ಸೈಬರ್‌ ಠಾಣೆಗೆ ತಜ್ಞ ತನಿಖಾಧಿಕಾರಿ ಇಲ್ಲ!


Team Udayavani, Aug 26, 2019, 5:18 AM IST

36

ಮಹಾನಗರ: ಸಾಮಾಜಿಕ ಜಾಲತಾಣಗಳು ಅತ್ಯಂತ ಪ್ರಭಾವಶಾಲಿ ಮಾಧ್ಯಮಗಳಾಗಿ ರೂಪು ಗೊಳ್ಳುತ್ತಿರುವ ಜತೆಗೆ ಸೈಬರ್‌ ಅಪರಾಧಗಳೂ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಮಂಗಳೂರಿನ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಸೈಬರ್‌ ಅಪರಾಧಗಳ ತನಿಖೆ ನಡೆಸಲು ಪರಿಣತ ತನಿಖಾಧಿಕಾರಿಯೇ ಇಲ್ಲ!

ಇಲ್ಲಿ 5 ತಿಂಗಳುಗಳಿಂದ ಖಾಯಂ ಪೊಲೀಸ್‌ ಇನ್‌ಸ್ಪೆಕ್ಟರ್‌ ಇರಲಿಲ್ಲ; ಎರಡು ದಿನಗಳ ಹಿಂದೆ ಒಬ್ಬರನ್ನು ನೇಮಕ ಮಾಡಲಾಗಿದೆ. ಠಾಣೆಯಲ್ಲಿ ಇದ್ದ ಇಬ್ಬರು ಸಬ್‌ ಇನ್‌ಪೆಕ್ಟರ್‌ಗಳೂ ಜೂನ್‌ನಲ್ಲಿ ವರ್ಗಾವಣೆಯಾಗಿದ್ದಾರೆ. ಪ್ರಸ್ತುತ ಅವರ ಹುದ್ದೆಗಳೂ ಖಾಲಿ ಇವೆ.

ಪ್ರಮುಖ ಹುದ್ದೆಗಳೂ ಖಾಲಿ
ಸೈಬರ್‌ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಆಗಿದ್ದ ಸವಿತೃ ತೇಜ ಕಳೆದ ಲೋಕಸಭಾ ಚುನಾವಣೆ ಪ್ರಕ್ರಿಯೆ ಆರಂಭವಾಗುವಾಗ ವರ್ಗವಾಗಿದ್ದು, ತೆರ ವಾದ ಸ್ಥಾನಕ್ಕೆ ಚುನಾವಣೆ ಸಂದರ್ಭದಲ್ಲಿ ಸತೀಶ್‌ ನೇಮಕಗೊಂಡಿದ್ದರು. ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಜೂ. 20ರಂದು ಸತೀಶ್‌ ಕೂಡ ಮಾತೃ ಠಾಣೆ (ಎಸಿಬಿ)ಗೆ ಮರಳಿದ್ದಾರೆ. ಸವಿತೃ ತೇಜ ಸಾಮಾನ್ಯ ವರ್ಗಾವಣೆಗೊಂಡು ಬೆಂಗಳೂರಿಗೆ (ಐಎಸ್‌ಡಿ) ತೆರಳಿದ್ದರಿಂದ ವಾಪಸಾಗಿಲ್ಲ. ಈ ಠಾಣೆಯಲ್ಲಿ ಎಸ್‌ಐ ಆಗಿದ್ದ ಚಂದ್ರಶೇಖರಯ್ಯ ಸುರತ್ಕಲ್ ಠಾಣೆಗೂ ಇನ್ನೋರ್ವ ಎಸ್‌ಐ ಕುಮಾರೇಶನ್‌ ಪಣಂಬೂರು ಠಾಣೆಗೂ ವರ್ಗವಾಗಿದ್ದಾರೆ. ಉಳಿದಂತೆ ಇತರ 18 ಮಂದಿ ಸಿಬಂದಿ ಮಾತ್ರ ಇದ್ದಾರೆ.

ಇದೀಗ ಎರಡು ದಿನಗಳ ಹಿಂದೆ ಈ ಹಿಂದೆ ಮಂಗಳೂರಿನಲ್ಲಿ ಕೆಲಸ ಮಾಡಿದ್ದ ಓರ್ವ ಇನ್ಸ್‌ಪೆಕ್ಟರ್‌ ಅವರನ್ನು ಎರಡು ದಿನಗಳ ಹಿಂದೆ ಸೈಬರ್‌ ಠಾಣೆಗೆ ನೇಮಕ ಮಾಡಿದ ಬಗ್ಗೆ ಮಾಹಿತಿ ಬಂದಿದೆ ಎಂದು ಪೊಲೀಸ್‌ ಆಯುಕ್ತ ಡಾ| ಹರ್ಷ ಪಿ.ಎಸ್‌. ಅವರು ಉದಯವಾಣಿಗೆ ತಿಳಿಸಿದ್ದಾರೆ.

ಪ್ರತೀ ದಿನ 2- 3 ಹೊಸ ಪ್ರಕರಣ
ಠಾಣೆಯ ಅಂಕಿ-ಅಂಶಗಳ ಪ್ರಕಾರ ಪ್ರಸ್ತುತ 185 ಪ್ರಕರಣಗಳು ವಿಲೇವಾರಿಗೆ ಬಾಕಿ ಇವೆ. ತನಿಖಾಧಿಕಾರಿಯಾಗಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಹುದ್ದೆಯೇ 5 ತಿಂಗಳಿಂದ ಖಾಲಿ ಇದ್ದದ್ದು, ವಿಳಂಬಕ್ಕೆ ಕಾರಣ. ಪ್ರತೀ ದಿನ 2- 3 ಹೊಸ ಸೈಬರ್‌ ಅಪರಾಧ ಪ್ರಕರಣಗಳು ಸೇರ್ಪಡೆಗೊಳ್ಳುತ್ತಿದ್ದು, ಪಟ್ಟಿ ಬೆಳೆಯುತ್ತಲೇ ಇದೆ.

ಕೆಲವು ದಿನಗಳ ಹಿಂದೆ ಪ್ರಕರಣವೊಂದರ ತನಿಖೆ ತುರ್ತಾಗಿ ನಡೆಯಬೇಕಿತ್ತು. ಆಗ ಅನಿವಾರ್ಯವಾಗಿ ಬಂದರು (ಮಂಗಳೂರು ಉತ್ತರ) ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಗೋವಿಂದರಾಜು ಅವರಿಗೆ ತನಿಖೆಯ ಪ್ರಭಾರವನ್ನು ಆಯುಕ್ತರು ವಹಿಸಿದ್ದರು. ಆದರೆ ಅವರಿಗೆ ಬಂದರು ಠಾಣೆಯ ಜವಾಬ್ದಾರಿಯೂ ಇರುವುದರಿಂದ ಸೈಬರ್‌ ಠಾಣೆ ಬಗ್ಗೆ ಗಮನ ಸಾಧ್ಯವಾಗುತ್ತಿರಲಿಲ್ಲ.

ಪರಿಣತ ಅಧಿಕಾರಿ ಬೇಕು

ಸೈಬರ್‌ ಠಾಣೆಗೆ ಇನ್‌ಸ್ಪೆಕ್ಟರ್‌ ನೇಮಕ ಮಾಡುವಂತೆ ನಿಕಟಪೂರ್ವ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್ ಅವರು ಪೊಲೀಸ್‌ ಇಲಾಖೆಯ ಕೇಂದ್ರ ಕಚೇರಿಗೆ ಪತ್ರ ಬರೆದಿದ್ದು, ಇದೀಗ ನಾನು ಕೂಡಾ ಪತ್ರ ಬರೆದಿದ್ದೇನೆ. ಎರಡು ದಿನಗಳ ಹಿಂದೆ ಒಬ್ಬರನ್ನು ನೇಮಕ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಆದರೆ ಸೈಬರ್‌ ಅಪರಾಧಗಳ ತನಿಖೆಗೆ ಕಂಪ್ಯೂಟರ್‌ ಸೈನ್ಸ್‌ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಪರಿಣತಿ ಇರುವವರನ್ನು ನೇಮಕ ಮಾಡುವ ಆವಶ್ಯಕತೆ ಇದೆ. ತಂತ್ರಜ್ಞಾನದಲ್ಲಿ ತ್ವರಿತಗತಿಯಲ್ಲಿ ಬದಲಾವಣೆಗಳಾಗುತ್ತಿವೆ. ಹೊಸ ಹೊಸ ತಂತ್ರಜ್ಞಾನ ಬಳಸಿ ಕಳ್ಳರು ಅಪರಾಧ ಎಸಗುತ್ತಾರೆ. ನುರಿತ ಅಧಿಕಾರಿ ಇದ್ದರೆ ಮಾತ್ರ ಪರಿಣಾಮಕಾರಿ ತನಿಖೆ ಸಾಧ್ಯ.
– ಡಾ| ಹರ್ಷ ಪಿ.ಎಸ್‌.ಮಂಗಳೂರು ಪೊಲೀಸ್‌ ಆಯುಕ್ತರು

•ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.