ಗುರುಗಳ ಸಂದೇಶ ಎಲ್ಲ ಕಾಲಕ್ಕೂ ಅನ್ವಯ: ಸ್ವಾಮೀಜಿ


Team Udayavani, Sep 19, 2019, 4:00 AM IST

q-14

ಮಂಗಳಗಂಗೋತ್ರಿ: ಮಾನವೀಯ ಮೌಲ್ಯ ಮನುಷ್ಯತ್ವದ ಸವಿಗುಣಗಳನ್ನು ಪ್ರದರ್ಶಿ ಸುತ್ತಾ ಮಾನವ ಹೇಗೆ ಇರಬೇಕು, ಹೇಗೆ ಬದುಕಿದರೆ ಶಾಶ್ವತವಾದ ಶಾಂತಿ ಸಮಾಧಾನ ಸಿಗುತ್ತದೆ ಎಂಬುದನ್ನು ತೋರಿಸಿಕೊಟ್ಟ ಮಹಾನ್‌ ಚೇತನ ಬ್ರಹ್ಮಶ್ರೀ ನಾರಾಯಣಗುರುಗಳು ಅಂದು ಅವರು ನೀಡಿದ ಸಂದೇಶ ಎಲ್ಲ ಕಾಲಕ್ಕೆ ಅನ್ವಯವಾಗುವಂತದ್ದು ಎಂದು ಶಿರ್ತಾಡಿ ಬಲ್ಲೊಟ್ಟು ಗುರುಕೃಪ ಸೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಆಡಿಟೋರಿಯಂನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ವತಿಯಿಂದ ಮಂಗಳವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ -2019ರಲ್ಲಿ ಭಾಗವಹಿಸಿ ಆಶಿರ್ವಚನ ನೀಡಿದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್‌ ಮಾತನಾಡಿ ಅಧ್ಯಯನ ಪೀಠಗಳು ಪರಸ್ಪರ ವಿಶ್ವಾಸ ಮೂಡಿಸಲು ಪ್ರಯತ್ನಿಸಬೇಕು. ಅಧ್ಯಯನ ಪೀಠದ ಕಾರ್ಯಕ್ರಮ ಬಲಿಷ್ಠ ಭಾರತ ಕಟ್ಟಲು ನೆರವಾಗಬೇಕು. ಸರಕಾರ ಮಂಗಳೂರು ವಿವಿಯ ಇಪ್ಪತ್ತಮೂರು ಅಧ್ಯಯನ ಪೀಠಕ್ಕೂ ತಲಾ ಎರಡು ಕೋಟಿ ರೂ. ಮೀಸಲಿಡಲಿ. ಆ ಮೂಲಕ ಬಹಳಷ್ಟು ಕಾರ್ಯಕ್ರಮ ನಡೆಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ಜಾಗ ವಿವಿ ಕೊಟ್ರೆ ಅನುದಾನ ನಾವು ಮಂಜೂರು ಮಾಡಿಸಿ ಸುಂದರ ಕಟ್ಟಡ ನಿರ್ಮಿಸಿ ಕೊಡುತ್ತೇವೆ. ಅದರಲ್ಲಿ ಸುಂದರ ಸಭಾಂಗಣ ಹಾಗೂ ಎಲ್ಲ ಅಧ್ಯಯನ ಪೀಠಕ್ಕೆ ಕಚೇರಿ ನಿರ್ಮಿಸಲು ಸಾಧ್ಯವಾಗುತ್ತದೆ ಎಂದರು.

ಕಲಾವಿಭಾಗದ ಡೀನ್‌ ಪ್ರೊ| ಕಿಶೋರಿ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು.ಅಖೀಲ ಭಾರತ ಬಿಲ್ಲವರ ಯೂನಿಯನ್‌ ಅಧ್ಯಕ್ಷ ನವೀನ್‌ ಚಂದ್ರ ಡಿ. ಸುವರ್ಣ ಹಾಗೂ ನಾರಾಯಣಗುರು ಅಧ್ಯಯನ ಪೀಠದ ಸಲಹಾ ಮಂಡಳಿ ಸದಸ್ಯೆ ಪ್ರೊ| ಮರಿಯ ಡಿ.ಕೋಸ್ಟ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ “ಗುರುವಿನ ಅರಿವು ಸ್ಪರ್ಧಾ ಪ್ರಬಂಧಗಳ ಸಂಕಲನ’ ಕೃತಿ ಬಿಡುಗಡೆಗೊಳಿಸಲಾಯಿತು.

ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಜಯಪುರದಲ್ಲಿ ನಡೆದ ನೃತ್ಯರೂಪಕದಲ್ಲಿ ಬಹುಮಾನ ವಿಜೇತ ನಾಟಕ ತಂಡದ ನಿರ್ದೇಶಕ ಅರವಿಂದ ಚೊಕ್ಕಾಡಿ ಹಾಗೂ ನೃತ್ಯರೂಪಕ ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಹುಸೇನ್‌ ಕಾಟಿಪಳ್ಳ ಅವರು ನಾರಾಯಣಗುರು ಕುರಿತಾದ ಹಾಡನ್ನು ಬ್ಯಾರಿ ಭಾಷೆಯಲ್ಲಿ ಹಾಡಿದರು. ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಮುದ್ದು ಮೂಡುಬೆಳ್ಳೆ ಸ್ವಾಗತಿಸಿದರು.ಕನ್ನಡ ವಿಭಾಗ ಸಂಶೋಧನಾ ವಿದ್ಯಾರ್ಥಿ ಶಿವರಾಜು ಎಸ್‌. ನಿರೂಪಿಸಿ, ಡಾ| ರವಿರಾಜ್‌ ಬಿ.ವಿ. ವಂದಿಸಿದರು.

ನಾರಾಯಣಗುರುಗಳ ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತ
ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಕಾಲಘಟ್ಟದಲ್ಲಿ ಬ್ರಿಟಿಷರ ಆಡಳಿತವಿತ್ತು. ಬಡತನ ಸಹಿಸಲಾರದಷ್ಟಿತ್ತು.
ಅಂತಹ ಕಾಲಘಟ್ಟದಲ್ಲಿಯೂ ಶಿಕ್ಷಣದ ಮೂಲಕವೇ ಅಭಿವೃದ್ಧಿ ಸಾಧ್ಯ ಎಂದು ನಾರಾಯಣ ಗುರುಗಳು ಪ್ರತಿಪಾದಿಸಿದ್ದು ಒಬ್ಬ ದಾರ್ಶನಿಕನಾಗಿ ಅವರು ಕೊಟ್ಟ ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತ, ಕಾಲಾತೀತವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.