ಮಂಗಳೂರು ಉತ್ತರ ಕಾಂಗ್ರೆಸ್‌ ಘಟಕದಿಂದ ಪಾದಯಾತ್ರೆ, ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ 66ರ ದುರವಸ್ಥೆ

Team Udayavani, Sep 17, 2019, 5:08 AM IST

u-21

ರಾಷ್ಟ್ರೀಯ ಹೆದ್ದಾರಿ 66ರ ದುರವಸ್ಥೆಯನ್ನು ಖಂಡಿಸಿ ಕುಳಾಯಿಯಿಂದ ಬೈಕಂಪಾಡಿವರೆಗೆ ಕಾಂಗ್ರೆಸ್‌ನಿಂದ ಪಾದಯಾತ್ರೆ ಜರಗಿತು.

ಬೈಕಂಪಾಡಿ: ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂಬ ಅನುಮಾನಗಳು ನಾಗರಿಕರನ್ನು ಕಾಡುತ್ತಿದೆ. ಹೊಂಡಗಳಿಂದ ರಸ್ತೆಯಲ್ಲಿ ಸಂಚರಿಸುವಂತಿಲ್ಲ. ನೆರೆಯಿಂದ ತತ್ತರಿಸಿದ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ನೆರೆ ಪರಿಹಾರಕ್ಕಾಗಿ ಕೇಂದ್ರ ಸರಕಾರ ರಾಜ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಹೇಳಿದರು.

ಮಂಗಳೂರು ಉತ್ತರ ಕಾಂಗ್ರೆಸ್‌ ಘಟಕ, ಮಾಜಿ ಶಾಸಕ ಮೊದಿನ್‌ ಬಾವಾ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ದುರವಸ್ಥೆಯನ್ನು ಖಂಡಿಸಿ ಸುರತ್ಕಲ್‌ ಸಮೀಪದ ಕುಳಾಯಿಯಿಂದ ಬೈಕಂಪಾಡಿ ವರೆಗೆ ಆಯೋಜಿಸಿದ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಎಚ್ಚರಿಸಲು ಕೆಟ್ಟ ರಸ್ತೆಯಲ್ಲಿಯೇ ಪಾದಯಾತ್ರೆ ಮಾಡಲಾಯಿತು. ಹೊಂಡದ ಹೆದ್ದಾರಿಯಲ್ಲಿ ಪ್ರಾಣ ಕಳೆದುಕೊಂಡರೂ ಕೆಟ್ಟ ರಸ್ತೆಗೆ ಬೇಕಾಬಿಟ್ಟಿ ಟೋಲ್‌ ವಸೂಲಿಗೆ ಅವಕಾಶ ನೀಡಲಾಯಿತು. ಹೀಗಾಗಿ ಇದು ದುಬಾರಿ ರಸ್ತೆಯಾಗಿದೆ, ಇನ್ನೊಂದೆಡೆ ಪಂಪ್‌ವೆಲ್‌ ಸೇತುವೆಯನ್ನು ಪೂರ್ಣಗೊಳಿಸದ ಈ ಭಾಗದ ಸಂಸದರು ಬಿಜೆಪಿ ರಾಜ್ಯಾಧ್ಯಕ್ಷರಾದರು. ಜನರ ಆಶೋತ್ತರಗಳನ್ನು ಈಡೇರಿಸಲಾಗದ ಸಂಸದರು ಯಾಕಿರಬೇಕು ಎಂದು ಪ್ರಶ್ನಿಸಿದರು.

ಘಟಕದ ಅಧ್ಯಕ್ಷ ಸದಾಶಿವ ಶೆಟ್ಟಿ ಕೆ., ಮಾಜಿ ಮೇಯರ್‌ ಶಶಿಧರ ಹೆಗ್ಡೆ, ಗುಲ್ಜಾರ್‌ ಬಾನು, ಮಾಜಿ ಉಪಮೇಯರ್‌ಗಳಾದ ಬಶೀರ್‌ ಬೈಕಂಪಾಡಿ, ಬಶೀರ್‌ ಅಹ್ಮದ್‌, ಅಶೋಕ್‌ ಕೃಷ್ಣಾಪುರ, ಕಾರ್ಪೊರೇಟರ್‌ಗಳಾದ ದೀಪಕ್‌ ಪೂಜಾರಿ, ಪ್ರತಿಭಾ ಕುಳಾಯಿ, ಮಾಜಿ ದೇವೇಂದ್ರ, ಗಣೇಶ್‌ ಪೂಜಾರಿ, ಮಾಜಿ ಅಧ್ಯಕ್ಷ ಕೇಶವ ಸನಿಲ್‌, ಉಪಾಧ್ಯಕ್ಷ ಗೋವರ್ದನ್‌ ಶೆಟ್ಟಿಗಾರ್‌, ಶ್ಯಾಮ್‌ ಸುಂದರ್‌, ರಾಜೇಶ್‌ ಕುಳಾಯಿ, ಆನಂದ ಅಮೀನ್‌, ರೇಷ್ಮಾ ಕಾಟಿಪಳ್ಳ, ಸೊಹೈಲ್‌ ಕಂದಕ್‌, ಅನಿಲ್‌ ಕುಮಾರ್‌, ಪದ್ಮನಾಭ ಅಮೀನ್‌, ಲಕ್ಷ್ಮಣ್‌ ಸುವರ್ಣ, ಹರೀಶ್‌ ಬೈಕಂಪಡಿ, ಜಲೀಲ್‌ ಕೃಷ್ಣಾಪುರ, ಶಂಶದ್‌, ಹ್ಯಾರಿಸ್‌ ಬೈಕಂಪಾಡಿ, ಹೇಮಂತ್‌ ಕುಮಾರ್‌, ಹಂಝ ಇಡ್ಯಾ ಮೊದಲಾದವರು ಉಪಸ್ಥಿತರಿದ್ದರು.

ದುರಸ್ತಿ ಭಾಗ್ಯ ಲಭಿಸಿಲ್ಲ
ಮಾಜಿ ಶಾಸಕ ಮೊದಿನ್‌ ಬಾವಾ ಮಾತನಾಡಿ, ರಸ್ತೆ ಕೆಟ್ಟು ಹೋಗಿ ಇಷ್ಟು ದಿನಗಳಾದರೂ ಇಲ್ಲಿನ ಶಾಸಕರಿಗೆ, ಸಂಸದರಿಗೆ ಜನರ ನೋವು ಅರ್ಥವಾಗಿಲ್ಲ. ಸರಕಾರವನ್ನು ಎಚ್ಚರಿಸಲು ಪ್ರತಿಭಟನೆ ಮಾಡಿದ್ದೇವೆ. ನಾನು ಐದು ವರ್ಷ ಶಾಸಕನಾಗಿದ್ದಾಗ ಎಷ್ಟು ಮಳೆ ಬಂದರೂ ದುರಸ್ತಿ ಮಾಡಲು ಒತ್ತಡ ಹೇರಿ ಜನಸಂಚಾರಕ್ಕೆ ಅನುವು ಮಾಡಿದ್ದೆ. ಈಗ ಸಾವು-ನೋವುಗಳಾದರೂ ಸರಕಾರ ಸ್ಪಂದಿಸುತ್ತಿಲ್ಲ. ಮಳೆಗಾಲ ಮುಗಿದರೂ ದುರಸ್ತಿ ಭಾಗ್ಯ ಬಂದಿಲ್ಲ. ರಾಜ್ಯದಲ್ಲಿ ಸಂತ್ರಸ್ತರಿಗೆ ನೆರವು ಕೊಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಫಲವಾಗಿದ್ದಾರೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.