ತಲೆಮರೆಸಿಕೊಂಡಿದ್ದ ಕುಖ್ಯಾತನ ಬಂಧನ
ಶೂಟೌಟ್ ಪ್ರಕರಣ ಸಹಿತ ಹಲವು ಪ್ರಕರಣಗಳ ಆರೋಪಿ
Team Udayavani, Aug 30, 2019, 11:11 PM IST
ಮಂಗಳೂರು: ನಗರದ ಉದ್ಯಮಿ ವಿಜಯೇಂದ್ರ ಭಟ್ ಅವರ ಕಾರಿನ ಮೇಲೆ ಶೂಟೌಟ್ ಮಾಡಿದ್ದು ಸಹಿತ 7 ಪ್ರಕರಣಗಳಲ್ಲಿ ಭಾಗಿಯಾಗಿ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಿಡ್ಡೆಲ್ ಮರೋಳಿ ನಿವಾಸಿ ದೀಕ್ಷಿತ್ ಪೂಜಾರಿ (31)ಯನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹ ದಳ ಬಂಧಿಸಿದೆ.
ಪ್ರಕರಣ ವಿವರ
ಭೂಗತ ಲೋಕದ ಪಾತಕಿ ವಿಕ್ಕಿ ಶೆಟ್ಟಿ ಸೂಚನೆಯಂತೆ ಸುಧೀಂದ್ರ ಸೂಪರ್ ಮಾರ್ಕೆಟ್ ಮತ್ತು ಸಾಯಿಬೀನ್ ಕಾಂಪ್ಲೆಕ್ಸ್ ಮಾಲಕ ವಿಜಯೇಂದ್ರ ಭಟ್ ಅವರ ಕಾರಿಗೆ ಬಲ್ಲಾಳ್ಬಾಗ್- ಮಣ್ಣ ಗುಡ್ಡ ರಸ್ತೆಯಲ್ಲಿ ಪಿಸ್ತೂ ಲಿನಿಂದ ಗುಂಡು ಹೊಡೆದ ಪ್ರಕರಣದಲ್ಲಿ ದೀಕ್ಷಿತ್ ಪೂಜಾರಿ ಆರೋಪಿ ಯಾಗಿದ್ದ.
ಮಂಗಳೂರು ನಗರ ಮತ್ತು ಉಡುಪಿಯಲ್ಲಿ ಒಟ್ಟು 7 ಪ್ರಕರಣಗಳು ಈತನ ಮೇಲಿವೆ.
ಬರ್ಕೆ ಠಾಣೆಯಲ್ಲಿ ಕೊಲೆ, ಶೂಟೌಟ್ ಸಹಿತ ಮೂರು ಪ್ರಕರಣ, ಪಾಂಡೇಶ್ವರ ಠಾಣೆ ಯಲ್ಲಿ ಕೊಲೆ ಪ್ರಕರಣ, ಬಂದರ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕದ್ರಿ ಠಾಣೆಯಲ್ಲಿ ಗಾಂಜಾ ಮತ್ತು ಹಲ್ಲೆ ಪ್ರಕರಣ, ಸುರತ್ಕಲ್ ಹಾಗೂ ಉರ್ವ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಉಡುಪಿ ಠಾಣೆಯಲ್ಲಿ ಆಮ್ಸ್ì ಆ್ಯಕ್ಟ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’