.

ಜಾಗ ಹೊಂದಿಸಿಕೊಳ್ಳಲು ಪ್ರಯತ್ನ
ಉಳ್ಳಾಲ ಸೇತುವೆಯಿಂದ ಕಣ್ಣೂರುವರೆಗೆ ನೇತ್ರಾವತಿ ನದಿಪಾತ್ರದಲ್ಲಿ ರಸ್ತೆ ನಿರ್ಮಾಣ ಯೋಜನೆ ಕಾರ್ಯಗತಗೊಳಿಸುವ ಬಗ್ಗೆ ಈಗಾಗಲೇ ಪ್ರಯತ್ನ ಮುಂದುವರಿದಿದೆ. ಯೋಜನೆ ಅನುಷ್ಠಾನವಾಗುವ ಬಹುತೇಕ ಪ್ರದೇಶ ಖಾಸಗಿ ಜಮೀನು ಆಗಿರುವುದರಿಂದ ಜಾಗ ಹೊಂದಿಸಿಕೊಳ್ಳುವ ಸಮಸ್ಯೆ ಎದುರಾಗಿದೆ. ಖಾಸಗಿಯವರ ಮನವೊಲಿಸಿ ಜಾಗ ಹೊಂದಿಸಿಕೊಳ್ಳಲು ಪ್ರಯತ್ನಿಸಲಾಗುವುದು. ಒಂದೊಮ್ಮೆ ಜಾಗ ಲಭ್ಯವಾಗದಿದ್ದರೆ ಯೋಜನೆ ಕಾರ್ಯಗತಗೊಳ್ಳಲು ಸಮಸ್ಯೆಯಾಗುತ್ತದೆ.
– ವೇದವ್ಯಾಸ ಕಾಮತ್‌, ಶಾಸಕರು ಮಂಗಳೂರು ದಕ್ಷಿಣ ಕ್ಷೇತ್ರ

ಭೂ ಸ್ವಾಧೀನ ಸಮಸ್ಯೆ
ಶಾಸಕ ವೇದವ್ಯಾಸ ಕಾಮತ್‌ ಅವರು ಈ ಯೋಜನೆಯನ್ನು ಮುಂದುವರಿಸುವ ಬಗ್ಗೆ ಆಸಕ್ತಿ ವಹಿಸಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು. ಇದರಂತೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದರು. ಆದರೆ ಈ ರಸ್ತೆ ಬಹುತೇಕ ಖಾಸಗಿ ಜಮೀನುಗಳಲ್ಲಿ ಹಾದು ಹೋಗುತ್ತಿರುವುದರಿಂದ ಅವರಿಂದ ಜಾಗ ಪಡೆದುಕೊಳ್ಳಬೇಕಾಗಿದೆ. ಆದರೆ ಈಗ ಭೂ ಸ್ವಾಧೀನ ಸಮಸ್ಯೆ ಉಂಟಾಗಿರುವುದರಿಂದ ಯೋಜನೆಗೆ ತೊಡಕಾಗಿದೆ. ಜಾಗ ಲಭ್ಯವಾಗದಿದ್ದರೆ ಯೋಜನೆಯನ್ನು ಕೈಬಿಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

-  ಕೇಶವ ಕುಂದರ್‌

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.