“ಆರ್ಥಿಕ ಗಣತಿ ಕುರಿತು ಜನರಿಗೆ ಸಂಕ್ಷಿಪ್ತ ಮಾಹಿತಿ ನೀಡಿ’
ಆರ್ಥಿಕ ಗಣತಿ ಕಾರ್ಯಾಚರಣೆ; ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ
Team Udayavani, Jan 25, 2020, 8:30 PM IST
ಮಹಾನಗರ: ಆರ್ಥಿಕ ಗಣತಿಯ ಕುರಿತು ಜನರಿಗೆ ಮಾಹಿತಿ ನೀಡಬೇಕು. ಮೊಬೈಲ್ ಆ್ಯಪ್ ಮೂಲಕ ಕ್ಷೇತ್ರ ಕಾರ್ಯ ನಡೆಸಲಾಗುತ್ತಿರುವು ದರಿಂದ ಸವಿವರವಾದ ಮಾಹಿತಿಯನ್ನು ಜನರಿಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ತಲುಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ 7ನೇ ಆರ್ಥಿಕ ಗಣತಿ ಕಾರ್ಯಾಚರಣೆಯ ಸಂಯೋಜನೆಗೆ ಗುರುವಾರ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಗಣತಿಯ ಕುರಿತು ತಾಲೂಕು ಮಟ್ಟದಲ್ಲಿ ಸಭೆ ಕರೆದು ಪ್ರತೀ ತಾಲೂಕು ತಹಶೀಲ್ದಾರರು, ತಾ.ಪಂ. ಅಧಿಕಾರಿಗಳು, ತಾಲೂಕು ಮಟ್ಟದ ಪೊಲೀಸ್ ಅ ಧಿಕಾರಿಗಳನ್ನು ಒಳಗೊಂಡು ಚರ್ಚಿಸಬೇಕು. ಆರ್ಥಿಕ ಗಣತಿಯ ಮುಖ್ಯ ಉದ್ದೇಶ ಏನು, ಯಾವ ಕಾರಣಕ್ಕಾಗಿ ಈ ಗಣತಿ ಮಾಡಲಾಗುತ್ತದೆ, ಮತ್ತು ಯಾವ ಪ್ರಶ್ನೆಗಳನ್ನು ಯಾಕೆ ಕೇಳಲಾಗುತ್ತದೆ ಎಂಬುದನ್ನು ಮೊದಲು ಜನರಿಗೆ ಮನವರಿಕೆ ಮಾಡಬೇಕು. ಇದೇ ಮೊದಲ ಬಾರಿಗೆ ಗಣತಿ ಕಾರ್ಯ ವನ್ನು ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳ ಲಾಗಿರುತ್ತದೆ. ಆ್ಯಪ್ನ ವೈಶಿಷ್ಟಗಳು ಯಾವುದು, ಅದನ್ನು ಉಪಯೋಗಿಸುವ ಕ್ರಮಗಳು ಯಾವುದು ಎಂಬ ಪ್ರತಿ ಮಾಹಿತಿ ಜನರಿಗೆ ದೊರಕಬೇಕು ಎಂದರು.
ಜನರು ಮಾಹಿತಿ ನೀಡಲು ಹಿಂಜರಿದರೆ ವಿಶೇಷವಾಗಿ ಆರ್ಥಿಕ ಗಣತಿಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನೀಡಿ ಗಣತಿಗೆ ಸ್ಪಂದನೆ ನೀಡುವಂತೆ ಕಾರ್ಯ ನಿರ್ವಹಿಸಬೇಕು. ಗಣತಿಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಚುರುಕಾಗಿ ಆಸಕ್ತಿಯಿಂದ ಈ ಗಣತಿಯನ್ನು ಯಶಸ್ವಿಯಾಗಿಸಬೇಕು ಎಂದರು. ಪುತ್ತೂರು ತಹಶೀಲ್ದಾರ್ ರಾಹುಲ್ ಶಿಂಧೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿ ಡಾ| ಉದಯ ಶೆಟ್ಟಿ, ಸಹಾಯಕ ಸಾಂಖೀಕ ಅಧಿಕಾರಿ ಎ.ಡಿ. ಬೋಪಯ್ಯ, ವಿವಿಧ ತಾಲೂಕು ಅಧಿಕಾರಿಗಳು, ತಹಶೀಲ್ದಾರರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಉತ್ತಮ ಸಹಕಾರ ನೀಡುವಂತೆ ಮಾಹಿತಿ ಪಡೆಯಬೇಕು
7ನೇ ಆರ್ಥಿಕ ಗಣತಿಯಲ್ಲಿ ಕಟ್ಟಡದ ವಿಧ, ಕುಟುಂಬ ವಿವರ, ಸಾಮಾಜಿಕ ಗುಂಪು ಮತ್ತು ಧರ್ಮ, ಆರ್ಥಿಕ ಚಟುವಟಿಕೆಯ ವಿಧ, ಕಾರ್ಯವಿಧಾನ ಸ್ವರೂಪ, ಮನೆಯಲ್ಲಿ ಆರ್ಥಿಕ ಚಟುವಟಿಕೆ ನಡೆಸುವ ಸದಸ್ಯರ ವಿವರ, ಹಣಕಾಸಿನ ಮೂಲ, ಹೂಡಿಕೆ, ವಾರ್ಷಿಕ ವ್ಯವಹಾರ, ಕೆಲಸಗಾರರ ಸಂಖ್ಯೆ, ಘಟಕದ ನೋಂದಣಿಯ ವಿವರ, ಉದ್ಯಮ ಮಾಲಕರ ಲಿಂಗವಾರು ಸಾಮಾಜಿಕ ಗುಂಪುವಾರು ಮಾಹಿತಿಗಳು, ಗಂಡು ಹೆಣ್ಣು ಕೆಲಸಗಾರರು, ಮಜೂರಿದಾರ ಕೆಲಸಗಾರರು, ಮಜೂರಿದಾರರಲ್ಲದ ಕೆಲಸ ಗಾರರು ಇವರ ಉದ್ದಿಮೆಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಗಳು ಈ ಗಣತಿಯಲ್ಲಿ ಸಂಗ್ರಹವಾಗುತ್ತವೆೆ. ಗಣತಿ ಸಂದರ್ಭದಲ್ಲಿ ಉತ್ತಮವಾದ ಸಹಕಾರ ನೀಡುವಂತೆ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್