ಮಂಗಳೂರಿಗೂ ಕಾಲಿಟ್ಟಿದೆ ಪೊಲೀಸರೆಂದು ನಂಬಿಸಿ ಒಡವೆ ದೋಚುವ ಗ್ಯಾಂಗ್‌


Team Udayavani, Dec 26, 2018, 12:19 PM IST

rob.jpg

ಮಂಗಳೂರು: ಸಿಐಡಿ ಪೊಲೀಸ್‌ ಅಧಿಕಾರಿಯೆಂದು ಹೇಳಿಕೊಂಡು ಪಾದಚಾರಿಗಳನ್ನು ನಂಬಿಸಿ ಅನಂತರ ಒಡವೆಗಳನ್ನು ದೋಚುವ ಹೈಟೆಕ್‌ ಕಳ್ಳರ ಗ್ಯಾಂಗ್‌ ಮಂಗಳೂರು ನಗರಕ್ಕೂ ಪ್ರವೇಶಿಸಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 72 ವರ್ಷದ ವೃದ್ಧರೊಬ್ಬರು ಧರಿಸಿದ್ದ ಚಿನ್ನಾಭರಣ ದೋಚಿರುವ ಘಟನೆ ಮಂಗಳವಾರ ನಡೆದಿದೆ. ಉಡುಪಿ ಜಿಲ್ಲೆಯಲ್ಲಿಯೂ ಇದೇ ಮಾದರಿಯಲ್ಲಿ ಕೈಚಳಕ ತೋರಿಸಿ ಮೈಮೇಲೆ ಹಾಕಿರುವ ಚಿನ್ನಾಭರಣ ಪಡೆದು ನಾಪತ್ತೆಯಾಗುವ ಕಳ್ಳರ ಗ್ಯಾಂಗ್‌ ತಲೆಯೆತ್ತಿದೆ.  

ಚೈನ್‌ ದೋಚಿದರು !
ನಗರದ ಕಾರ್‌ಸ್ಟ್ರೀಟ್‌ ಬಿಇಎಂ ಸ್ಕೂಲ್‌ನ ಬಳಿ ಮಂಗಳವಾರ ಬೆಳಗ್ಗೆ ಸುಮಾರು 11.45ರ ವೇಳೆಗೆ  ಅಳಕೆಯ ನಿವಾಸಿ ಭಗವಾನ್‌ (72) ಅವರು ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಹಿಂದಿಯಲ್ಲಿ ಮಾತನಾಡುತ್ತಾ “ನಾವು ಸಿಐಡಿ ಪೊಲೀಸರು, ನಗರದಲ್ಲಿ ಚಿನ್ನಾಭರಣ ದರೋಡೆ ಮಾಡುವ ತಂಡವಿದೆ. ನೀವು ನಿಮ್ಮ ಚಿನ್ನಾಭರಣವನ್ನು ಜೋಪಾನವಾಗಿ ಕಿಸೆಯಲ್ಲಿ ಕಟ್ಟಿಡಿ’ ಎಂದು ಹೇಳಿದ್ದರು. ಆದರೆ  ಭಗವಾನ್‌ ಅವರು ಅದಕ್ಕೆ ಗಮನ ನೀಡದೆ ಮುಂದಕ್ಕೆ ಸಾಗಿದ್ದರು. ಹಿಂಬಾಲಿಸಿಕೊಂಡು ಬಂದ  ಆ ಯುವಕರು ಮತ್ತೆ ಅವರನ್ನು ಅಡ್ಡಗಟ್ಟಿ, ಅದೇರೀತಿ ಹೇಳಿ ನಂಬಿಸಿದರು. ಅವರ ಮಾತುಗಳನ್ನು ನಂಬಿದ ಭಗವಾನ್‌ ಅವರು ಕೂಡಲೇ ತಮ್ಮ ಕನ್ನಡಕ, ಮೊಬೈಲ್‌, ವಾಚ್‌, ನಗದು, ಉಂಗುರ, ಚಿನ್ನದ ಸರವನ್ನು ಟವಲ್‌ನಲ್ಲಿ  ಕಟ್ಟಲು ಆರಂಭಿಸಿದ್ದರು. ಆಗ, ಆ ಇಬ್ಬರು ಯುವಕರು “ನಾವೇ ಕಟ್ಟಿಕೊಡುತ್ತೇವೆ’ ಎಂದು ಹೇಳಿ ಅವರಿಗೆ ಸಹಾಯ ಮಾಡುವ ನಾಟಕವಾಡಿದ್ದಾರೆ. ಅನಂತರ ಭಗವಾನ್‌ ಬಳಿಯಿದ್ದ ಬೆಲೆಬಾಳುವ ವಸ್ತುಗಳು ಹಾಗೂ ಟವೆಲ್‌ ಅನ್ನು ಪಡೆದುಕೊಂಡ ಆ ಯುವಕರು, ಸ್ವಲ್ಪ ಹೊತ್ತಿನಲ್ಲೇ ಆ ಟವಲ್‌ನಲ್ಲಿ ವಸ್ತುಗಳನ್ನೆಲ್ಲ ಇಟ್ಟು ಕಟ್ಟಿ ವಾಪಾಸ್‌ ನೀಡಿದವರಂತೆ ಮಾಡಿದ್ದಾರೆ. ಅನಂತರ ಇಬ್ಬರು ಕೂಡ ತಾವು ಬಂದಿದ್ದ ಬೈಕ್‌ನಲ್ಲಿ ಕುಳಿತು ನಾಪತ್ತೆಯಾದರು.

ಸ್ವಲ್ಪ ಸಮಯದ ಬಳಿಕ ಭಗವಾನ್‌ ಅವರಿಗೆ  ಸಂಶಯ ಬಂದು ಟವಲ್‌ ಕಟ್ಟು ಬಿಡಿಸಿ ನೋಡಿದಾಗ ಚಿನ್ನದ ಉಂಗುರ ಮತ್ತು ಸರ ಕಳವಾಗಿತ್ತು. ಉಳಿದ ವಸ್ತುಗಳು ಹಾಗೆಯೇ ಇದ್ದವು. ಭಗವಾನ್‌ ಅವರಿಗೆತಾನು ಮೋಸ ಹೋಗಿರುವುದು ಸ್ಪಷ್ಟವಾಯಿತು.  ವಂಚಕರು ದೋಚಿದ ಸೊತ್ತಿನ ಮೌಲ್ಯ ಸುಮಾರು 70 ಸಾವಿರ ರೂ. ಎಂದು ಅಂದಾಜಿಸಲಾಗಿದೆ. 

ಸಾರ್ವಜನಿಕರಿಗೆ ಮಾಹಿತಿ
ಉಡುಪಿಯಲ್ಲಿ ಇರಾನಿ ತಂಡವೊಂದು  ಇದೇ ಮಾದರಿ ಎರಡು ಕಡೆ ಕೃತ್ಯ ನಡೆಸಿ ಮಂಗಳೂರಿನತ್ತ ಪ್ರಯಾಣ ಬೆಳೆಸಿರುವ ಬಗ್ಗೆ  ಉಡುಪಿ ಜಿಲ್ಲಾ ಪೊಲೀಸರು ಮಂಗಳೂರು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದರು. ಕೂಡಲೇ ಅಲರ್ಟ್‌ ಆದ ಮಂಗಳೂರು ನಗರ ಪೊಲೀಸರು ಠಾಣೆಗಳ ಸಾಗರ ವಾಹನದಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ನಡೆಸಿದ್ದರು. ಪೊಲೀಸರು ಧ್ವನಿವರ್ಧಕದಲ್ಲಿ ಮಾಹಿತಿ ನೀಡಿದರೂ ವಂಚಕರ ತಂಡ ನಗರದಲ್ಲಿ ತಮ್ಮ ಕೈಚಳಕ ತೋರಿಸಿ ಒಡವೆಗಳನ್ನು ದೋಚುವಲ್ಲಿ ಯಶಸ್ವಿಯಾಗಿತ್ತು.

ಪೊಲೀಸರು ಎಂದು ನಂಬಿಸಿ ಸಾರ್ವಜನಿಕರ ಗಮನ ಬೇರೆಡೆಗೆ  ಸೆಳೆದು ಒಡವೆ  ದೋಚುವ ತಂಡವೊಂದು ಕಾರ್ಯಾಚರಿಸುತ್ತಿರುವ ಮಾಹಿತಿ ಬಂದಿದೆ.  ಈ ಬಗ್ಗೆ ಎಚ್ಚರದಲ್ಲಿರುವಂತೆ ನಾಗರಿಕರನ್ನು ಪೊಲೀಸ್‌ ಇಲಾಖೆ ಜಾಗೃತಿ ಮೂಡಿಸುತ್ತಿದೆ. ಯಾವುದೇ  ಈ  ರೀತಿ  ಮೋಸಗೊಳಿಸುವ ಕೃತ್ಯ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಕೋರಲಾಗಿದೆ.
 ಉಮಾ ಪ್ರಶಾಂತ್‌, ಉಪ ಪೊಲೀಸ್‌ ಆಯುಕ್ತೆ 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.