“ಕೆರೆಗೆ ಹೂಳು ಸೇರದಂತೆ ನೋಡಿಕೊಳ್ಳಿ’

ಮೂಡುಬಿದಿರೆ : ಕೆರೆ ಲೋಕಾರ್ಪಣೆ

Team Udayavani, Oct 3, 2019, 3:15 AM IST

X-6

ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಗಾಂಧೀ ಜಯಂತಿಯಂದು ಕೆರೆಗೆ ಬಾಗಿನ ಸಮರ್ಪಿಸಿ ಲೋಕಾರ್ಪಣೆಗೊಳಿಸಿದರು.

ಮೂಡುಬಿದಿರೆ: ರೋಟರಿ ಕ್ಲಬ್‌ ಮೂಡುಬಿದಿರೆಯ ಅಂಗಸಂಸ್ಥೆ ಚಾರಿಟೆಬಲ್‌ ಟ್ರಸ್ಟ್‌ ನ ಮಹತ್ವದ “ರೋಟಾಲೇಕ್‌’ ಯೋಜನೆಯಡಿ, ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸುದರ್ಶನ ಉಗ್ಗುಗುತ್ತು ಮೂಡುಬಿದಿರೆ ಇವುಗಳ ಸಹಭಾಗಿತ್ವದಲ್ಲಿ 8.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಭಾಷ್‌ ನಗರ ಕೆರೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಗಾಂಧೀ ಜಯಂತಿಯಂದು ಬಾಗಿನ ಸಮರ್ಪಿಸಿ, ಲೋಕಾರ್ಪಣೆಗೊಳಿ ಸಿ ದರು.

ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಮಾತ ನಾಡಿ, ಸ್ವಾತಂತ್ರ್ಯ ಲಭಿಸಿದ ಅನಂತರ ನಾವು ಕೆರೆ, ಮದಕ, ಬಾವಿಗಳನ್ನು ಮರೆಯತೊಡಗಿ ಸರ ಕಾರದ ನಳ್ಳಿನೀರಿಗೇ ಅವಲಂಬಿತರಾಗ ತೊಡ ಗಿದ ಕಾರಣ ನಮ್ಮ ಜಲ-ಮೂಲ ನಾಶವಾಗತೊಡಗಿತು. ಮತ್ತೆ ನಾವು ಈ ಎಲ್ಲ ಜಲಮೂಲಗಳನ್ನು ಉಳಿಸಿ, ಜಲ ಸಂವರ್ಧನೆಗಾಗಿ ಪಣತೊಡಬೇಕಾಗಿದೆ. ಈ ನಿಟ್ಟಿನಲ್ಲಿ ಸುಭಾಷ್‌ನಗರ ಕೆರೆಯು ಜೀವಂತವಾಗಿ ಸದಾ ಈ ಭಾಗದ ಜನರಿಗೆ ಉಪಯುಕ್ತವಾಗಿ ಒದಗಿಬರಲಿ. ಇಂಥ ಕಾಮಗಾರಿಗಳಿಂದ ಕೃಷಿಕಾರ್ಯಕ್ಕೆ ಅನುಕೂಲವಾಗಲಿದೆ; ಬಾವಿ, ಬೋರ್‌ವೆಲ್‌ಗ‌ಳ ಜಲ ಸಂಪತ್ತೂ ವೃದ್ಧಿಯಾಗುವುದು. ಸರಕಾರಿ ಯೋಜನೆಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಕೆರೆಯ ಕೆಲಸ ನಡೆದಿದೆ ಇದೊಂದು ದೈವಿಕ ಕಾರ್ಯ ಎಂದು ಅಭಿನಂದನೆ ಸಲ್ಲಿಸಿದರು.

ರೋಟರಿ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ಡಾ| ಮುರಳೀಕೃಷ್ಣ ವರುಸ್ವಾಗತಿಸಿ ಪ್ರಸ್ತಾವಿಸಿ, ಸುಭಾಷ್‌ನಗರ ಕೆರೆಗೆ ನಿರ್ಮಾಣಕ್ಕೆ ಡಾ| ಹೆಗ್ಗಡೆಯವರು ಎಸ್‌ಕೆಡಿಆರ್‌ಡಿಪಿ ಮೂಲಕ 3 ಲಕ್ಷ ರೂ. ಅನುದಾನವನ್ನು ನೀಡಿರುವುದಕ್ಕೆ ಕೃತಜ್ಞತೆ ಸಮರ್ಪಿಸಿದರು.

ಟ್ರಸ್ಟ್‌ ಕಾರ್ಯದರ್ಶಿ ಡಾ| ಹರೀಶ್‌ ನಾಯಕ್‌ ನಿರೂಪಿಸಿದರು. ಮಾಜಿ ಸಚಿವ ಕೆ. ಅಭಯಚಂದ್ರ, ರೋಟರಿ ಕ್ಲಬ್‌ ಅಧ್ಯಕ್ಷ ಸಿ.ಎಚ್‌. ಅಬ್ದುಲ್‌ ಗಪೂರ್‌, ಕಾರ್ಯದರ್ಶಿ ನಾಗರಾಜ್‌ ಬಿ., ತಹಶೀಲ್ದಾರ್‌ ಅನಿತಾಲಕ್ಷ್ಮೀ, ಪುರಸಭಾ ಮುಖ್ಯಾಧಿಕಾರಿ ಇಂದೂ ಎಂ., ಪರಿಸರ ಅಭಿಯಂತರೆ ಶಿಲ್ಪಾ ಎಸ್‌., ಎಸ್‌ಕೆಡಿಆರ್‌ಡಿಪಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಪುರಸಭಾ ಸದಸ್ಯರಾದ ಪುರಂದರ ದೇವಾಡಿಗ, ಪಿ.ಕೆ. ಥೋಮಸ್‌, ಸುರೇಶ್‌ ಕೋಟ್ಯಾನ್‌, ಮಾಜಿ ಸದಸ್ಯೆ ರಮಣಿ, ರೋಟರಿ ಸದಸ್ಯರು ಉಪಸ್ಥಿತರಿದ್ದರು.

ಪುರಸ್ಕಾರ
ಕೆರೆಯ ಹೂಳುಮಣ್ಣನ್ನು ಸ್ವಯಂಸ್ಫೂರ್ತಿಯಿಂದ ಹೊರಸಾಗಿಸಿ ಕಾಮಗಾರಿಗೆ ಮಹತ್ವದ ಕೊಡುಗೆ ನೀಡಿದ ಉಗ್ಗುಗುತ್ತು ಮನೆಯ ದೇವು ಶೆಟ್ಟಿ ಹಾಗೂ ಕೆರೆಗೆ ಹೋಗುವ ಹಾದಿಯನ್ನು ತಮ್ಮ ಖಾಸಗಿ ಜಾಗದಲ್ಲಿ ಉಚಿತವಾಗಿ ತೆರೆದುಕೊಟ್ಟಿರುವ ಕೃಷ್ಣ ದೇವಾಡಿಗ-ಶಂಕರಿ ದಂಪತಿಯನ್ನು ಡಾ| ಹೆಗ್ಗಡೆಯವರು ಪುರಸ್ಕರಿಸಿದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.