ಗೃಹ ಕಾರ್ಮಿಕರ ಒಕ್ಕೂಟದಿಂದ ಮಾನವ ಸರಪಳಿ
Team Udayavani, Feb 14, 2018, 2:37 PM IST
ಕಾವೂರು: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗೃಹ ಕಾರ್ಮಿಕರ ಒಕ್ಕೂಟದ ವತಿಯಿಂದ ಕುಂಜತ್ತಬೈಲಿನಿಂದ ಕಾವೂರು ಜಂಕ್ಷನ್ ವರೆಗೆ ಜಾಥಾ ಮತ್ತು ಕಾರ್ಮಿಕರ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.
ಸರಕಾರಕ್ಕೆ ಒತ್ತಾಯ
ಬೆಂಗಳೂರು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟದ ಸಲಹೆಗಾರೆ ಗೀತಾ ಮೆನನ್ ಮಾತನಾಡಿ, ಗೃಹ ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ, ವಾರದ ರಜೆ, ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಗುರುತಿನ ಚೀಟಿ, ಲೈಂಗಿಕ ದೌರ್ಜನ್ಯ, ಜಾತೀಯತೆ ತಡೆಗಟ್ಟುವಿಕೆ, ಬಿಪಿಎಲ್ ಪಡಿತರ ಸಿಗುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದರು.
ಗೃಹ ಕಾರ್ಮಿಕರಿಗೂ ಇತರ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ಕೊಡಬೇಕು ಎಂದು ನಿರ್ಧರಿಸಲಾಯಿತು. ಮಂಗಳೂರಿನಲ್ಲಿ ಗೃಹ ಕಾರ್ಮಿಕರ ಸಂಖ್ಯೆ ಅಪಾರವಾಗಿದೆ. ಎಲ್ಲರೂ ಹಲವು ಸಮಸ್ಯೆ ಗಳನ್ನು ಎದುರಿಸುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.
ಮಂಗಳೂರಿನ ಸ್ತ್ರೀ ಜಾಗೃತಿ ಸಮಿತಿ ಕಾರ್ಯಕರ್ತೆ ಶಂಸಾದ್, ಗೃಹ ಕಾರ್ಮಿಕರ ಕಾರ್ಯಕರ್ತೆ ಗೀತಾ,
ರತನ್, ಸುಂಕದಕಟ್ಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಲತಾ, ಸಮಾಜ ಸೇವಕಿ ಹರಿಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್