ಮನೆ-ದೇವಸ್ಥಾನ-ಚರ್ಚ್‌-ಸಮುದಾಯಗಳಲ್ಲಿ ಈಗ ಜಲ ಸಾಕ್ಷರತೆಯ ಪಾಠ


Team Udayavani, Aug 4, 2019, 5:00 AM IST

x-20

"ಮನೆಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

ಪ್ರಾಂಶುಪಾಲರಿಂದ ಮಳೆಕೊಯ್ಲು ಅಳವಡಿಕೆ
ಮೂಡುಬಿದಿರೆಯ ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ| ಎಂ. ರಮೇಶ ಭಟ್‌ ಅವರು “ಉದಯವಾಣಿ’ಯ ಅಭಿಯಾನದಿಂದ ಪ್ರೇರಣೆಗೊಂಡು ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ.

ಛಾವಣಿ ನೀರನ್ನು ಪೈಪ್‌ ಮುಖಾಂತರ ಬಾವಿಗೆ ಬಿಡಲಾಗುತ್ತಿದೆ. ನಡುವೆ ಶುದ್ಧೀಕರಣಗೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸುರತ್ಕಲ್‌ನ ನಿರ್ಮಿತಿ ಕೇಂದ್ರದವರನ್ನು ಸಂಪರ್ಕಿಸಿ, ಅವರ ಮಾರ್ಗದರ್ಶನ ಪಡೆದು ಮೂಡುಬಿದಿರೆಯ ಪ್ರಕಾಶ ಅವರು ಇದನ್ನು ಅಳವಡಿಸಲು ಸಹಕರಿಸಿದ್ದಾರೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪ್ರತಿಯೊಬ್ಬರೂ ಮಳೆಕೊಯ್ಲು ಅಳವಡಿಸಿಕೊಳ್ಳಲು ಮುಂದಾಗಬೇಕೆಂದು ಅವರು ಹೇಳುತ್ತಾರೆ.

ಮಳೆಗಾಲ ಆರಂಭದಲ್ಲಿಯೇ ಮಳೆಕೊಯ್ಲು
ಕಡಬ ತಾಲೂಕಿನ ನೆಲ್ಯಾಡಿ ರಾಮನಗರ ದೀಪಕ್‌ ಮಾರ್ಲ ಅವರು ಮಳೆಗಾಲ ಆರಂಭವಾಗುತ್ತಿದ್ದಂತೆಯೇ ತಮ್ಮ ಮನೆಯ ಟ್ಯಾಂಕ್‌ಗೆ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮನೆಯ ಟೆರೇಸ್‌ನಿಂದ ಮಳೆ ನೀರನ್ನು ಪೈಪ್‌ ಮುಖಾಂತರ ಫಿಲ್ಟರ್‌ ಮಾಡಿ ಟ್ಯಾಂಕಿಗೆ ಬಿಡಲಾಗುತ್ತಿದೆ. ಸುಮಾರು 1 ಸಾವಿರ ರೂ. ಖರ್ಚು ಇದಕ್ಕೆ ತಗುಲಿದೆ. “ಉದಯವಾಣಿ’ಯ ಮನೆಮನೆಗೆ ಮಳೆಕೊಯ್ಲು ಅಭಿಯಾನ ಜನಸಾಮಾನ್ಯರಿಗೊಂದು ಪ್ರೇರಣೆಯಾಗಿದೆ. ಈ ಅಭಿಯಾನ ನೋಡಿ ಹಲವಾರು ಮಂದಿ ಮಳೆಕೊಯ್ಲು ಮಾಡುತ್ತಿರುವುದು ನೀರುಳಿತಾಯಕ್ಕೆ ಸಿಕ್ಕ ಸ್ಫೂರ್ತಿ’ ಎಂದವರು ಹೇಳುತ್ತಾರೆ.

ಆಸು- ಪಾಸಿನವರಿಗೂ ಪ್ರೇರಣೆ
ಮೂಡುಬಿದಿರೆ ಶಿರ್ತಾಡಿಯ ಫ್ರೆಡ್ರಿಕ್‌ ಕ್ರಾಸ್ತಾ ಅವರ ಮನೆಯಲ್ಲಿ ಮೂರು ವಾರಗಳ ಹಿಂದೆ ಮಳೆಕೊಯ್ಲು ಅಳವಡಿಸಲಾಗಿದೆ. ಮನೆಯ ಛಾವಣಿ ನೀರನ್ನು ಪೈಪ್‌ ಮುಖಾಂತರ ಡ್ರಮ್‌ಗೆ ಬಿಡಲಾಗುತ್ತಿದೆ. ಅಲ್ಲಿ ಫಿಲ್ಟರ್‌ ವ್ಯವಸ್ಥೆ ಮಾಡಲಾಗಿದ್ದು, ಶುದ್ಧವಾದ ನೀರು ಬಾವಿ ಸೇರುತ್ತದೆ. ಇದಕ್ಕೆ ಅವರಿಗೆ ಸುಮಾರು 10 ಸಾವಿರ ರೂ. ಖರ್ಚಾಗಿದೆ. ಫ್ರೆಡ್ರಿಕ್‌ ಅವರ ಮನೆಯಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿರುವುದನ್ನು ನೋಡಿ ಆಸುಪಾಸಿನ ಮನೆಯವರೂ ಅಳವಡಿಕೆಗೆ ಮುಂದಾಗಿದ್ದಾರೆ ಎಂಬುದು ಖುಷಿಯ ವಿಚಾರ.

“ಎಪ್ರಿಲ್‌-ಮೇ ತಿಂಗಳಲ್ಲಿ ಬಾವಿಯಲ್ಲಿ ನೀರು ತುಂಬಾ ಕೊರತೆಯಾಗುತ್ತಿತ್ತು. ಈ ಬಾರಿ ಮಳೆಯೂ ಕಡಿಮೆಯಾಗಿರುವುದರಿಂದ ಭವಿಷ್ಯದಲ್ಲಿ ನೀರಿನ ತೊಂದರೆ ಉಂಟಾಗದಿರಲೆಂದು ಮಳೆಕೊಯ್ಲು ವ್ಯವಸ್ಥೆ ಮಾಡಿಕೊಂಡಿದ್ದೇವೆ.
“ಉದಯವಾಣಿ’ ಪ್ರಕಟಿಸುತ್ತಿದ್ದ ಮಳೆಕೊಯ್ಲು ಮಾಹಿತಿಯೇ ನಮಗೆ ಪ್ರೇರಣೆ’ ಎನ್ನುತ್ತಾರೆ ಫ್ರೆಡ್ರಿಕ್‌ ಕ್ರಾಸ್ತಾ.

 ಉಪಯುಕ್ತ ಅಭಿಯಾನ
ಮಳೆಕೊಯ್ಲು ಅಳವಡಿಕೆಯ ಸರಳ ವಿಧಾನಗಳ ಬಗ್ಗೆ ಮಾಹಿತಿಯುಕ್ತ ಲೇಖನಗಳನ್ನು ಪ್ರಕಟಿ ಸುವ ಮೂಲಕ “ಉದಯ ವಾಣಿ’ಯು ಪ್ರತಿಯೊಬ್ಬರ ಮನೆಯಲ್ಲಿ ಮಳೆಕೊಯ್ಲು ಅಳವಡಿಸಲು ಕಾರಣವಾಗಿದೆ. ಈ ಅಭಿಯಾನ ಹಲವರಿಗೆ ಉಪಯು ಕ್ತವಾಗಿದೆ. ನಿರಂತರವಾಗಿ ಯಶೋ ಗಾಥೆ, ಅಳವಡಿಕೆಯ ಕಾರ್ಯ ವಿಧಾನಗಳ ಪ್ರಕಟನೆ ಮುಂದುವರಿಯಲಿ.
-ರೊನಾಲ್ಡ್‌ ಮೋನಿಸ್‌, ಮಡಂತ್ಯಾರು

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳ ಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.