“ಸ್ಯಾನಿಟರಿ ನ್ಯಾಪ್ಕಿನ್ಸ್‌’ ಸಂಸ್ಕರಣೆಗೆ ಪ್ರತ್ಯೇಕ ಯಂತ್ರ


Team Udayavani, Jul 13, 2019, 5:00 AM IST

f-6

ಮಹಾನಗರ: ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸುವ ಹೊಸ ನೀತಿಗೆ ಮೊರೆ ಹೋದ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇದೀಗ ಸ್ಯಾನಿಟರಿ ತ್ಯಾಜ್ಯ ನಿರ್ವಹಣೆಗೆ “ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್’ ವ್ಯವಸ್ಥೆ ಅಳವಡಿಸಲು ನಿರ್ಧರಿಸಲಾಗಿದೆ.

ಸ್ವತ್ಛ ಭಾರತ ಯೋಜನೆಯಡಿಯಲ್ಲಿ ಒಟ್ಟು 12.56 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ಪ್ರಮುಖ 8 ಶೌಚಾಲಯಗಳಲ್ಲಿ ಪ್ರತ್ಯೇಕ ಸ್ಯಾನಿಟರಿ ನ್ಯಾಪಿRನ್‌ ಇನ್ಸಿನರೇಟರ್ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಈ ಕುರಿತ ವಿಸ್ತೃತ ಯೋಜನ ವರದಿ (ಡಿಪಿಆರ್‌)ಗೆ ಒಪ್ಪಿಗೆ ಲಭಿಸಿದ್ದು, ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ.

ನಗರದ 8 ಕಡೆಗಳಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಸ್ಯಾನಿಟರಿ ಇನ್ಸಿನರೇಟರ್ ವ್ಯವಸ್ಥೆ ಅಳವಡಿಸಲಾಗುತ್ತದೆ. ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್ರ ಮೂಲಕ ಸ್ಯಾನಿಟರ್‌ ತ್ಯಾಜ್ಯಗಳನ್ನು ಸ್ಥಳದಲ್ಲೇ ಸಂಸ್ಕರಿಸ ಲಾಗುತ್ತದೆ. ಇದರಿಂದ ಡಂಪಿಂಗ್‌ ಯಾರ್ಡ್‌ಗಳಿಗೆ ತೆರಳುವ ಸ್ಯಾನಿಟರಿ ತ್ಯಾಜ್ಯ ಪ್ರಮಾಣ ಕಡಿಮೆಯಾಗಲಿದೆ.

ಸದ್ಯ ನಗರ ವ್ಯಾಪ್ತಿಯಲ್ಲಿ ದಿನಕ್ಕೆ 350ರಿಂದ 400 ಟನ್‌ ಕಸಗಳು ಸಂಗ್ರಹ ವಾಗುತ್ತಿದ್ದು, ಅದನ್ನು ಹಸಿ ಕಸ, ಒಣ ಕಸ ಎಂಬುದಾಗಿ ಪ್ರತ್ಯೇಕಿಸುವ ಸಲುವಾಗಿ ಕಠಿನ ಕ್ರಮ ಜರಗಿಸಲಾಗುತ್ತಿದೆ. ಹೊಸ ನಿಯಮದಂತೆ ಸ್ಯಾನಿಟರಿ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ. ಸಂಗ್ರಹಿಸಿದ ಸ್ಯಾನಿಟರಿ ತ್ಯಾಜ್ಯಗಳನ್ನು ಆಯಾಯಾ ವಲಯದ ಕಸ ಸಂಗ್ರಹಣ ವಾಹನಗಳು ಅವರ ಮಿತಿಯೊಳಗಿನ ಸಾರ್ವಜನಿಕ ಶೌಚಾಲಯಗಳಲ್ಲಿ ಅಳವಡಿಸಲಾಗುವ ಸ್ಯಾನಿಟರಿ ಇನ್ಸಿನರೇಟರ್ ಬಳಿ ತರುತ್ತಾರೆ. ಶೌಚಾಲಯ ನಿರ್ವಾಹಕರು ಅದನ್ನು ಮುಂದಿನ ಪ್ರಕ್ರಿಯೆಗೆ ಒಳಪಡಿಸುತ್ತಾರೆ. ಡಂಪಿಂಗ್‌ ಯಾರ್ಡ್‌ಗಳಿಗೆ ಹೋಗುವ ಸ್ಯಾನಿಟರಿ ತ್ಯಾಜ್ಯಗಳನ್ನು ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್ ಮೂಲಕ ಸಂಸ್ಕರಿಸಿದಾಗ ಅಲ್ಲಿಗೆ ಹೋಗುವ ತ್ಯಾಜ್ಯಗಳ ಸಂಖ್ಯೆಯಲ್ಲಿ ಇಳಿತವಾಗಲಿದೆ.

ಸ್ಯಾನಿಟರಿ ತ್ಯಾಜ್ಯ ಪ್ರತ್ಯೇಕ ಸಂಗ್ರಹ
ಪಾಲಿಕೆ ವ್ಯಾಪ್ತಿಯಲ್ಲಿ ಸ್ಯಾನಿಟರಿ ತ್ಯಾಜ್ಯವನ್ನು ಪ್ರತಿ ದಿನ ಪ್ರತ್ಯೇಕವಾಗಿ ಸಂಗ್ರಹಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಎಲ್ಲ ತ್ಯಾಜ್ಯಗಳೊಂದಿಗೆ ಸ್ಯಾನಿಟರಿ ತ್ಯಾಜ್ಯಗಳನ್ನು ಸಂಗ್ರಹಿಸಲಾಗುತ್ತಿತ್ತು. ಇದರಿಂದ ಸಂಸ್ಕರಣೆಗೆ ಪ್ರತ್ಯೇಕಿಸಲು ಕಷ್ಟವಾಗುತ್ತಿತ್ತು. ಕೆಲವು ಮನೆ, ಹಾಸ್ಟೆಲ್‌ಗ‌ಳಲ್ಲಿ ಸ್ಯಾನಿಟರಿ ತ್ಯಾಜ್ಯಗಳನ್ನು ಶೌಚಾಲಯಕ್ಕೆ ಹಾಕುವುದರಿಂದ ಮ್ಯಾನ್‌ಹೋಲ್‌ ಬ್ಲಾಕ್‌ ಆಗಿ ಸಮಸ್ಯೆಗಳು ಎದುರಾಗುತ್ತಿತ್ತು. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಪಾಲಿಕೆ ದಿನನಿತ್ಯ ಪ್ರತ್ಯೇಕ ಚೀಲದ ಮೂಲಕ ಸ್ಯಾನಿಟರಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸಂಸ್ಕರಣೆಗೆ ನಿರ್ಧರಿಸಲಾಗಿದೆ.

ಏನಿದು ಸ್ಯಾನಿಟರಿ ನ್ಯಾಪ್ಕಿನ್ಸ್‌ ಇನ್ಸಿನರೇಟರ್?
ಸ್ಯಾನಿಟರಿ ಇನ್ಸಿನರೇಟರ್ ಸ್ಯಾನಿಟರಿ ತ್ಯಾಜ್ಯಗಳನ್ನು ಸಂಸ್ಕರಣೆ ಮಾಡುವ ಯಂತ್ರವಾಗಿದ್ದು, ಇದರಲ್ಲಿ 50ರಿಂದ 100 ಕೆಜಿ ಸಾಮರ್ಥ್ಯ ಇರುತ್ತದೆ. ಈ ಯಂತ್ರದ ಮೂಲಕ ಸ್ಯಾನಿಟರಿ ತ್ಯಾಜ್ಯಗಳನ್ನು ಅಲ್ಲೇ ಸಂಸ್ಕರಣೆ ಮಾಡಲಾಗುತ್ತದೆ. ನಗರದ 8 ಜಾಗಗಳಲ್ಲಿ ಮಾತ್ರ ಅಳವಡಿಸಲಾಗುತ್ತಿದ್ದು, ಅದಕ್ಕಾಗಿ ನಿತ್ಯ ನಗರ ಪ್ರದೇಶಗಳಲ್ಲಿ ಸಂಗ್ರಹವಾಗುವ ಸ್ಯಾನಿಟರಿ ತ್ಯಾಜ್ಯಗಳ ಪ್ರಮಾಣವನ್ನು ತಿಳಿಯಲು ನಿತ್ಯ ಕಸ ಸಂಗ್ರಹದಲ್ಲಿ ಸ್ಯಾನಿಟರಿ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ.

ಸ್ಯಾನಿಟರಿ ತ್ಯಾಜ್ಯ ಪ್ರತ್ಯೇಕಿಸಿ ಕೊಡಿ
ಸ್ವತ್ಛತೆ, ಸಂಸ್ಕರಣೆ ಹಿನ್ನೆಲೆಯಲ್ಲಿ ಪಾಲಿಕೆ ಸ್ಯಾನಿಟರಿ ನ್ಯಾಪ್ಕಿನ್‌ ಇನ್ಸಿನರೇಟರ್ ಅಳವಡಿಸಲು ಸಿದ್ಧತೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಜನರು ಮನೆಯ ಸ್ಯಾನಿಟರಿ ತ್ಯಾಜ್ಯಗಳನ್ನು ಕಸ ಸಂಗ್ರಹಣೆಗೆ ಬರುವ ವಾಹನಗಳಿಗೆ ಪ್ರತ್ಯೇಕವಾಗಿ ನೀಡಬೇಕು. ಪ್ರಸ್ತುತ ಸ್ಯಾನಿಟರಿ ನ್ಯಾಪ್ಕಿನ್‌ ಇನ್ಸಿನರೇಟರ್ ಅಳವಡಿಕೆಯಾಗದೆ ಇದ್ದರೂ ಯಂತ್ರ ಖರೀದಿಯ ಸಾಮಾರ್ಥ್ಯ ನಿಗದಿಪಡಿಸಲು ಈಗಾಲೇ ಪ್ರತ್ಯೇಕವಾಗಿ ನೀಡಬೇಕಾಗುತ್ತದೆ.

 ಸ್ಯಾನಿಟರಿ ತ್ಯಾಜ್ಯಕ್ಕೆ ಮುಕ್ತಿ
ಹಸಿ, ಒಣ ಕಸ ಮುಕ್ತಿಗೆ ಪರ್ಯಾಯ ದಾರಿಯನ್ನು ಈಗಾಗಲೇ ಕಂಡುಹಿಡಿಯಲಾಗಿತ್ತು. ಆದರೆ ಸ್ಯಾನಿಟರಿ ತ್ಯಾಜ್ಯಗಳನ್ನು ಡಂಪಿಂಗ್‌ ಯಾರ್ಡ್‌ಗೆ ಕೊಂಡೊಯ್ದು ಪ್ರತ್ಯೇಕಿಸಿ ಸಂಸ್ಕರಿಸುವುದು ಕಷ್ಟದ ಕೆಲಸವಾಗಿತ್ತು. ಅದಕ್ಕಾಗಿ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ.
– ಮಧು ಮನೋಹರ್‌, ಪರಿಸರ ಅಭಿಯಂತರರು

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.