ಕರಾವಳಿ ಅಪರಾಧ ಸುದ್ದಿಗಳು


Team Udayavani, Mar 18, 2019, 5:17 AM IST

crime-news-symbolic-750.jpg

ಮಂಗಳೂರು: ಕಲ್ಲಿನಿಂದ ಜಜ್ಜಿ ಅಪರಿಚಿತ ವ್ಯಕ್ತಿಯ  ಕೊಲೆ
ಮಂಗಳೂರು: ನಗರದ ಅಜೀಜುದ್ದೀನ್‌ ರಸ್ತೆ ಬದಿಯ ಟೆಂಪೋ ಪಾರ್ಕಿಂಗ್‌ ಜಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ  ರವಿವಾರ ಬೆಳಗ್ಗೆ  ಪತ್ತೆಯಾಗಿದೆ.
ಕೊಲೆಯಾದ ವ್ಯಕ್ತಿ ಸುಮಾರು 35ರಿಂದ 40 ವರ್ಷ ಪ್ರಾಯದವ ರಾಗಿದ್ದು, ಅವರ ಕೈಯ ತೋಳಿನಲ್ಲಿ “ಜಗ್ಗರಾವ್‌’ ಎಂದು ಹಚ್ಚೆ ಹಾಕಲಾ ಗಿದೆ. ಬೇರೆ   ಮಾಹಿತಿ ಲಭಿಸಿಲ್ಲ.  ರವಿ ವಾರ ಬೆಳಗ್ಗೆ 9 ಗಂಟೆಗೆ  ಮೃತ ದೇಹ ಕಂಡು ಬಂದಿದೆ.  ಕೊಲೆಗೆ  ಬಳಸಿದ್ದೆನ್ನಲಾದ ದೊಡ್ಡ ಕಲ್ಲು  ಭುಜದ ಭಾಗ ದಲ್ಲಿತ್ತು.  ಪಾಂಡೇಶ್ವರ  ಠಾಣೆಯಲ್ಲಿ  ಕೊಲೆ ಪ್ರಕರಣ ದಾಖಲಾಗಿದೆ. 
ಕಾರ್ಮಿಕರೇ ಅಧಿಕ
ಈ ಪ್ರದೇಶದಲ್ಲಿ ಮೀನುಗಾರಿಕೆ ಮತ್ತು ಗೂಡ್ಸ್‌ ಶೆಡ್‌ ಪ್ರದೇಶದ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಮೂಲಕ ಮೃತರ ಗುರುತು ಪತ್ತೆಗೆ ಪೊಲೀಸರು  ಶ್ರಮಿಸುತ್ತಿದ್ದಾರೆ. 
ಮೃತರ ಚಹರೆ
ಮೃತ ವ್ಯಕ್ತಿ 5.7 ಎತ್ತರ, ಕಪ್ಪು ಬಣ್ಣದ ಸುಮಾರು 2 ಇಂಚು ಉದ್ದದ ತಲೆ ಕೂದಲು, ತೆಳು ಗಡ್ಡ, ಕಪ್ಪು ದಪ್ಪ ಮೀಸೆ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಸ್ಲೇಟ್‌ ಬಣ್ಣ ಅರ್ಧ ತೋಳಿನ ಹಳೆಯ ಟೀಶರ್ಟ್‌ ಮತ್ತು ಲುಂಗಿ ಧರಿಸಿದ್ದಾರೆ.  ತಮಿಳುನಾಡು ಮೂಲದವನಿರುವ ಸಾಧ್ಯ ತೆ ಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬಂಟಕಲ್ಲು: ವಿವಾಹಿತ ಮಹಿಳೆ ಆತ್ಮಹತ್ಯೆ 
ಪತಿ ಮನೆಯವರ ವಿರುದ್ಧ ದೂರು ದಾಖ ಲು
ಶಿರ್ವ:
ಬಂಟಕಲ್ಲು ಅರಸೀಕಟ್ಟೆಯ ಗಂಡನ ಮನೆ ಯಲ್ಲಿ ಸಂಗೀತಾ (26) ಅವರು ಶನಿ ವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟಕಲ್ಲು ಅರಸೀಕಟ್ಟೆ ನಿವಾಸಿ ಸುಜಯ್‌ ಅವರ ಪತ್ನಿ ಯಾ ಗಿ ರುವ ಈಕೆಗೆ ಗಂಡ, ಅತ್ತಿಗೆ ಸುಜಾತಾ ಮತ್ತು ಅತ್ತೆ ಕುಸುಮಾ  ಅವರು  ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ ಹಾಗೂ 2 ತಿಂಗಳ ಗರ್ಭಿಣಿಯಾಗಿದ್ದಾಗ ಬಲವಂತದಿಂದ ಮಾತ್ರೆಗಳನ್ನು ತಿನ್ನಿಸಿ ಗರ್ಭಪಾತ ಮಾಡಿಸಿದ್ದರು ಎಂದು ಆರೋಪಿಸಲಾಗಿದೆ. 
ಇದೇ ಕಾರಣಕ್ಕೆ ನೊಂದು ಆಕೆ  ಚೂಡಿದಾರದ ಶಾಲಿನಿಂದ ನೇಣು ಬಿಗಿ ದು ಕೊಂಡಿದ್ದು, ಕೂಡಲೇ ಅವ ರ ನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಕರೆತಂದರೂ ಜೀವ ಉಳಿಸಲಾಗಲಿಲ್ಲ. ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿ ಗರ್ಭಪಾತ ಮಾಡಿಸಿ ಆತ್ಮಹತ್ಯೆಗೆ ದುಷೆರಣೆ ನೀಡಿದ ಆರೋಪ ಹೊರಿಸಿ ಗಂಡ, ಅತ್ತಿಗೆ ಮತ್ತು ಅತ್ತೆ  ವಿರುದ್ಧ ಮೃತರ ಸಹೋದರ ಸುಭಾಸ್‌  ಅವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಣಿಪಾಲ: ರಿಕ್ಷಾ ಢಿಕ್ಕಿ; ರಸ್ತೆ ದಾಟಲು ನಿಂತಿದ್ದ ಮಹಿಳೆ ಸಾವು
ಉಡುಪಿ:ಮಣಿಪಾಲ ಎಂಜೆಸಿ ಬಸ್‌ ನಿಲ್ದಾಣದ ಬಳಿ ಭಾಗಶಃ ಪೂರ್ಣಗೊಂಡಿರುವ  ರಸ್ತೆಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಮೂಲತಃ ಕೋಲ್ಕತಾದವರಾಗಿದ್ದು ಮಣಿಪಾಲದಲ್ಲಿ ಕೆಲಸಕ್ಕಿದ್ದ ಕಲ್ಯಾಣಿ (47) ಮೃತಪಟ್ಟವರು. ಅವರು ಮಧ್ಯಾಹ್ನ ರಸ್ತೆ ದಾಟಲೆಂದು ರಸ್ತೆ ಬದಿ ನಿಂತಿದ್ದಾಗ ಟೈಗರ್‌ ಸರ್ಕಲ್‌ ಕಡೆಯಿಂದ ಸಿಂಡಿಕೇಟ್‌ ಸರ್ಕಲ್‌ ಕಡೆಗೆ ಅತಿವೇಗದಿಂದ ಬಂದ ಆಟೋರಿಕ್ಷಾ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ರಸ್ತೆಗೆ ಬಿದ್ದ ಕಲ್ಯಾಣಿ ಅವರ ತಲೆ ಮತ್ತು ಮುಖಕ್ಕೆ ಗಂಭೀರ ಗಾಯವಾಗಿ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು.  ಇಲ್ಲಿ ಒಂದು ಭಾಗದ ರಸ್ತೆ ಭಾಗಶಃ ಪೂರ್ಣಗೊಂಡಿದ್ದು ಈ ರಸ್ತೆಯಲ್ಲಿ ವಾಹನಗಳು ಎರಡೂ ಬದಿಯಿಂದ ಸಂಚರಿಸುತ್ತಿವೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.