ಮತದಾರರ ಪಟ್ಟಿಯಲ್ಲಿ ಲೋಪ; ಆಯೋಗಕ್ಕೆ ದೂರು: ಲೋಬೋ


Team Udayavani, Apr 19, 2019, 3:43 PM IST

j-r-lobo

ಮಂಗಳೂರು: ಮತದಾರರ ಪಟ್ಟಿಯಿಂದ ಗಣನೀಯ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಕೈಬಿಡಲಾಗಿದ್ದು, ಅವರೆಲ್ಲ ತಮ್ಮ ಹಕ್ಕುಗಳಿಂದ ವಂಚಿತ ರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಶಾಸಕ ಜೆ.ಆರ್‌. ಲೋಬೋ ಅವರು, ಈ ಬಗ್ಗೆ ಚುನಾವಣ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.

ನಗರದ ಕಾಂಗ್ರೆಸ್‌ ಜಿಲ್ಲಾ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಪಟ್ಟಿಯಲ್ಲಿ ಹಲವು ಲೋಪಗಳು ಕಂಡುಬಂದಿವೆ. ಮತದಾರರ ಹೆಸರುಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ, ಮತದಾರರಿಗೆ ಅವಕಾಶ ನೀಡದೆ ಕೊನೆ ಕ್ಷಣದಲ್ಲಿ ಏಕಾಏಕಿ ತೆಗೆದು ಹಾಕಲಾಗಿದೆ. ಇದು ಖಂಡನೀಯ ಎಂದರು.

ಕೆಲವು ಉದಾಹರಣೆಗಳನ್ನು ಉಲ್ಲೇಖೀಸುವುದಾದರೆ, ಮಂಗಳೂರು ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಮತಗಟ್ಟೆ 1ರಲ್ಲಿ ಕೆಲವು ಹೆಸರುಗಳನ್ನು ತೆಗೆದು ಹಾಕಲಾಗಿದೆ. ತೆಗೆದ ಕೆಲವು ಹೆಸರುಗಳನ್ನು ಪೂರಕ ಪಟ್ಟಿಯಲ್ಲಿ ಸೇರಿಸಿ ಮತ್ತೆ ತೆಗೆದು ಹಾಕಲಾಗಿದೆ. ಇವರೆಲ್ಲರೂ ಊರಿನಲ್ಲಿದ್ದು, ಯಾವುದೇ ಮುನ್ಸೂಚನೆ ನೀಡದೆ ಈ ರೀತಿ ಮಾಡಿರುವುದು ತಪ್ಪು ಎಂದು ಹೇಳಿದರು.

ಬಿಕರ್ನಕಟ್ಟೆ ಬೂತ್‌ ನಂ.55ರಲ್ಲಿ ಕೊಟ್ಟಿರುವ ಮತದಾರರ ಪಟ್ಟಿಯಲ್ಲಿ 942 ಹೆಸರುಗಳಿವೆ. ಆದರೆ ಆಯೋಗದ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿದಾಗ ಮತಗಟ್ಟೆಯಲ್ಲಿ 1,172 ಮತದಾರರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇವರು ಮತದಾನ ಮಾಡಿದ್ದಾರೆ. ಹೀಗೆ 230 ಮತದಾರರ ಮತದಾನ ಹಕ್ಕನ್ನು ಕಾನೂನುಬಾಹಿರವಾಗಿ ಕಸಿದುಕೊಳ್ಳಲಾಗಿದೆ. ನಾಲ್ಯಪದವಿನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದ 8 ಮಂದಿಗೆ ಈ ಬಾರಿ ಅವಕಾಶವಿಲ್ಲ ಎಂದವರು ವಿವರಿಸಿದರು.

ಈ ರೀತಿ ಹಲವಾರು ಬೂತ್‌ಗಳಲ್ಲಿ ಕೊನೆಗಳಿಗೆಯಲ್ಲಿ ಮತದಾರರಿಗೆ ಯಾವುದೇ ನೋಟಿಸ್‌ ಅಥವಾ ಮುನ್ಸೂಚನೆ ನೀಡದೆ ಹೆಸರುಗಳನ್ನು ತೆಗೆದು ಹಾಕಲಾಗಿದೆ. ಇದರ ಹಿಂದೆ ರಾಜಕೀಯ ಕೈವಾಡ ಇರುವ ಸಂಶಯ ಕಾಡುತ್ತಿದೆ ಎಂದು ಆರೋಪಿಸಿದರು.

ಇಡೀ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 5,000 ಹೆಸರುಗಳನ್ನು ತೆಗೆದು ಹಾಕಿದಂತಾಗುತ್ತದೆ. ಇವು ನಿರ್ಣಾಯಕ ಮತಗಳು. ಆದುದರಿಂದ ಈ ಮತದಾರರ ಪಟ್ಟಿಯ ಕುರಿತು ಸಂಪೂರ್ಣ ತನಿಖೆಗೆ ಚುನಾವಣಆಯೋಗ ಆದೇಶಿಸಬೇಕು ಮತ್ತು ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸುತ್ತಿದ್ದೇನೆ ಎಂದವರು ಹೇಳಿದರು.

ಮತದಾರರ ಪಟ್ಟಿಯ ಗೊಂದಲ ನಿವಾರಣೆ ಮತ್ತು ಅರ್ಹರು ಮತದಾನದಿಂದ ವಂಚಿತರಾಗದಂತೆ ಮಾಡಲು ಅಧಾರ್‌ ಕಾರ್ಡ್‌ನ್ನು ಮತದಾರರ ಪಟ್ಟಿಗೆ ಲಿಂಕ್‌ ಮಾಡುವಂತೆ ಚುನಾವಣ ಆಯೋಗಕ್ಕೆ ಸಲಹೆ ಮಾಡುವುದಾಗಿ ಅವರು ತಿಳಿಸಿದರು.ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಸಲೀಂ, ವಿಶ್ವಾಸ್‌ದಾಸ್‌, ನೀರಜ್‌ಪಾಲ್‌, ಅರುಣ್‌ ಕುವೆಲ್ಲೊ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.