ಬಂಟ್ವಾಳ; ಗೋಬರ್ ಗ್ಯಾಸ್ ಗುಂಡಿಗೆ ಬಿದ್ದ ಕಾಡುಕೋಣ
Team Udayavani, May 4, 2019, 3:26 PM IST
ಬಂಟ್ವಾಳ: ಕಾಡುಕೋಣವೊಂದು ಗೋಬರ್ ಗ್ಯಾಸ್ ನ ಗುಂಡಿಯೊಳಗೆ ಬಿದ್ದ ಘಟನೆ ಕಾಡಬೆಟ್ಟು ಗ್ರಾಮದ ಪೂರ್ಲೊಟ್ಟು ಎಂಬಲ್ಲಿ ನಡೆದಿದೆ. ಪೂರ್ಲೊಟ್ಟು ನಿವಾಸಿ ಎಲ್ಪ್ರೆಡ್ ಡಿಸೋಜ ಎಂಬವರ ಮನೆಯ ಗೋಬರ್ ಗ್ಯಾಸ್ ನ ಗುಂಡಿಗೆ ಕಾಡು ಕೋಣಬಿದ್ದಿದೆ.
ಗೋಬರ್ ಗ್ಯಾಸ್ ನ ಗುಂಡಿಯೊಳಗೆ ಬಿದ್ದಿರುವ ಕಾಡು ಕೋಣಕ್ಕೆ ಮತ್ತೆ ಮೇಲೆ ಬರಲು ಸಾಧ್ಯವಾಗದೆ ಸಿಕ್ಕಿಹಾಕಿಗೊಂಡಿದೆ. ಬೆಳಿಗ್ಗೆ ವೇಳೆ ಮನೆಯವರು ಗೋಬರ್ ಗ್ಯಾಸ್ ಗೆ ಗೊಬ್ಬರ ಹಾಕಲು ಬಂದ ವೇಳೆ ಈ ಘಟನೆ ಬೆಳಕಿಗೆ ಬಂದ ಬಳಿಕ ಅವರು ಬಂಟ್ವಾಳ ಅರಣ್ಯ ಇಲಾಖೆ ಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ಬಂಟ್ವಾಳ ಉಪವಲಯ ಸಂರಕ್ಷಣಾಧಿಕಾರಿ ಸುರೇಶ್ ಸ್ಥಳಕ್ಕೆ ಬೇಟಿ ನೀಡಿ ಕಾಡು ಕೋಣವನ್ನು ಮೇಲಕ್ಕೆ ಎತ್ತುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಸಾಕಷ್ಟು ಹೆದರಿಕೆಯಿಂದ ಜನರನ್ನು ನೋಡಿದಾಗ ದುರುಗಟ್ಟಿ ನೋಡುವ ಕಾಡುಕೋಣವನ್ನು ಮೇಲಕ್ಕೆ ಎತ್ತಲು ಜೆಸಿಬಿ ತರಲಾಗಿದೆ. ಗುಂಡಿಯ ಸುತ್ತಲೂ ಮಣ್ಣು ತೆಗೆದ ಬಳಿಕ ಜಾಗರೂಕತೆಯಿಂದ ಕಾಡು ಕೋಣವನ್ನು ಮೇಲೆ ತರಬೇಕಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ. ಕಾಡು ಕೋಣವನ್ನು ನೋಡಲು ಊರಿನ ಜನ ತಂಡತಂಡೋಪವಾಗಿ ಬರುತ್ತಾ ಇದ್ದಾರೆ.
ರಾತ್ರಿ ಹೊತ್ತಿನಲ್ಲಿ ಕಾಡಿನಿಂದ ಬಂದಿರುವ ಈ ಕಾಡುಕೋಣ ಯಾವುದೋ ಪ್ರಾಣಿಯನ್ನು ಅಟ್ಟಿಸಿಕೊಂಡು ಹೋಗುವ ವೇಳೆ ಗೋಬರ್ ಗ್ಯಾಸ್ ಗುಂಡಿ ಕಾಣದೆ ಬಿದ್ದಿರಬೇಕು ಎಂದು ಹೇಳಲಾಗುತ್ತದೆ. ಅರಣ್ಯ ಇಲಾಖೆಯ ಸಿಬ್ಬಂದಿ ಗಳಾದ ವಿನಯ್, ಬಾಸ್ಕರ್, ಸ್ಮಿತಾ, ಅನಿತಾ ಅನಿಲ್ ಹಾಗೂ ಪರಿಸರ ಸ್ನೇಹಿ ಕಿರಣ್ ಪಿಂಟೋ ಮತ್ತು ಗ್ರಾಮಸ್ಥರ ಸ್ಥಳ ದಲ್ಲಿದ್ದು ಕಾಡು ಕೋಣದ ರಕ್ಷಣೆಯಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ