ಮದನಿನಗರ ಘರ್ಷಣೆ ಪ್ರಕರಣ: 7 ಸೆರೆ
Team Udayavani, Apr 15, 2019, 10:01 AM IST
ಉಳ್ಳಾಲ: ಮಂಗಳೂರಿನಲ್ಲಿ ಶನಿವಾರ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ರ್ಯಾಲಿಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ಬಸ್ಸಿಗೆ ನುಗ್ಗಿ ದಾಂಧಲೆ, ವಾಹನಗಳಿಗೆ ಕಲ್ಲು ತೂರಾಟ ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 50ಕ್ಕೂ ಅಧಿಕ ಮಂದಿ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧಿ ಇಬ್ಬರು ಬಾಲಕರು ಸಹಿತ ಏಳು ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕುಪ್ಪೆಪದವು ಕಿಲಿಂಜೂರು ನಿವಾಸಿ ಸಲ್ಮಾನ್ ಫಾರಿಷ್ (21), ಜಪ್ಪಿ ಎಂ. ಆರ್. ಭಟ್ ಲೇನಿನ ಮಹಮ್ಮದ್ ಸಿನಾನ್ (19), ಮಹಾಂಕಾಳಿ ಪಡುವಿನ ಮಹಮ್ಮದ್ ಅರ್ಫಾಝ್ (27), ಮದನಿನಗರ ಶಾಂತಿಬಾಗ್ನ ನೌಫಾಲ್ ಯಾನೆ ಕಿಡ್ನಿ ನೌಫಾಲ್ (20), ಅಡ್ಯಾರು ಕೆಂಪುಗುಡ್ಡೆ ಕಣ್ಣೂರಿನ ಮಹಮ್ಮದ್ ರಫೀಜ್ ಯಾನೆ ಅಫ್ರೀದ್ (20) ಹಾಗೂ ಇಬ್ಬರು ಬಾಲಕರು ಬಂಧಿತರು.
ಇವರ ವಿರುದ್ಧ ಬಸ್ಸಿನ ಒಳಗೆ ನುಗ್ಗಿ ದಾಂಧಲೆ, ಕಲ್ಲು ತೂರಾಟ, ಭಯದ ವಾತಾವರಣ, ಕೊಲೆ ಯತ್ನ, ಮಾನಭಂಗ ಯತ್ನ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕ್ಷುಲ್ಲಕ ವಿಚಾರ ಕಾರಣ: ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುತ್ತಿದ್ದಕಾರು ಹಾಗೂ ಜಪ್ಪು ನಿವಾಸಿಗಳಿದ್ದ ಸ್ಕೂಟರ್ ನಡುವೆ ಓವರ್ ಟೇಕ್ ಮಾಡುವ ವಿಚಾರವಾಗಿ ವಾಗ್ವಾದ ನಡೆದಿತ್ತು. ಈ ಸಂದರ್ಭ ಹೊಡೆದಾಟ ನಡೆದಿತ್ತು. ರ್ಯಾಲಿಯಿಂದ ವಾಪಸಾಗುತ್ತಿದ್ದ ಬಸ್ಸಿನಲ್ಲಿದ್ದ ಯುವಕರ ತಂಡ ಘರ್ಷಣೆ ತಡೆಯಲು ಯತ್ನಿಸಿದಾಗ ಗುಂಪೊಂದು ಬಸ್ಸು ಹಾಗೂ ಕಾರಿಗೆ ಕಲ್ಲು ತೂರಾಟ ನಡೆಸಿ ಮಹಿಳೆಯರ ಮೇಲೆ ಕೈ ಮಾಡಿತ್ತು. ಗಾಯಗೊಂಡಿರುವ ನಾಲ್ವರು ಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡು ಬಸ್ಸು ಹಾಗೂ ಒಂದು ಕಾರಿಗೆ ಹಾನಿಯಾಗಿತ್ತು.
ಬಂದೋಬಸ್ತು: ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಇನ್ಸ್ಪೆಕ್ಟರ್ಗಳು, 3 ಪಿಸಿಆರ್ ವಾಹನಗಳು ಸ್ಥಳದಲ್ಲಿವೆ.’
ಘಟನೆ ದುರದೃಷ್ಟಕರ: ಸಚಿವ ಯು.ಟಿ. ಖಾದರ್
ಮಂಗಳೂರು: ದೇರಳಕಟ್ಟೆ ಸಮೀಪದ ಮದನಿ ನಗರದಲ್ಲಿ ಶನಿವಾರ ವಾಹನ ಳಿಗೆ ಕಲ್ಲು ತೂರಾಟ ಮಾಡಿರುವ ಘಟನೆ ದುರದೃಷ್ಟಕರ. ಇದರ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ . ಘಟನೆಯಲ್ಲಿ ಎರಡೂ ಕಡೆಯವರು ಗಾಯಗೊಂಡಿದ್ದಾರೆ. ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ನೈಜ ಆರೋಪಿಗಳ ಬಂಧನಕ್ಕೆ ಶ್ರಮಿಸುತ್ತಿದ್ದಾರೆ. ಬಿಜೆಪಿಯವರು ಈ ಘಟನೆಯನ್ನು ಚುನಾವಣ ಲಾಭಕ್ಕೆ ಬಳಸಿಕೊಳ್ಳುತ್ತಿದ್ದು, ಇದು ಅವರಿಗೆ ಶೋಭೆ ತರುವುದಿಲ್ಲ. ಸೋಲಿನ ಭೀತಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದ್ದಾರೆ. ಘಟನೆಯನ್ನು ಶಮನಗೊಳಿಸಿ ಶಾಂತಿ ಕಾಪಾಡಲು ಬಿಜೆಪಿಯವರು ಶ್ರಮಿಸ ಬೇಕಿತ್ತು. ಆದರೆ ಹಾಗೆ ಮಾಡದಿರುವುದು ಖಂಡನೀಯ. ಘಟನೆಗೆ ಸಂಬಂಧಿಸಿ ತನ್ನ ಮೇಲೆ ಆರೋಪ ಮಾಡಿರುವುದನ್ನು ಕ್ಷೇತ್ರದ ಜನರು ನಂಬುವುದಿಲ್ಲ ಎಂಬ ವಿಶ್ವಾಸ ತನಗಿದೆ ಎಂದು ಯು.ಟಿ. ಖಾದರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ