ಇನ್ನೂ ಪುನರಾರಂಭವಾಗದ ಇ-ಕೆವೈಸಿ ಪ್ರಕ್ರಿಯೆ

ಮುಂದುವರಿದ ಸರ್ವರ್‌ ಸಮಸ್ಯೆ

Team Udayavani, Jan 23, 2020, 4:52 AM IST

led-22

ಮಹಾನಗರ: ಸರ್ವರ್‌ ಸಮಸ್ಯೆ ಮತ್ತು ಹೆಚ್ಚುವರಿ ಸರ್ವರ್‌ ಆವಶ್ಯಕತೆಯಿಂದಾಗಿ ಸ್ಥಗಿತಗೊಂಡಿದ್ದ ಪಡಿತರ ಚೀಟಿದಾರರಿಗೆ ಇ-ಕೆವೈಸಿ (ಬೆರಳಚ್ಚು) ಪ್ರಕ್ರಿಯೆ ಸದ್ಯಕ್ಕೆ ಪುನರಾರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. ಜನವರಿ 20ರಂದು ಆರಂಭವಾಗಬೇಕಿತ್ತಾದರೂ ಸರ್ವರ್‌ ಸಮಸ್ಯೆ ಮುಂದುವರಿದಿರುವುದರಿಂದ ಪ್ರಕ್ರಿಯೆ ಆರಂಭಕ್ಕೆ ತೊಡಕುಂಟಾಗಿದೆ.

ಇ-ಕೆವೈಸಿ ಪ್ರಕ್ರಿಯೆ ಮಾಡಲು ಸರಕಾರವು ಜ. 31ರ ಗಡುವು ವಿಧಿಸಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ನ್ಯಾಯಬೆಲೆ ಅಂಗಡಿಗಳಿಗೆ ಆಗಮಿಸಿದ್ದರಿಂದ ಸರ್ವರ್‌ ಸಮಸ್ಯೆ ತಲೆದೋರಿ ಜ. 6ರಿಂದ ಇ-ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಬಳಿಕ ಜ. 10ರಿಂದ ಪುನರಾರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಹೇಳಿದ್ದರಾದರೂ ಸಮಸ್ಯೆ ಸರಿಯಾಗದ ಕಾರಣ ಜ. 20ರಿಂದ ಇ-ಕೆವೈಸಿ ಪ್ರಕ್ರಿಯೆ ನಡೆಯಲಿದೆ ಎಂದಿದ್ದರು. ಆದರೆ ಸರ್ವರ್‌ ಸಮಸ್ಯೆ ಮುಂದುವರಿದಿರುವುದರಿಂದ ಇನ್ನೂ ಪ್ರಕ್ರಿಯೆ ಪುನರಾರಂಭವಾಗಿಲ್ಲ. ರಾಜ್ಯ ಕಚೇರಿಯಿಂದ ಮಾಹಿತಿ ಬಂದ ಬಳಿಕವಷ್ಟೇ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ ಎನ್ನುತ್ತಾರೆ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು.

ಶೇ. 38.76ರಷ್ಟು ನಡೆದ ಬೆರಳಚ್ಚು ಪ್ರಕ್ರಿಯೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 4ರ ವರೆಗೆ ಸುಮಾರು ಶೇ. 38.76ರಷ್ಟು ಕುಟುಂಬಗಳ ಸದಸ್ಯರು ಬಯೋಮೆಟ್ರಿಕ್‌ ನೀಡಿದ್ದರು. ಒಟ್ಟು 4,30,665 ಕುಟುಂಬಗಳ ಪೈಕಿ 1,54,469 ಮಂದಿಯಷ್ಟೇ ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಇದರಲ್ಲಿ 23,209 ಅಂತ್ಯೋದಯ ಕುಟುಂಬಗಳ ಪೈಕಿ 4,311 ಕುಟುಂಬ, 2,48,385 ಬಿಪಿಎಲ್‌ ಕುಟುಂಬಗಳ ಪೈಕಿ 1,08,840 ಕುಟುಂಬ ಮತ್ತು 1,59,061 ಎಪಿಎಲ್‌ ಕುಟುಂಬಗಳ ಪೈಕಿ 41,318 ಕುಟುಂಬ ಇ-ಕೆವೈಸಿ ಪ್ರಕ್ರಿಯೆಯಡಿ ಬಯೋಮೆಟ್ರಿಕ್‌ ನೀಡಿವೆ. ಮಂಗಳೂರಿನಲ್ಲಿ 8,316 ಅಂತ್ಯೋದಯ ಕುಟುಂಬಗಳ ಪೈಕಿ 1,146 ಕುಟುಂಬಗಳು, 88,185 ಬಿಪಿಎಲ್‌ ಕುಟುಂಬಗಳ ಪೈಕಿ 39,091 ಕುಟುಂಬಗಳು, 87,254 ಎಪಿಎಲ್‌ ಕುಟುಂಬಗಳ ಪೈಕಿ 21,841 ಕುಟುಂಬಗಳು ಬೆರಳಚ್ಚು ನೀಡಿದ್ದು, ಇನ್ನೂ 1,21,678 ಕುಟುಂಬಗಳು ಬೆರಳಚ್ಚು ನೀಡಲು ಬಾಕಿ ಇವೆ.

ಮುಂದಿನ ದಿನಾಂಕ ತಿಳಿಸಲಾಗುವುದು
ಜ. 20ರಂದು ಇ-ಕೆವೈಸಿ ಪ್ರಕ್ರಿಯೆ ಆರಂಭಿಸಬೇಕಿತ್ತಾದರೂ ಸರ್ವರ್‌ ಸಮಸ್ಯೆ ಮುಂದುವರಿದ ಕಾರಣ ಸಾಧ್ಯವಾಗಿಲ್ಲ. ಮುಂದೆ ಪ್ರಕ್ರಿಯೆ ಆರಂಭವಾಗುವ ದಿನಾಂಕವನ್ನು ರಾಜ್ಯ ಕಚೇರಿಯಿಂದ ಮಾಹಿತಿ ಬಂದ ಅನಂತರ ತಿಳಿಸಲಾಗುವುದು. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು.
 -ಡಾ| ಮಂಜುನಾಥನ್‌, ಜಂಟಿ ನಿರ್ದೇಶಕರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.