ಚುನಾವಣೆ ಕರ್ತವ್ಯ: ಸರಕಾರಿ ಬಸ್‌ ಸಂಚಾರ ಅಸ್ತವ್ಯಸ್ತ


Team Udayavani, Apr 19, 2019, 1:30 PM IST

kstrc

ಮಂಗಳೂರು: ಮತದಾನ ಹಿನ್ನೆಲೆಯಲ್ಲಿ ಗುರುವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕೆಎಸ್ಸಾರ್ಟಿಸಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರು ಸಕಾಲಕ್ಕೆ ಬಸ್‌ ಸೌಲಭ್ಯ ದೊರೆಯದೆ ಪರದಾಡಿದರು.

ಜಿಲ್ಲೆಯ ಸುಮಾರು 400ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳನ್ನು ಚುನಾವಣ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಮಂಗಳೂರು ವಿಭಾಗದಿಂದ ಪ್ರತೀ ದಿನ ಸುಮಾರು 389ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳು ವಿವಿಧ ಪ್ರದೇಶಗಳಿಗೆ ತೆರಳುತ್ತವೆ. ಈ ಬಾರಿ ಎ. 17, 18ರಂದು ಮಂಗಳೂರಿನ ಒಂದು ಮತ್ತು ಎರಡನೇ ಡಿಪೋದಿಂದ 138ಕ್ಕೂ ಹೆಚ್ಚಿನ ಬಸ್‌ಗಳನ್ನು ಚುನಾವಣೆಗಾಗಿ ಕಳುಹಿಸಲಾಗಿತ್ತು. ಪುತ್ತೂರು ವಿಭಾಗದಿಂದ ಸುಮಾರು 560 ಬಸ್‌ಗಳು ಸಂಚರಿಸುತ್ತಿದ್ದು, ಈ ಪೈಕಿ 263 ಬಸ್‌ ಸೇವೆಯಲ್ಲಿ ವ್ಯತ್ಯಯವಾಗಿತ್ತು.

ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಸಹಿತ ದೂರದ ಊರುಗಳಿಂದ ಆಗಮಿಸಿ ಸ್ವಂತ ಊರಿಗೆ ತೆರಳಲು ಬೆಳಗ್ಗೆ ನಗರದ ಬಿಜೈ ಕೆಎಸ್‌ಆರ್‌ ಟಿಸಿ ಮುಖ್ಯ ಬಸ್‌ ನಿಲ್ದಾಣಕ್ಕೆ ಧಾವಿಸುತ್ತಿದ್ದ ದೃಶ್ಯ ಕಾಣಿಸಿತು. ಬಿ.ಸಿ. ರೋಡ್‌, ಧರ್ಮಸ್ಥಳ, ಉಪ್ಪಿನಂಗಡಿ, ಚಿಕ್ಕಮಗಳೂರು, ಪುತ್ತೂರು ಸಹಿತ ವಿವಿಧ ಪ್ರದೇಶಗಳಿಗೆ ತೆರಳುವ ಬಸ್‌ ಸಂಖ್ಯೆ ವಿರಳವಿತ್ತು. ಮಂಗಳೂರಿನಿಂದ ಪುತ್ತೂರಿಗೆ ಕೂಡ ಕೆಲವೇ ಬಸ್‌ ಇದ್ದುದರಿಂದ ಹೆಚ್ಚಿನ ಮಂದಿ ಬೆಂಗಳೂರಿಗೆ ತೆರಳುವ ಐರಾವತ, ರಾಜಹಂಸ ಬಸ್‌ಗಳನ್ನೇರಿದ್ದು, ದುಪ್ಪಟ್ಟು ಹಣ ನೀಡಿ ಪ್ರಯಾಣಿಸಿದರು.

ಕಳೆದ ಬಾರಿ ಲೋಕಸಭಾ, ವಿಧಾನಸಭಾ ಚುನಾವಣೆಯ ಕಾರ್ಯದ ನಿಮಿತ್ತ ಜಿಲ್ಲೆಯ ಹೆಚ್ಚಿನ ಖಾಸಗಿ, ಸಿಟಿ ಬಸ್‌ಗಳು ತೆರಳಿದ್ದವು. ಆದರೆ ಈ ಬಾರಿ ಮಂಗಳೂರಿನ ಸಿಟಿ ಬಸ್‌ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿರಲಿಲ್ಲ. ಹಾಗಾಗಿ ಎಲ್ಲ ಸಿಟಿ ಬಸ್‌ಗಳು ಎಂದಿನಂತೆ ಕಾರ್ಯಾಚರಿಸಿದವು.

ಮುಂಗಡ ಬುಕ್ಕಿಂಗ್‌ ಫುಲ್‌
ಮತದಾನಕ್ಕೆಂದು ಬಂದ ಮಂದಿಗೆ ಸಾಲು ರಜೆ ಇದೆ. ಎ. 17ರಂದು ಮಹಾವೀರ ಜಯಂತಿ, ಎ. 18 ಚುನಾವಣೆ, ಎ. 19 ಗುಡ್‌ಫ್ರೈಡೇ, ಎ. 21ರಂದು ರವಿವಾರ. ನಡುವಣ ಎ. 20ರ ಶನಿವಾರ ಮಾತ್ರ ಕೆಲಸದ ದಿನ. ಎ. 21ಕ್ಕೆ ಈಗಾಗಲೇ ಹೆಚ್ಚಿನ ಬಸ್‌ ಮುಂಗಡ ಬುಕ್ಕಿಂಗ್‌ ಆಗಿದೆ. ಇದೇ ಕಾರಣಕ್ಕೆ ಮಂಗಳೂರಿನಿಂದ ಮೈಸೂರು, ಬೆಂಗಳೂರು ಮತ್ತಿತರ ರೂಟ್‌ಗಳಿಗೆ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ ನಿಯೋಜಿಸಲು ಕೆಎಸ್ಸಾರ್ಟಿಸಿ ತೀರ್ಮಾನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.