ಅಬ್ಬಕ್ಕನಲ್ಲಿದ್ದ ಪ್ರಜ್ಞೆ ನಮ್ಮಲ್ಲೂ ಬಡಿದೆಬ್ಬಿಸಬೇಕು


Team Udayavani, Feb 4, 2018, 10:00 AM IST

2-m.jpg

ಉಳ್ಳಾಲ: ಸರ್ವಧರ್ಮ ಸಮನ್ವಯ ದೊಂದಿಗೆ ಉಳ್ಳಾಲದಂತಹ ಊರಿನಲ್ಲಿ ಪೋರ್ಚು ಗೀಸರ ವಿರುದ್ಧ ಹೋರಾಡಿದ ವೀರರಾಣಿ ಅಬ್ಬಕ್ಕನಶೌರ್ಯವನ್ನು ಗುರುತಿಸುವ ಕಾರ್ಯ ಇನ್ನೂ ನಡೆ ದಿಲ್ಲ. ಅಬ್ಬಕ್ಕನಲ್ಲಿದ್ದಂತಹ ಪ್ರಜ್ಞೆಯನ್ನು ಪ್ರತಿಯೊಬ್ಬ ರಲ್ಲೂ ಬಡಿದೆಬ್ಬಿಸುವ ಕಾರ್ಯ ಆಗಬೇಕಾಗಿದೆ ಎಂದು ಸಾಹಿತಿ ವೈದೇಹಿ ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಶನಿವಾರ ಸೋಮೇಶ್ವರ ಗ್ರಾಮದ ಕೊಲ್ಯ ನಾಗಮಂಡಲ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ 2018ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆದರ್ಶ, ಮಾದರಿಗಳಿಲ್ಲದ ಸಮಾಜದಲ್ಲಿ ನಾವು ಬದುಕುತ್ತಿರುವಾಗ ಅಬ್ಬಕ್ಕನಂತಹ ಮಾದರಿ ಹೋರಾಟಗಾರ್ತಿಯನ್ನು ನಾವು ನೆನಪು ಮಾಡು ತ್ತಿಲ್ಲ, ದಕ್ಷಿಣ ಕನ್ನಡ ಜಿಲ್ಲೆ, ಕರಾವಳಿಯನ್ನು ಬಿಟ್ಟು ಬೇರೆ ಕಡೆ ಅಬ್ಬಕ್ಕ ಹುಟ್ಟಿದ್ದರೆ ಆಕೆಯ ವಿಚಾರ ದೇಶಾದ್ಯಂತ ಪಸರಿಸುತ್ತಿತ್ತು. ಆದರೆ ನಾವು ಅಬ್ಬಕ ನನ್ನು ಮರೆತಿದ್ದೇವೆ. ಆಕೆಯಲ್ಲಿದ್ದ ಧೈರ್ಯ, ಶೌರ್ಯ ಇಂದಿಗೂ ನಮ್ಮ ಸ್ತ್ರೀಯರಲ್ಲಿ ಬಂದಿಲ್ಲ ಎಂದು ಖೇದ ವ್ಯಕ್ತಪಡಿಸಿದ ಅವರು, ರಾಣಿ ಅಬ್ಬಕ್ಕ ಕುರಿತು ಅಧ್ಯಯನ, ಆಕೆಯ ಸಾಹಸಗಾಥೆಯನ್ನು ಪ್ರಚುರ ಪಡಿಸುವ ಕಾರ್ಯ ನಡೆಯಬೇಕಾಗಿದೆ, ಆ ಮೂಲಕ ನಾವು ಮಾದರಿ ಜಿಲ್ಲೆಯನ್ನು ನಿರ್ಮಾಣ ಮಾಡಬೇಕಾಗಿದೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಚಿತ್ರನಟಿ ಭಾವನಾ ರಾಮಣ್ಣ ಮಾತನಾಡಿ, ಇಂದು ಮಹಿಳೆಯರು ಯಾವುದರಲ್ಲೂ ಹಿಂದೆ ಉಳಿದಿಲ್ಲ.  ಜಿಲ್ಲೆಯಲ್ಲೂ ಮಹಿಳೆಯರು ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ವೇದಿಕೆಗಳೂ ದೊರಕುತ್ತಿವೆ. ಅವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸುವುದು ಮುಖ್ಯ ಎಂದರು.

ನಟಿ, ನಿರ್ದೇಶಕಿ, “ಉದಯವಾಣಿ’ ಅಂಕಣಗಾರ್ತಿ ರೂಪಾ ಅಯ್ಯರ್‌ ವಿವಿಧ ಗೋಷ್ಠಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಉಳ್ಳಾಲದಲ್ಲಿ ದರ್ಗಾ, ದೇವಸ್ಥಾನ, ಚರ್ಚ್‌ ಇದ್ದು, ಹಿಂದೆ ಇದ್ದ ಸರ್ವಧರ್ಮ ಸಮನ್ವಯವನ್ನು ಇಂದಿಗೂ ಮುನ್ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರಲ್ಲದೆ ಮಹಿಳೆಯರ ಕಾರ್ಯಕ್ರಮವನ್ನು ಅದ್ದೂರಿಯಾಗಿ ಏರ್ಪಡಿಸಿರುವುದು ಶ್ಲಾಘನೀಯ ಎಂದರು.

ಸಚಿವ ಯು.ಟಿ. ಖಾದರ್‌ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳಿನ್‌ ಕುಮಾರ್‌ ಕಟೀಲು, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಜಿ.ಪಂ. ಸದಸ್ಯೆಯರಾದ ಮಮತಾ ಡಿ.ಎಸ್‌. ಗಟ್ಟಿ, ಧನಲಕ್ಷ್ಮೀ ಗಟ್ಟಿ, ತಾ. ಪಂ. ಅಧ್ಯಕ್ಷ ಮೊಹಮ್ಮದ್‌ ಮೋನು, ಸದಸ್ಯ ರಾಮಚಂದ್ರ ಕುಂಪಲ, ನಗರಸಭಾಧ್ಯಕ್ಷ ಹುಸೈನ್‌ ಕುಂಞಿಮೋನು, ಪೌರಾಯುಕ್ತೆ ವಾಣಿ ವಿ. ಆಳ್ವ, ಸೋಮೇಶ್ವರ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಉಚ್ಚಿಲ, ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ, ಜಿ.ಪಂ. ಮಾಜಿ ಸದಸ್ಯ ಸಂತೋಷ್‌ ಕುಮಾರ್‌ ರೈ ಬೋಳಿಯಾರ್‌, ಮುಖಂಡ ಸೀತಾರಾಮ ಬಂಗೇರ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸದಾಶಿವ ಉಳ್ಳಾಲ, ಗೇರು ಅಭಿವೃದ್ಧಿ ನಿಗಮದ ಬಿ.ಎಚ್‌. ಖಾದರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ್‌ ರೈ ಬಿ., ಗಟ್ಟಿ ಸಮಾಜ ಸಂಘದ ಅಧ್ಯಕ್ಷ ಪವಿತ್ರ ಕುಮಾರ್‌ ಗಟ್ಟಿ, ಸಿಪಿಐಎಂ ಮುಖಂಡ ಕೃಷ್ಣಪ್ಪ ಸಾಲ್ಯಾನ್‌, ಕೊಲ್ಯ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಯಶೋಧರ ಕೊಲ್ಯ, ಅಬ್ಬಕ್ಕ ಉತ್ಸವ ಸಮಿತಿಯ ಸದಾನಂದ ಬಂಗೇರ, ಪುಷ್ಕಳ್‌ ಕುಮಾರ್‌, ಆನಂದ ಅಸೈಗೋಳಿ, ದೀಪಕ್‌ ಪಿಲಾರ್‌, ಲಕ್ಷ್ಮೀನಾರಾಯಣ, ತ್ಯಾಗಂ ಹರೇಕಳ, ತಾರಾನಾಥ ರೈ, ದೇವಕಿ ರಾಘವ, ರತ್ನಾವತಿ ಬೈಕಾಡಿ, ಆಲಿಯಬ್ಬ ಉಪಸ್ಥಿತರಿದ್ದರು.

ಉತ್ಸವ ಸಮಿತಿಯ ಪ್ರಮುಖ ಉಸ್ತುವಾರಿ ದಿನಕರ ಉಳ್ಳಾಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಮಂಜುಳಾ ಶೆಟ್ಟಿ ನಿರೂಪಿಸಿ, ಅಬ್ದುಲ್‌ ಅಝೀಝ್ ಹಕ್‌ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.