ಬಿಸಿ ನೀರಿನ ಬುಗ್ಗೆ ಬೆಂದ್ರ್ ತೀರ್ಥಕ್ಕೂ ತಟ್ಟಿದ ಬರಗಾಲ

ಸಂಪೂರ್ಣ ಒಣಗಿದ ಕೆರೆ; ಪ್ರವಾಸೋದ್ಯಮಕ್ಕೂ ಕುತ್ತು

Team Udayavani, Jun 3, 2019, 6:00 AM IST

z-17

ಈಶ್ವರಮಂಗಲ: ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬರಗಾಲ ಹೊಡೆತ ನೀಡಿದೆ. ಇದಕ್ಕೆ ಒಂದು ಉದಾಹರಣೆ ದಕ್ಷಿಣ ಭಾರತದ ಏಕೈಕ ಬಿಸಿನೀರಿನ ತಾಣವಾದ ಇರ್ದೆ ಗ್ರಾಮದ ಬೆಂದ್ರ್ ತೀರ್ಥ. ಬೆಂದ್ರ್ ತೀರ್ಥ ಈ ಬಾರಿ ಸಂಪೂರ್ಣ ಒಣಗಿ ಹೋಗಿದೆ. ನೀರಿಲ್ಲದ ಕಾರಣ ಕೆರೆ ನೋಡಲು ಯಾತ್ರಿಕರು ಬರುತ್ತಿಲ್ಲ.

ಐತಿಹಾಸಿಕ ಸ್ಥಳ
ಸೀರೆ ನದಿಯ ತಟದಲ್ಲಿ ಪ್ರಕೃತಿ ರಮಣೀಯ ವಾದ ಸ್ಥಳದಲ್ಲಿ ಇರುವ ಇದರ ಸೌಂದರ್ಯವನ್ನು ಮಳೆಗಾಲದಲ್ಲಿ ಸವಿದಷ್ಟು ಸಾಲದು. ಅಂತಹ ವಾತಾವರಣ ಇಲ್ಲಿನದ್ದು. ಇಲ್ಲಿ ಬಿಸಿ ನೀರು ಇರುವ ಕಾರಣಕ್ಕೆ ಇದೊಂದು ಪವಿತ್ರ ಹಾಗೂ ಐತಿಹಾಸಿಕ ಸ್ಥಳವಾಗಿ ಪರಿಗಣಿತವಾಗಿದೆ. ಸಲ್ಪಟ್ಟಿದೆ. ವಿಶೇಷ ದಿನಗಳಲ್ಲಿ ಇಲ್ಲಿ ತೀರ್ಥ ಸ್ನಾನವೂ ನಡೆಯುತ್ತದೆ. ಕೆರೆಯ ಪಕ್ಕದಲ್ಲಿ ಯಾವಾಗ ಕೊಳವೆ ಬಾವಿಗಳನ್ನು ತೆಗೆದರೋ ಅಂದಿನಿಂದ ಕೆರೆಯ ಬಿಸಿ ನೀರು ಬರಿದಾಗಿದೆ. ಮಳೆಗಾಲ ಪ್ರಾರಂಭವಾಗಿ ನದಿಯಲ್ಲಿ ನೀರು ತುಂಬುವ ವೇಳೆ ಮತ್ತೆ ಕೊಳ ತುಂಬುತ್ತದೆ. ಮಳೆ ಇರಲಿ, ಚಳಿ ಇರಲಿ ಈ ಕೊಳದ ನೀರು ಸದಾ ಬಿಸಿಯಾಗಿಯೇ ಇರುತ್ತದೆ. ಇದರ ನೀರು ಬಿಸಿಯಾಗಲು ವೈಜ್ಞಾನಿಕ ಕಾರಣವೇ ಇದೆ. ಬಿಸಿ ನೀರು ಇರುವ ಕಾರಣಕ್ಕೆ ಈ ಸ್ಥಳಕ್ಕೆ ತುಳುವಿನಲ್ಲಿ ಬೇಂದ್ರ್ ತೀರ್ಥ ಎಂದು ಕರೆಯುತ್ತಿದ್ದು, ಸ್ಥಳಕ್ಕೆ ಧಾರ್ಮಿಕ ಪಾವಿತ್ರ್ಯವೂ ಇದೆ.

ಇಲ್ಲಿಗೆ ತೆರಳುವ ರಸ್ತೆಯು ಸಂಚಾರಕ್ಕೆ ಅಯೋಗ್ಯವಾಗಿದ್ದು, ಹೊಂಡ-ಗುಂಡಿಗಳಿಂದ ತುಂಬಿರುವ ಕಾರಣ ಯಾತ್ರಿಕರ ಸಂಖ್ಯೆಯೂ ಕಡಿಮೆ ಯಾಗಿದೆ. ಬೇಸಗೆಯಲ್ಲಿ ಯಾತ್ರಿಕರು ಬರುವ ವೇಳೆ ಕೊಳದಲ್ಲಿ ನೀರು ಬತ್ತಿ ಹೋಗಿರುತ್ತದೆ. ಮಳೆಗಾಲದಲ್ಲಿ ನೀರು ಇದ್ದರೂ ರಸ್ತೆ ಸಮರ್ಪಕವಾಗಿಲ್ಲದ ಕಾರಣ ಯಾತ್ರಿಕರು ಬರಲು ಕಷ್ಟವಾಗುತ್ತದೆ. ಕೆಲವೊಂದು ವಿಶೇಷ ದಿನಗಳಲ್ಲಿ ಕೊಳದ ನೀರಿನಲ್ಲಿ ಸ್ನಾನ ಮಾಡಿದರೆ ಚರ್ಮ ಕಾಯಿಲೆ ವಾಸಿಯಾಗುತ್ತವೆ ಎನ್ನುವ ನಂಬಿಕೆ ಇದೆ. ನವ ದಂಪತಿಗಳು ಬಂದು ಪೂಜೆ ಸಲ್ಲಿಸುತ್ತಾರೆ. ವೈಜ್ಞಾನಿಕ ಮತ್ತು ಧಾರ್ಮಿಕ ಕಾರಣಗಳಿಂದ ಪ್ರಸಿದ್ಧಿ ಪಡೆದಿರುವ ಬೆಂದ್ರ್ ತೀರ್ಥವನ್ನು ಅಭಿವೃದ್ಧಿಪಡಿಸಬೇಕಾದ ಜವಾಬ್ದಾರಿ ಜಿಲ್ಲಾಡಳಿತಕ್ಕಿದ್ದು, ಪ್ರವಾಸೋದ್ಯಮ ಇಲಾಖೆಯ ಗಮನಕ್ಕೆ ತರುವ ಮೂಲಕ ಉಳಿಸುವ ಕಾರ್ಯ ಆಗಬೇಕಿದೆ. ಬೆಂದ್ರ್ ತೀರ್ಥ ಪ್ರವಾಸಿ ತಾಣವಾಗಿ ಉಳಿ ಯಲಿಲ್ಲ ಅಥವಾ ನಾವು ಉಳಿಸಲಿಲ್ಲ. ಅಲ್ಲಿನ ಬಿಸಿ ನೀರು ತಂಪಾದಾಗಲೂ ನಾವು ಮಾತನಾಡಲಿಲ್ಲ. ಈಗ ಕೆರೆಯೇ ಬತ್ತಿ ಹೋಗಿದೆ. ಪರಿಸರದಲ್ಲಿರುವ ಮಣ್ಣು ಬಿಸಿಯಾಗಿದೆ. ಆದರೂ ಕಾಳಜಿ ತೋರಿ ಸುತ್ತಿಲ್ಲ ಎಂದು ಪ್ರವಾಸಿಗರು ಬೇಸರ ವ್ಯಕ್ತ ಪಡಿಸುತ್ತಾರೆ.

ಗ್ರಾ.ಪಂ. ನಿರ್ಣಯಕ್ಕೆ ಬೆಲೆಯೇ ಇಲ್ಲ!
ಪ್ರಸಿದ್ಧಿ ಪಡೆದ ಬಿಸಿ ನೀರಿನ ಬುಗ್ಗೆ ಬೇಂದ್ರ್ ತೀರ್ಥವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಗೊಳಿಸಲು ಪಂಚಾ ಯತ್‌ ವತಿಯಿಂದ ಸಂಬಂಧಿ ಸಿದ ಇಲಾಖೆ, ಜನಪ್ರತಿನಿಧಿ ಗಳಿಗೆ ನಿರ್ಣಯ ಕಳಿಸಲಾಗಿತ್ತು. ಆದರೆ ಅಧಿಕಾರಿಗಳು, ಇಲಾಖೆಗಳು ಸ್ಪಂದಿಸದೇ ಇರುವುದು ಈ ಪ್ರದೇಶದ ಅಭಿವೃದ್ಧಿ ಕುಂಠಿತಗೊಳ್ಳಲು ಕಾರಣವಾಗಿದೆ ಎನ್ನಲಾಗುತ್ತಿದೆ.

ಪ್ರವಾಸಿ ಕೇಂದ್ರವಾಗಲಿಲ್ಲ
ಸ್ಥಳವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಬೇಕೆಂಬ ಆಗ್ರಹ ಕೇಳುತ್ತಿದ್ದರೂ ಈವರೆಗೂ ಅದು ಕೈಗೂಡಿಲ್ಲ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕೊಳವನ್ನು ದುರಸ್ತಿ ಮಾಡಿ ಸುತ್ತಲೂ ಕಲ್ಲಿನ ಆವರಣವನ್ನು ನಿರ್ಮಿಸಲಾಗಿದೆ. ವಿಶ್ರಾಂತಿ ಕೊಠಡಿ ಮತ್ತು ಬಟ್ಟೆ ಬದಲಿಸುವ ಕೊಠಡಿಗಳನ್ನು ನಿರ್ಮಿಸಲಾಗಿದ್ದರೂ, ಸೂಕ್ತ ನಿರ್ವಹಣೆ ಇಲ್ಲದೆ ಅವು ಉಪಯೋಗ ಶೂನ್ಯವಾಗಿದೆ. ಕೆಲವೊಂದು ಕೋಣೆಗಳು ಮುರಿದು ಬಿದ್ದು ವರ್ಷಗಳೇ ಕಳೆದಿದೆ. ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡುವುದೇ ಇಲ್ಲ.

ಗ್ರಾ.ಪಂ.ನಿಂದ ಪೂರ್ಣ ಸಹಕಾರ
ಬೆಂದ್ರತೀರ್ಥ ಅಭಿವೃದ್ಧಿಗೆ ಸಂಬಂಧಿಸಿ ಮುಂದಿನ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವ ಮಾಡಲಾಗುವುದು. ರಸ್ತೆ ಅಭಿವೃದ್ಧಿಗೆ ಅನುದಾನ ಇರಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣವಾಗಿ ಮಾಡಲು ಇಲಾಖೆಗೆ ಪಂಚಾಯತ್‌ನಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು.
– ಶೈಲಜಾ, ಪಿಡಿಒ, ಬೆಟ್ಟಂಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.