ಯಕ್ಷಗಾನ ಕಲಾವಿದರ ಪರಿಶ್ರಮ ಶ್ಲಾಘನೀಯ: ಡಾ| ಸುಧೀರ್‌ ರಾಜ್‌


Team Udayavani, Apr 18, 2018, 3:10 PM IST

18-April-16.jpg

ಮೂಡಬಿದಿರೆ: ಭಾರತೀಯ ಕಲಾ ಸಂಸ್ಕೃತಿಯಲ್ಲಿ ಶ್ರೀಮಂತ ಕಲೆ ಎಂದರೆ ಅದು ಯಕ್ಷಗಾನ. ಭಕ್ತಿ, ಶಕ್ತಿ, ಶಾಂತಿ, ಆಧ್ಯಾತ್ಮಗಳಿಂದ ಕೂಡಿದ ಮನಸ್ಸಿಗೆ ಸುಖ ನೀಡುವ ಕಲೆ ಇದಾಗಿದೆ. ಕಲಾವಿದರು ತಾವು ಬಡವರಾಗಿ ಉಳಿದರೂ ಈ ಕಲೆಯನ್ನು ತಲೆಮಾರುಗಳಿಂದ ಈಗಿನವರೆಗೂ ದಾಟಿಸಿಕೊಂಡು ಬರುವಲ್ಲಿ ತೋರಿರುವ ಶ್ರದ್ಧೆ, ಪರಿಶ್ರಮವನ್ನು ಶ್ಲಾಘನೀಯ ಎಂದು ನಿಟ್ಟೆ ಜ| ಕೆ. ಎಸ್‌. ಹೆಗ್ಡೆ ಉದ್ಯಮಾಡಳಿತ ಕಾಲೇಜಿನ ಪ್ರಾಧ್ಯಾಪಕ ಡಾ| ಸುಧೀರ್‌ ರಾಜ್‌ ಕೆ. ತಿಳಿಸಿದರು. 

ಕಾಂತಾವರ ಯಕ್ಷದೇಗುಲದ ಆಶ್ರಯದಲ್ಲಿ ಏರ್ಪಡಿಸಲಾಗಿರುವ ನಾಲ್ಕನೇ ವರ್ಷದ ಬೇಸಗೆ ರಜಾಕಾಲದ ಉಚಿತ ಯಕ್ಷಗಾನ ತರಬೇತಿ ಶಿಬಿರವನ್ನು ಅವರು ಉದ್ಘಾಟಿಸಿ, ಮಾತನಾಡಿದರು.

ಯಕ್ಷದೇಗುಲದ ಅಧ್ಯಕ್ಷ ಶ್ರೀಪತಿ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಂತಾವರ ಗ್ರಾಮ ಪಂಚಾಯತ್‌ ಅಧ್ಯಕ್ಷ ಜಯ ಎಸ್‌. ಕೋಟ್ಯಾನ್‌, ಶಾಲಾ ಮುಖ್ಯ ಅಧ್ಯಾಪಿಕೆ ಶ್ಯಾಮಲಾ ಕುಮಾರಿ ಹಾಗೂ ಧರ್ಮರಾಜ ಕಂಬಳಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉತ್ತಮ ದಾಖಲಾತಿ
ಹಳ್ಳಿಯ ವಾತಾವರಣದಲ್ಲಿ ನಡೆಯುತ್ತಿರುವ ಹದಿನೈದು ದಿನಗಳ ಈ ಶಿಬಿರದಲ್ಲಿ 87 ಮಂದಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದು ಸಭಾಧ್ಯಕ್ಷ ಶ್ರೀಪತಿ ರಾವ್‌ ಅಭಿಪ್ರಾಯಪಟ್ಟರು. ಕಲಾವಿದ, ಯಕ್ಷಗುರು ಮಹಾವೀರ ಪಾಂಡಿ ಸ್ವಾಗತಿಸಿ, ಶಿಬಿರದ ನಿಯಮ ಹಾಗೂ ತರಗತಿಗಳ ವಿವರ ತಿಳಿಸಿ ವಂದಿಸಿದರು.

ಅಜೆಕಾರು, ಕಾರ್ಕಳ, ನಿಟ್ಟೆ, ರೆಂಜಾಳ, ಕಾಂತಾವರ, ಬೋಳ, ಬಾರಾಡಿ, ಮಾರ್ನಾಡು, ಪುತ್ತಿಗೆ, ನಾರಾವಿ, ದೂರದ ಕೋಟ ಸೇರಿದಂತೆ ವಿವಿಧೆಡೆಗಳಿಂದ 2ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ 87 ಮಂದಿ ಹುಡುಗ, ಹುಡುಗಿಯರು ಸರಿಸಮವಾಗಿ ಈ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರಯತ್ನ ಶ್ಲಾಘನೀಯ
ಈ ಕಲೆಯನ್ನು ಶ್ರದ್ಧೆಯಿಂದ ತಮ್ಮದಾಗಿಸಿಕೊಳ್ಳುವವರಿಗೆ ಜ್ಞಾನ, ದರ್ಶನ, ಭಕ್ತಿ, ಶಕ್ತಿ, ಸಂಸ್ಕಾರ ಒದಗಿಬರುವುದು. ಕಲೆಯ ಉಳಿವು, ಬೆಳವಣಿಗೆಯಲ್ಲಿ ಇಂಥ ಶಿಬಿರಗಳ ಪಾತ್ರ ಮಹತ್ವಪೂರ್ಣವಾಗಿದೆ ಎಂದ ಅವರು ಯಕ್ಷಗುರು ಮಹಾವೀರ ಪಾಂಡಿ ಅವರ ಪ್ರಯತ್ನ ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.