“ಮಕ್ಕಳನ್ನು ಪ್ರಜ್ಞಾವಂತ ಪ್ರಜೆಗಳನ್ನಾಗಿಸಿ’


Team Udayavani, Aug 4, 2019, 5:00 AM IST

x-18

ಮಹಾನಗರ: ಮಕ್ಕಳಲ್ಲಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು, ಸ್ವಯಂ ಶಿಸ್ತು, ಧೈರ್ಯ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪಾರಿಣಾಮಗಳಿಗೆ ಪ್ರತಿರೋಧ, ಸಾಕಾರಾತ್ಮಕ ಚಿಂತನೆಗಳನ್ನು ಮೂಡಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಯೋಜನೆಗೆ ಆ. 3ರಂದು ನಗರದ ಎಕ್ಕೂರು 2ನೇ ಕೇಂದ್ರೀಯ ವಿದ್ಯಾಲಯದಲ್ಲಿ ಚಾಲನೆ ನೀಡಲಾಯಿತು.

ಯೋಜನೆಗೆ ಚಾಲನೆ ನೀಡಿದ ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ್‌, ವಿದ್ಯಾರ್ಥಿ ದೆಸೆ ಯಿಂದಲೇ ಮಕ್ಕಳನ್ನು ಪ್ರಜ್ಞಾವಂತ ಪ್ರಜೆ ಗಳನ್ನಾಗಿ ರೂಪಿಸುವ ಉದ್ದೇಶದಿಂದ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ದಿ| ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಕನಸಿನಂತೆ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಯೋಜನೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಈ ಬಾರಿ 10 ಶಾಲೆ ಆಯ್ಕೆ
ಪ್ರಸ್ತಾವನೆಗೈದ ಮಂಗಳೂರಿನ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್‌ ಕಮಾಂಡೆಂಟ್‌ ಹಾಗೂ ಯೋಜನೆಯ ಮಂಗಳೂರು ನೋಡಲ್‌ ಅಧಿಕಾರಿ ಜನಾರ್ದನ ಆರ್‌., ಈ ಯೋಜನೆ ಕೇರಳದಲ್ಲಿ ಪ್ರಥಮವಾಗಿ ಜಾರಿಗೆ ಬಂದಿದ್ದು, ರಾಜ್ಯದಲ್ಲಿ ಬೆಂಗಳೂರು ಹಾಗೂ ಇತರ ಕೆಲವು ಜಿಲ್ಲೆಗಳಲ್ಲಿ 2015ರಲ್ಲಿ ಆರಂಭವಾಗಿದೆ. ಈಗ ರಾಜ್ಯದ 97 ಶಾಲೆಗಳಲ್ಲಿ ಅನುಷ್ಠಾನದಲ್ಲಿದೆ. ದ.ಕ. ಜಿಲ್ಲೆಯಲ್ಲಿ ಕಳೆದ ವರ್ಷ 3 ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಯೋಜನೆ ಅನುಷ್ಠಾನಿಸಲಾಯಿತು.

ಈ ಸಾಲಿನಲ್ಲಿ ಜಿಲ್ಲೆಯಲ್ಲಿ 10 ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 300 ಶಾಲೆಗಳಲ್ಲಿ ಈ ಯೋಜನೆ ಈ ವರ್ಷ ಜಾರಿಗೊಳ್ಳುತ್ತಿದೆ ಎಂದು ಹೇಳಿದರು.

ಅನುಷ್ಠಾನ ಎಲ್ಲೆಲ್ಲಿ
ಬೈಕಂಪಾಡಿಯ ಕೇಂದ್ರೀಯ ವಿದ್ಯಾಲಯ, ಕೇಂದ್ರೀಯ ವಿದ್ಯಾಲಯ ನಂ-2 ಮಂಗಳೂರು, ಪುತ್ತೂರು ಕೊಂಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜು, ಸರಕಾರಿ ಪ.ಪೂ. ಕಾಲೇಜು ಸವಣೂರು, ಬಂಟ್ವಾಳ ತಾಲೂಕಿನ ಮಂಚಿ ಕೋಳ್ನಾಡು ಸರಕಾರಿ ಪ್ರೌಢಶಾಲೆ, ಸರಕಾರಿ ಪ.ಪೂ. ಕಾಲೇಜು ಕುರ್ನಾಡು, ಸುಳ್ಯ ತಾಲೂಕಿನ ಸರಕಾರಿ ಪ್ರೌಢ ಶಾಲೆ ಎಲಿಮಲೆ, ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಬೆಳ್ಳಾರೆ, ಸರಕಾರಿ ಪ್ರೌಢಶಾಲೆ ಅಳಿಯೂರು ಮೂಡುಬಿದಿರೆಯಲ್ಲಿ ಸ್ಟೂಡೆಂಟ್‌ ಕೆಡೆಟ್‌ ಯೋಜನೆ ಆರಂಭಗೊಳ್ಳುತ್ತಿದೆ ಎಂದರು.
ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಡಾ| ವಿಕ್ರಂ ಅಮ್ಟೆ ಅವರು ವಿದ್ಯಾರ್ಥಿಗಳಿಗೆ ಕಿಟ್‌ಗಳನ್ನು ವಿತರಿಸಿದರು. ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಎನ್‌.ಎಸ್‌. ಯಾದವ ಸ್ವಾಗತಿಸಿದರು.

ಮಂಗಳೂರಿನ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್‌ ಸಹಾಯಕ ಕಮಾಂಡೆಂಟ್‌ಗಳಾದ ಶರತ್‌, ರಾಜು, ಅಧಿಕಾರಿಗಳಾದ ರಾಜು, ಪ್ರಮೋದ್‌ ಕುಮಾರ್‌, ಗಣೇಶ್‌, ದಿನೇಶ್‌ ಮತ್ತಿತರರು ಉಪಸ್ಥಿತರಿದ್ದರು. ಅಧಿಕಾರಿ ರಾಜರಾಮ್‌ ಭಟ್‌ ವಂದಿಸಿದರು.

ಒಟ್ಟು 23 ತರಗತಿ
ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಯೋಜನೆಯಲ್ಲಿ ಹೊರಾಂಗಣ ಮತ್ತು ಒಳಾಂಗಣ ವಿಷಯಗಳ ಕುರಿತು ಪ್ರತಿತಿಂಗಳು ಮೂರು ತರಗತಿಗಳಂತೆ ಒಟ್ಟು 23 ತರಗತಿಗಳನ್ನು ನಡೆಸಲಾಗುತ್ತಿದೆ. ಶನಿವಾರ ತರಗತಿ ನಡೆಯುತ್ತದೆ. ಅಪರಾಧ ತಡೆಗಟ್ಟುವಿಕೆ ಮತ್ತು ನಿಯಂತ್ರಣ, ರಸ್ತೆ ಸುರಕ್ಷತೆ ಮತ್ತು ಸಂಚಾರ ಅರಿವು, ವಿಪತ್ತು ನಿರ್ವಹಣೆ, ತಾಳ್ಮೆ, ಸಹಿಷ್ಣುತೆ, ಹಿರಿಯರ ಬಗ್ಗೆ ಗೌರವ, ಭಾರತದ ಸಂವಿಧಾನ, ಬಾಲ ನ್ಯಾಯ ಕಾಯ್ದೆ-2000, ಸಮುದಾಯ ಪೊಲೀಸಿಂಗ್‌ ಮತ್ತು ವಿದ್ಯಾರ್ಥಿಗಳು, ಮಾನವ ಹಕ್ಕುಗಳು ಮತ್ತು ಸಂರಕ್ಷಣೆ, ನೈತಿಕ ಮೌಲ್ಯಗಳು, ಪ್ರಥಮ ಚಿಕಿತ್ಸೆ, ಸಾಮಾಜಿಕ ಪಿಡುಗುಗಳು, ದುಶ್ಚಟಗಳ ವಿರುದ್ದ ಹೋರಾಟ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.