- Saturday 14 Dec 2019
ಶ್ರೀಮತಿ ಶೆಟ್ಟಿ ಹತ್ಯೆ ಆರೋಪಿಯೊಂದಿಗೆ ಪೊಲೀಸರ ಸ್ಥಳ ಮಹಜರು
Team Udayavani, May 18, 2019, 3:29 PM IST
ಮಂಗಳೂರು: ಶ್ರೀಮತಿ ಶೆಟ್ಟಿ ಅವರ ಭೀಕರ ಕೊಲೆ ಆರೋಪಿಯೊಂದಿಗೆ ಪೊಲೀಸರು ಮಂಗಳೂರು ನಗರದ ವಿವಿಧೆಡೆ ಶನಿವಾರ ಸ್ಥಳ ಮಹಜರು ನಡೆಸಿದರು.
ಆರೋಪಿ ಜೋನಸ್ ಜೂಲಿನ್ ಸ್ಯಾಮ್ಸನ್ನನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಬಿಗಿ ಭದ್ರತೆಯೊಂದಿಗೆ ಪೊಲೀಸರ ತಂಡ ನಗರದ ವಿವಿಧೆಡೆ ಪರಿಶೀಲನೆಗಾಗಿ ಕರೆದೊಯ್ದು ತನಿಖೆ ನಡೆಸಿದ್ದಾರೆ.
ದೇಹದ ಭಾಗಗಳನ್ನು ಎಸೆಯಲಾಗಿದ್ದ ನಂದಿಗುಡ್ಡೆ, ಕಾಲನ್ನು ಎಸೆಯಲಾಗಿದ್ದ ಪದುವಪಾರ್ಕ್,ತಲೆ ಎಸೆಯಲಾಗಿದ್ದ ಕದ್ರಿ ಪಾರ್ಕ್ ಮತ್ತು ಸ್ಕೂಟರ್ ಬಿಡಲಾಗಿದ್ದ ನಾಗೋರಿಗೆ ಸ್ಯಾಮ್ಸನ್ನನ್ನು ಕರೆದೊಯ್ದು ತನಿಖೆ ನಡೆಸಲಾಗಿದೆ. ಈ ವೇಳೆ ವಿಧಿ ವಿಜ್ಞಾನ ಪ್ರಯೋಗಾಲಯದತಜ್ಞರು ಹಾಜರಿದ್ದರು.
ನಗರದ ಮಂಗಳಾದೇವಿ ಬಳಿಯ ಅಮರ್ ಆಳ್ವ ರಸ್ತೆಯ ನಿವಾಸಿ ಶ್ರೀಮತಿ ಶೆಟ್ಟಿ ಅವರ ದೇಹವನ್ನು ತುಂಡರಿಸಿ 3 ಕಡೆ ಎಸೆಯಲಾಗಿತ್ತು.
ಪೈಶಾಚಿಕ ಕೃತ್ಯವನ್ನು ಮಂಗಳೂರು ಪೊಲೀಸರು ಭೇದಿಸಿ ಆರೋಪಿ ದಂಪತಿಗಳಾದ ಜೋನಸ್ ಜೂಲಿನ್ ಸ್ಯಾಮ್ಸನ್ (36) ಮತ್ತು ಪತ್ನಿ ವಿಕ್ಟೋರಿಯಾ ಮಥಾಯಿಸ್ (46) ರನ್ನು ಬಂಧಿಸಿದ್ದರು.
ಶ್ರೀಮತಿ ಅವರಿಂದ ಆರೋಪಿಗಳು ಒಂದು ಲಕ್ಷ ರೂ. ಸಾಲ ಪಡೆದಿದ್ದು, 40 ಸಾವಿರ ರೂ.ಗಳನ್ನು ಮರಳಿಸಿದ್ದರು. ಬಾಕಿ 60,000 ರೂ.ಗಳನ್ನು ಕೊಡುವಂತೆ ಕೇಳಲೆಂದು ಮೇ 11ರಂದು ಬೆಳಗ್ಗೆ ಶ್ರೀಮತಿ ಅವರು ಸ್ಯಾಮ್ಸನ್ ಮನೆಗೆ ಹೋಗಿದ್ದರು. ಈ ಸಂದರ್ಭ ವಾಗ್ವಾದ ನಡೆದು ಆಕೆಯನ್ನು ದಂಪತಿ ಕೊಲೆ ಮಾಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ .
ಈ ವಿಭಾಗದಿಂದ ಇನ್ನಷ್ಟು
-
ಮಂಗಳೂರು: ಅಪ್ರಾಪ್ತ ವಯಸ್ಸಿನ ಪುತ್ರಿ ಮೇಲೆ ನಿರಂತರ ಅತ್ಯಾಚಾರ ಮಾಡಿ ಆಕೆ ಮಗುವಿಗೆ ಜನ್ಮ ನೀಡಿದ ಅಪರಾಧವು ಮಂಗಳೂರಿನ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ...
-
ಮಂಗಳೂರು: ಸುಮಾರು 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ಡಿ. 26ರಂದು ಕಂಕಣ ಸೂರ್ಯಗ್ರಹಣ ಗೋಚರವಾಗಲಿದೆ. ಇದರ ವೀಕ್ಷಣೆಗಾಗಿ ಪಿಲಿಕುಳ ಪ್ರಾದೇಶಿಕ...
-
ಮಹಾನಗರ: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 8 ಕೆರೆಗಳ ಅಭಿವೃದ್ಧಿಗಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಡಿ 3.65 ಕೋ.ರೂ. ಬಿಡುಗಡೆ ಯಾಗಿದೆ...
-
ಮಹಾನಗರ: ಮಹಾನಗರ ಪಾಲಿಕೆಯ ನಿಗದಿತ ಪೌರ ಸೇವೆಗಳು ಮುಂದಿನ ಒಂದು ತಿಂಗಳಲ್ಲಿ ಆನ್ಲೈನ್ ಮುಖೇನ ಜನರ ಕೈಗೆಟಕುವಂತೆ ಮಾಡಲು ಪಾಲಿಕೆ ಕೊನೆಯ ಹಂತದ ಸಿದ್ಧತೆ ನಡೆಸುತ್ತಿದೆ....
-
ಮಂಗಳೂರು: ಸಿಎಂ ಯಡಿಯೂರಪ್ಪ, ಎಲ್ಲ ಸಚಿವರು, ಶಾಸಕರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಿದ್ದರಿಂದ ಉಪ ಚುನಾವಣೆ ಯಲ್ಲಿ ಬಿಜೆಪಿ...
ಹೊಸ ಸೇರ್ಪಡೆ
-
ಬಾಗಲಕೋಟೆ: ನಮ್ಮದು ರಾಷ್ಟ್ರೀಯ ಪಕ್ಷ. ನಿಂತ ನೀರಲ್ಲ. ಹರಿಯುವ ನೀರು. ಹರಿಯುವ ನೀರಿನಲ್ಲಿ ಹೊಸ ನೀರು ಸೇರುವುದು ಸ್ವಾಭಾವಿಕ. ಶೀಘ್ರವೇ ಇನ್ನೂ ಹಲವು ಶಾಸಕರು ಬಿಜೆಪಿಗೆ...
-
ತಿರುಮಲ: ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ಇಂತಹ ಘಟನೆ ಸಂಭವಿಸಿದೆ. ದೇಗುಲ ಬಳಿ...
-
ಬೆಂಗಳೂರು: ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಜನರ ಬೇಡಿಕೆಯೇ ಹೊರತು ನಾನು ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ. ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರಿಗೆ...
-
ರಾಯಚೂರು: ಮುಂದಿನ ಐದು ವರ್ಷಗಳಲ್ಲಿ ಕಲ್ಲಿದ್ದಲು ಆಮದು ಸಂಪೂರ್ಣ ನಿಲ್ಲಿಸಿ ಸ್ವಾವಲಂಬನೆ ಸಾ ಧಿಸಲಾಗುವುದು ಎಂದು ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಪತ್ರಕರ್ತರೊಂದಿಗೆ...
-
ಹೊಸದಿಲ್ಲಿ: ನೀವು ತಿನ್ನುವ, ಖರೀದಿಸಿದ ಆಹಾರದ ಮೇಲೆ ಸಂಶಯವಿದೆಯೇ? ಹಾಗಿದ್ದರೆ ತಡ ಬೇಡ. ಇನ್ನು ಅಧಿಕೃತ ಆಹಾರ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಖರ್ಚು ವೆಚ್ಚಗಳಿಲ್ಲದೇ...