ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಕಾರ್ಯಾಚರಣೆಗೆ ಚಿಂತನೆ

ಸಿಟಿ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ ಲಭಿಸದ ಮೀಸಲು ಆಸನ

Team Udayavani, Jul 24, 2019, 5:00 AM IST

x-28

ಮಹಾನಗರ: ಸಿಟಿ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆಂದೇ ಮೀಸ ಲಿರುವ ಆಸನ ಅವರಿಗೆ ದೊರಕುತ್ತಿಲ್ಲ ಎಂಬ ದೂರು ಕೇಳಿಬರುತ್ತಿವೆ. ಸಾರಿಗೆ ಇಲಾಖೆ ಇದೀಗ ಈ ದೂರನ್ನು ಗಂಭೀರ ವಾಗಿ ಪರಿಗಣಿಸಿದ್ದು, ಸದ್ಯದಲ್ಲಿಯೇ ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ.

ನಗರದಲ್ಲಿ ದಿನಂಪ್ರತಿ ಸುಮಾರು 300ಕ್ಕೂ ಹೆಚ್ಚು ಸಿಟಿ ಬಸ್‌ಗಳು ನಾನಾ ಕಡೆಗಳಿಗೆ ಸಂಚರಿಸುತ್ತವೆ. ಆದರೆ ಇವುಗಳಲ್ಲಿ ಹಿರಿಯ ನಾಗರಿಕರು ಪಡುವ ಕಷ್ಟ ಅಷ್ಟಿಷ್ಟಲ್ಲ. ಸರಕಾರಿ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ ಟಿಕೆಟ್‌ ದರದಲ್ಲಾದರೂ ಕಡಿತವಿದ್ದು, ಈ ವ್ಯವಸ್ಥೆ ಖಾಸಗಿ ಸಿಟಿ ಬಸ್‌ಗಳಲ್ಲಿ ಲಭ್ಯವಿಲ್ಲ.

ಪಾಲನೆಯಾಗದ ನಿಯಮ
ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಸಿಟಿ ಬಸ್‌ಗಳಲ್ಲಿ ಕಿಕ್ಕಿರಿದು ಪ್ರಯಾಣಿಕರಿರುವುದರಿಂದ ಹಿರಿಯ ನಾಗರಿಕರು ಬಸ್‌ಗಳಲ್ಲಿ ನಿಂತೇ ಪ್ರಯಾಣಿಸಬೇಕಾದ ಪರಿಸ್ಥಿತಿಯಿದೆ. ಹಿರಿಯ ನಾಗರಿಕರಿಗೆಂದು ಬಸ್‌ಗಳಲ್ಲಿ ಸೀಟು ಮೀಸಲಿಡಲಾಗಿದೆ. ಆದರೆ ಬಹುತೇಕ ಬಸ್‌ಗಳಲ್ಲಿ ಇದರ ಪಾಲನೆಯಾಗುತ್ತಿಲ್ಲ. ಹಿರಿಯ ನಾಗರಿಕರು ನಿಂತಿದ್ದರೂ ಈ ಸೀಟುಗಳಲ್ಲಿ ಬೇರೊಬ್ಬರು ಕುಳಿತಿರುತ್ತಾರೆ. ಈ ಬಗ್ಗೆ ನಿರ್ವಾಹಕರು ಕೂಡ ಮಾತನಾಡುವುದಿಲ್ಲ. ಕೆಲವೊಂದು ಬಾರಿ ತನ್ನ ಸ್ವಾಭಿಮಾನ ಬಿಟ್ಟು ಹಿರಿಯ ನಾಗರಿಕರು ಸೀಟು ಕೇಳಿದರೂ, ಯುವಕ-ಯುವತಿಯರು ಮಾತ್ರ ಸೀಟು ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಬಸ್‌ ನಿಲ್ದಾಣದಲ್ಲೂ ಕುಳಿತುಕೊಳ್ಳ ವ್ಯವಸ್ಥೆಯಿಲ್ಲ
ಚಿಲಿಂಬಿಯ ಶ್ರೀನಿವಾಸ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ “ಸ್ಟೇಟ್‌ಬ್ಯಾಂಕ್‌ ಸಿಟಿ ಬಸ್‌ ನಿಲ್ದಾಣದಲ್ಲಿ ಹಿರಿಯ ನಾಗರಿಕರಿಗೆ ಕುಳಿತುಕೊಳ್ಳಲು ಸಮರ್ಪಕ ವ್ಯವಸ್ಥೆ ಇಲ್ಲ. ಅಲ್ಲದೆ, ಬಸ್‌ಗಳಲ್ಲಿಯೂ ಹಿರಿಯ ನಾಗರಿಕರಿಗೆ ಮೀಸಲಿಟ್ಟ ಸೀಟುಗಳಲ್ಲಿ ಯುವಕರು -ಯುವತಿಯರು ಕುಳಿತುಕೊಳ್ಳುತ್ತಾರೆ’ ಎನ್ನುತ್ತಾರೆ.

ಎತ್ತರದ ಫುಟ್‌ಬೋರ್ಡ್‌
ನಗರದಲ್ಲಿ ಸಂಚರಿಸುವ ಸಿಟಿ ಬಸ್‌ಗಳಲ್ಲಿನ ಫುಟ್‌ಬೋರ್ಡ್‌ ಕನಿಷ್ಠ 52 ಸೆಂ.ಮೀ.
ಎತ್ತರವಿರಬೇಕು ಎಂಬ ಕಾನೂನು ಇದೆ. ಆದರೆ ಕೆಲವು ಸಿಟಿ ಬಸ್‌ಗಳು ಇದರ ಪಾಲನೆಯಾಗುತ್ತಿಲ್ಲ. ಇದೇ ಕಾರಣಕ್ಕೆ ಬಸ್‌ಗಳ ಮೆಟ್ಟಿಲುಗಳನ್ನೇರಲು ಕೂಡ ಹಿರಿಯರು ಕಷ್ಟಪಡುತ್ತಿದ್ದಾರೆ.

ಟೇಪ್‌ರೆಕಾರ್ಡರ್‌ಕಿರಿ ಕಿರಿ
ಬಸ್‌ಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಬಾರದು ಎಂಬ ನಿಯಮ ಇದೆ. ಒಂದು ವೇಳೆ ಈ ನಿಯಮ ಪಾಲನೆ ಮಾಡದಿದ್ದರೆ ಬಸ್‌ಗಳಿಗೆ ಫಿಟ್‌ನೆಸ್‌ ಪ್ರಮಾಣಪತ್ರ ಲಭಿಸುವುದಿಲ್ಲ ನಗರದಲ್ಲಿ ಓಡಾಡುವ ಅನೇಕ ಬಸ್‌ಗಳಲ್ಲಿ ಅನಧಿಕೃತವಾಗಿ ಟೇಪ್‌ರೆಕಾರ್ಡರ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಈಗಾಗಲೇ ಸಾರಿಗೆ ಇಲಾಖೆಗೆ ದೂರು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

 ಬೆಂಬಲವಿಲ್ಲ
ಹಿರಿಯ ನಾಗರಿಕರ ಆಸನಗಳು ಅವರಿಗೇ ಮೀಸಲಿರಬೇಕು. ಈ ಬಗ್ಗೆ ನಿರ್ವಾಹಕರು ನೋಡಿಕೊಳ್ಳಬೇಕು. ಈ ವಿಚಾರ ಅವರ ಗಮನಕ್ಕೆ ತರಲಾಗುವುದು. ಬಸ್‌ಗಳಲ್ಲಿ ಟೇಪ್‌ರೆಕಾರ್ಡ್‌ ಅಳವಡಿಸುವ ವಿಷಯ ಗಮನಕ್ಕೆ ಬಂದಿದೆ. ಇದಕ್ಕೆ ನಮ್ಮ ಬೆಂಬಲವಿಲ್ಲ.
 - ದಿಲ್‌ರಾಜ್‌ ಆಳ್ವ, ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ

 ದಂಡ ವಿಧಿಸುತ್ತೇವೆ
ಹಿರಿಯ ನಾಗರಿಕರಿಗೆಂದು ಮೀಸಲಿಟ್ಟ ಆಸನಗಳನ್ನು ಅವರಿಗೇ ನಿಗದಿಪಡಿಸಬೇಕು. ಇದನ್ನು ನೋಡಿಕೊಳ್ಳುವುದು ಬಸ್‌ ನಿರ್ವಾಹಕನ ಜವಾಬ್ದಾರಿ. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ ಎಂಬ ದೂರು ಬಂದಿದೆ. ಬಸ್‌ ಮಾಲಕರು ಬಸ್‌ ಫಿಟ್‌ನೆಸ್‌ ಪರೀಕ್ಷೆಯ ವೇಳೆ ಟೇಪ್‌ರೆಕಾರ್ಡ್‌ ತೆಗೆದು, ಬಾಕಿ ವೇಳೆ ಉಪಯೋಗಿಸುತ್ತಿರುವ ಬಗ್ಗೆಯೂ ದೂರು ಇದೆ. ಈ ಬಗ್ಗೆ ಸದ್ಯದಲ್ಲಿಯೇ ಕಾರ್ಯಾಚರಣೆ ನಡೆಸಿ ದಂಡ ವಿಧಿಸುತ್ತೇವೆ.
 - ಚಂದ್ರ ಉಪ್ಪಾರ, ಆರ್‌ಟಿಒ ಮಂಗಳೂರು

-  ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.