ಸಂತ್ರಸ್ತರ ಮನೆ ನಿರ್ಮಾಣ: ಮುಂಗಡ ಒದಗಿಸಲು ಆಗ್ರಹ
Team Udayavani, Sep 17, 2019, 5:12 AM IST
ಮಂಗಳೂರು: ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಹಣವನ್ನು ಮುಂಗಡ ನೀಡಬೇಕು ಎಂದು ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಗ್ರಹಿಸಿದರು.
ಸರಕಾರವು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ 5 ಲಕ್ಷ ರೂ. ನೀಡುತ್ತದಾದರೂ ಅದು ಮಂಜೂರಾಗುವುದು ಕಾಮಗಾರಿ ಆರಂಭಗೊಂಡ ಬಳಿಕ. ಸರ್ವಸ್ವವನ್ನೂ ಕಳೆದುಕೊಂಡಿರುವ ಸಂತ್ರಸ್ತರಿಗೆ ಕಾಮಗಾರಿ ಆರಂಭಿಸಲು ಅಸಾಧ್ಯವಾಗಿರುವುದರಿಂದ ಪರಿಹಾರ ಧನವನ್ನು ಜಿ.ಪಂ. ಸಿಇಒ ಖಾತೆಗೇ ಜಮೆ ಮಾಡಿ ಸಂತ್ರಸ್ತರಿಗೆ ಮುಂಗಡವಾಗಿ ಕಂತುಗಳಲ್ಲಿ ಬಿಡುಗಡೆ ಮಾಡಬೇಕು ಎಂದು ಸದಸ್ಯೆ ಮಮತಾ ಗಟ್ಟಿ ಹೇಳಿದರು. ಸಿಇಒ ಆರ್. ಸೆಲ್ವಮಣಿ ಈ ವಿಚಾರವನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದರು.
ಸಂತ್ರಸ್ತರಿಗೆ 10 ಸಾವಿರ ರೂ. ತುರ್ತು ಪರಿಹಾರವೂ ಸರಿಯಾಗಿ ಸಿಕ್ಕಿಲ್ಲ ಎಂದು ಸದಸ್ಯರಾದ ಎಂ.ಎಸ್. ಮಹಮ್ಮದ್, ಮಂಜುಳಾ ಮಾವೆ, ಪ್ರಕಾಶ್ ಶೆಟ್ಟಿ ಹೇಳಿದರು. ಉತ್ತರಿಸಿದ ಸಿಇಒ, ಜಿಪಿಎಸ್ನಲ್ಲಿ ಅಪ್ಲೋಡ್ ಮಾಡಿರುವ ಬಹುತೇಕ ಮಂದಿಗೆ ನೀಡಲಾಗಿದೆ. ಬಾಕಿ ಪ್ರಕರಣಗಳನ್ನು ಪರಿಶೀಲಿಸಿ ನೀಡಲಾಗುವುದು. ಅಧಿಕಾರಿಗಳ ತಪ್ಪು ಇದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಹಾನಿಯಾಗಿದ್ದು, ಹೆಚ್ಚು ಅನುದಾನ ನೀಡಬೇಕು ಎಂದು ಕೊರಗಪ್ಪ ನಾೖಕ್, ಸೌಮ್ಯಲತಾ, ಸಾಹುಲ್ ಹಮೀದ್ ಆಗ್ರಹಿಸಿದರು.
ಶುದ್ಧ ಕುಡಿಯುವ ನೀರು ಘಟಕ: ಸೆ. 20ರಂದು ಸಭೆ
ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆಗೆ 4 ಬಾರಿ ಟೆಂಡರ್ ಕರೆದರೂ ಯಾರೂ ಸ್ಪಂದಿಸಿಲ್ಲ. ನಿರ್ವಹಣೆಗಾಗಿ ಇರುವ ಮೊತ್ತವನ್ನು ಆಯಾ ಗಾ.ಪಂ.ಗಳಿಗೆ ನೀಡಿ ಅವರೇ ನಿರ್ವಹಿಸುವ ಹೊಣೆ ವಹಿಸುವ ಬಗ್ಗೆ ಚರ್ಚಿಸಲು ಸೆ.20ರಂದು ಸಭೆ ಕರೆಯಲಾಗಿದೆ ಎಂದು ಸಿಇಒ ತಿಳಿಸಿದರು. ಪಿ.ಪಿ. ವರ್ಗೀಸ್, ಧರಣೇಂದ್ರ ಕುಮಾರ್, ತುಂಗಪ್ಪ ಬಂಗೇರ, ಹರೀಶ್ ಕಂಜಿಪಿಲಿ, ಸುಚರಿತ ಶೆಟ್ಟಿ, ಸರ್ವೋತ್ತಮ ಗೌಡ ಶುದ್ಧ ನೀರಿನ ಘಟಕದ ಅವ್ಯವಸ್ಥೆ ಬಗ್ಗೆ ಗಮನ ಸೆಳೆದರು.
ಬಸ್ಗಳಲ್ಲಿ ಮೀಸಲು ಆಸನ ನಿಯಮ ಪಾಲನೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಶಾ ತಿಮ್ಮಪ್ಪ ಗೌಡ ಆಗ್ರಹಿಸಿದರು. ವಿದ್ಯಾರ್ಥಿಗಳಿಗೆ ಸಹಾಯ ವಾಗುವಂತೆ ಉಪ್ಪಿನಂಗಡಿ-ಮಂಗಳೂರು ನಡುವೆ ಹೆಚ್ಚಿನ ಕಡೆ ಕೆಎಸ್ಸಾ ರ್ಟಿಸಿ ಬಸ್ ನಿಲುಗಡೆ ನೀಡಬೇಕು ಎಂದು ಶಯನಾ ಜಯಾನಂದ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ