ಅದ್ಯಪಾಡಿ: ಗುಡ್ಡ ಕುಸಿತಕ್ಕೆ ತಾತ್ಕಾಲಿಕ ಪರಿಹಾರ


Team Udayavani, Jul 25, 2019, 5:00 AM IST

q-20

ಮಹಾನಗರ: ನಗರದಲ್ಲಿ ಬುಧವಾರ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಬಿಟ್ಟು ಬಿಟ್ಟು ಮಳೆ ಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಬಿಜೈ ಬಟ್ಟಗುಡ್ಡೆ ಬಳಿ ಕಳೆದ ಸೋಮ ವಾರ ರಸ್ತೆಗೆ ಮಣ್ಣು ಜರಿದು ಬಿದ್ದಿದ್ದು, ಬುಧವಾರ ಕಾಮಗಾರಿ ನಡೆದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುದಿನ ಎರಡು ದಿನಗಳಲ್ಲಿ ದ.ಕ. ಸಹಿತ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಗುಡ್ಡ ಕುಸಿತಕ್ಕೆ ತಾತ್ಕಾಲಿಕ ಪರಿಹಾರ
ಬಜಪೆ:
ಎರಡೂ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅದ್ಯಪಾಡಿ ಚರ್ಚ್‌ ಬಳಿಯ ಗುಡ್ಡದ ಮಣ್ಣು ಕುಸಿತವಾಗಿದ್ದು ತಾತ್ಕಾಲಿಕ ಪರಿಹಾರವಾಗಿ ಮರಳುತುಂಬಿದ ಗೋಣಿ ಯನ್ನು ಇಡಲಾಗಿದೆ. ಆದರೂ ಗುಡ್ಡದ ಮಣ್ಣು ಕುಸಿಯುವ ಭೀತಿಯಿದೆ.

ಧಾರಾಕಾರ ಮಳೆಯಿಂದಾಗಿ ಅದ್ಯಪಾ ಡಿಯ ಲೋಕೋಪಯೋಗಿ ರಸ್ತೆಯಲ್ಲಿ ಗುಡ್ಡ ಮಣ್ಣು ಕುಸಿದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ರಸ್ತೆಗೆ ಬಿದ್ದ ಮಣ್ಣನ್ನು ಮಂಗಳವಾರ ಜೇಸಿಬಿಯಿಂದ ತೆಗೆಯಲಾಯಿತು. ಮಳೆಗೆ ಮಣ್ಣು ಇನ್ನೂ ಕುಸಿದಿದ್ದು ಬುಧವಾರ ಲೋಕೋಪಯೋಗಿ ಇಲಾಖೆಯಿಂದ ಗುಡ್ಡದ ಬುಡಕ್ಕೆ ಮರಳು ತುಂಬಿದ ಗೋಣಿ ಇಡಲಾಗಿದೆ. ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳಲಾಗಿದೆ.

ಗುಡ್ಡದ ಮೇಲೆ ಕೆಂಪುಕಲ್ಲು ತೆಗೆದು ಬಿಟ್ಟ ಕೋರೆ ಇದೆ. ಕೋರಿಯಲ್ಲಿ ಮಳೆ ನೀರು ತುಂಬಿರುವುದರಿಂದ ನೀರಿನ ಒರತೆ ರಭಸವಾಗಿದೆ. ಗುಡ್ಡದಲ್ಲಿ ಮಣ್ಣಿನ ಕೊರೆತೆಯೂ ಕುಸಿತಕ್ಕೆ ಕಾರಣವಾಗಿದೆ. ಮಣ್ಣು ಕುಸಿತವಾದಲ್ಲಿ ದೊಡ್ಡ ಗುಂಡು ಕಲ್ಲುಗಳಿದ್ದು ಇನ್ನೂ ಮಳೆ ಬಂದಲ್ಲಿ ಇದು ಕೆಳಗೆ ರಸ್ತೆಗೆ ಬೀಳುವ ಸಂಭವವಿದೆ.

ಗುಡ್ಡದ ಕೆಳಗಿರುವ ಮನೆಗಳಿಗೆ ಅಪಾ ಯದ ಬಗ್ಗೆ ಸೂಚಿಸಲಾಗಿದೆ. ಮಳೆ ಹೆಚ್ಚಾ ದಂತೆ ಮಣ್ಣು ಕುಸಿತವಾಗುವ ಸಂಭವವಿದೆ. ಸ್ಥಳಕ್ಕೆ ತಹಶೀಲ್ದರ ಗುರು ಪ್ರಸಾದ್‌ ಅವರು ಭೇಟಿ ನೀಡಿ, ಪರಿಶೀಲಿಸಿ, ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೀರಿನ ಒರತೆ ಜಾಸ್ತಿಯಾಗಿದ್ದು, ಮಣ್ಣು ಕುಸಿತ ಕಂಡ ಪ್ರದೇಶದ ಕೆಳಗಡೆಯೂ ಕುಸಿಯಲು ಆರಂಭವಾಗಿದೆ. ತಾತ್ಕಾಲಿಕ ಪರಿಹಾರಕ್ಕೆ ಮರಳುತುಂಬಿದ ಗೋಣಿಯನ್ನು ಇಡಲಾಗಿದೆ. ಮಳೆ ಕಡಿಮೆಯಾದ ಅನಂತರ ಶಾಶ್ವ್ವತ ಪರಿಹಾರವಾಗಿ ತಡೆಗೋಡೆ ನಿರ್ಮಾಣಕ್ಕೆ ಸುಮಾರು 25ಲಕ್ಷ ರೂ. ಬೇಕಾಗುತ್ತದೆ ಎಂದು ಲೋಕಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಗೋಪಾಲ ಹೇಳಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.