ನೇರಳಕಟ್ಟೆ ದ.ಕ. ಜಿ.ಪಂ. ಉ.ಹಿ.ಪ್ರಾ. ಶಾಲೆಗೆ ಶತಮಾನ ಸಂಭ್ರಮ

ಊರ ಪಟೇಲರು, ವಿದ್ಯಾಭಿಮಾನಿಗಳಿಂದ ಸ್ಥಾಪನೆ

Team Udayavani, Nov 17, 2019, 4:51 AM IST

nn-14

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1919 ಶಾಲೆ ಆರಂಭ
ಸಹಸ್ರಾರು ಮಕ್ಕಳಿಗೆ ವಿದ್ಯಾರ್ಜನೆ ಅವಕಾಶ ಒದಗಿಸಿದ ಶಾಲೆ.

ಮಾಣಿ: ಬಂಟ್ವಾಳ ತಾಲೂಕಿನ ನೆಟ್ಲಮುಟ್ನೂರು ಗ್ರಾಮದ ಮಾಣಿ-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ನೇರಳಕಟ್ಟೆ ದ.ಕ. ಜಿ.ಪಂ. ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಶತಮಾನೋತ್ಸವದ ಸಿದ್ಧತೆಯಲ್ಲಿದೆ. ಊರಿನ ಗಣ್ಯರು ಹಾಗೂ ವಿದ್ಯಾಭಿಮಾನಿಗಳಿಂದ ನಿರ್ಮಾಣಗೊಂಡ ಶಾಲೆಯು 1 ಎಕ್ರೆ 7 ಸೆಂಟ್ಸ್‌ ಸ್ಥಳವನ್ನು ಹೊಂದಿದೆ. ಉರ್ದಿಲ ಪಟೇಲರೆಂದೇ ಹೆಸರಾಗಿದ್ದ ಇಂದುಹಾಸ ರೈ ಸ್ಥಳದಾನ ಮಾಡಿದ್ದಾರೆ. ಯು.ಎಸ್‌.ಎ.ಯಲ್ಲಿರುವ ಉರ್ದಿಲಗುತ್ತು ರಾಮಪ್ರಸಾದ್‌ ರೈ ಅವರು ಊರಿಗೆ ಬಂದಾಗಲೆಲ್ಲ ಶಾಲೆಗೆ ಭೇಟಿ ನೀಡಿ ಶಾಲಾಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. 1919ರ ಎ. 1ರಂದು ಕಿ.ಪ್ರಾ. ಶಾಲೆ ಆರಂಭಗೊಂಡು 1975ರಲ್ಲಿ ಹಿ.ಪ್ರಾ. ಶಾಲೆಯಾಗಿ ಪರಿವರ್ತನೆಗೊಂಡಿತು. 2011ರಲ್ಲಿ 8ನೇ ತರಗತಿ ಆರಂಭಗೊಂಡು ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಾಯಿತು.

ಸಾಂಸ್ಕೃತಿಕ ಕೇಂದ್ರ
ಹಿಂದೆ ವಾರದ ಭಜನ ಕಾರ್ಯಕ್ರಮ ಶಾಲೆಯಲ್ಲಿ ನಡೆದುಕೊಂಡು ಬರುತ್ತಿತ್ತು. ಸ್ಥಳೀಯರಿಂದ ವರ್ಷಕೊಮ್ಮೆ ಏಕಾಹ ಭಜನೆ, ಸ್ಥಳೀಯ ಯುವಕ ವೃಂದದವರ ಸಹಭಾಗಿತ್ವದಲ್ಲಿ ವಾರ್ಷಿಕೋತ್ಸವ ಹಾಗೂ ನಾಟಕ ಪ್ರದರ್ಶನ ನಡೆಯುತ್ತಿದೆ. ಯಕ್ಷಗಾನ ಕಲಾವಿದ ಕರಾಯ ಕೊರಗಪ್ಪ ನೇತೃತ್ವದಲ್ಲಿ ಯಕ್ಷಗಾನ ತಾಳಮದ್ದಳೆ ಕೂಟ ನಡೆದುಕೊಂಡು ಬರುತ್ತಿದೆ ಎಂದು ಶಾಲೆಯಲ್ಲಿ ಹಲವು ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ರಾಮಣ್ಣ ಆಳ್ವರು ನೆನಪಿಸಿಕೊಳ್ಳುತ್ತಾರೆ.

ಹಳೆ ವಿದ್ಯಾರ್ಥಿಗಳು
ಶಾಲೆಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದು, ಡಾ| ಶ್ರೀಧರ ಆಳ್ವ ಉನ್ನತ ಶಿಕ್ಷಣ ಪಡೆದು ಅಮೆರಿಕಾದ ಹೆಲ್ತ್‌ ಕೇರ್‌ ಕಂಪೆನಿಯಲ್ಲಿ ಜಾಗತಿಕ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಗುರುತಿಸಿಕೊಂಡಿರುವ ವಸಂತ ಆಳ್ವ, ದಿನೇಶ್‌ ನಾಯ್ಕ, ನಿರಂಜನ್‌ ರೈ, ವಿಟuಲ ನಾಯ್ಕ, ಸುರೇಶ ರೈ, ಕೃಷ್ಣಪ್ರಸಾದ್‌ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಮಂಜುನಾಥ್‌ ಎನ್‌. ಮೊದಲಾದವರು ಈ ಶಾಲೆಯ ಹಳೆ ವಿದ್ಯಾರ್ಥಿಗಳು.

ಮುಖ್ಯೋಪಾಧ್ಯಾಯರಾಗಿದ್ದವರು
ವೆಂಕಟ್ರಮಣ ಭಟ್‌ ಮಿತ್ತೂರು (ಬಚ್ಚ ಮಾಸ್ಟ್ರೆ), ಜತ್ತಪ್ಪ ರೈ ಕೆ.ಎನ್‌., ಶಂಕರನಾರಾಯಣ, ಬಾಲಕೃಷ್ಣ ಶೆಟ್ಟಿ ಮುನ್ನೂರು, ವಿಶ್ವನಾಥ ರೈ ಅನಂತಾಡಿ, ನಾರಾಯಣ ಪೂಜಾರಿ ಸೂರ್ಯ, ಬಾಲಕೃಷ್ಣ ಕೊಂಡೆ, ವಿಶ್ವನಾಥ ನಾಯ್ಕ, ಜ್ಯೋತಿ, ಇಂದಿರಾ ಮೊದಲಾದವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ.

ಶಾಲೆಯು ಪ್ರಸ್ತುತ ವಿಶಾಲವಾದ ಆಟದ ಮೈದಾನ, ಕೈತೋಟವನ್ನು ಹೊಂದಿದೆ. ಸ್ಥಳೀಯ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸ್ತುತ ಏಮಾಜೆ ಕಿ.ಪ್ರಾ. ಶಾಲೆ, ಬಂಟ್ರಿಂಜ ಕಿ.ಪ್ರಾ. ಶಾಲೆ, ಪೆರಾಜೆ ಹಿ.ಪ್ರಾ. ಶಾಲೆ, ಅನಂತಾಡಿ, ಪಾಟ್ರಕೋಡಿ ಹಿ.ಪ್ರಾ. ಶಾಲೆಗಳಿಗೆ ಕೇಂದ್ರ ಸ್ಥಾನದಲ್ಲಿದೆ. 118 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, 7 ಮಂದಿ ಶಿಕ್ಷಕರಿದ್ದಾರೆ.

ಸರಕಾರದ ಅನುದಾನದೊಂದಿಗೆ ಹೊಸ ಕಟ್ಟಡ ನಿರ್ಮಾಣವಾಗಿದ್ದು, ಎಸ್‌.ಡಿಎಂ.ಸಿ. ಜನಪ್ರತಿನಿಧಿಗಳು, ವಿದ್ಯಾರ್ಥಿಗಳ ಹೆತ್ತವರ ಸಹಕಾರದಿಂದ ಶತಮಾನೋತ್ಸವ ಆಚರಿಸಲಾಗುವುದು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಉತ್ತಮವಾಗಿದ್ದು ಪ್ರತಿವರ್ಷ ಶೇ. 100 ಫ‌ಲಿತಾಂಶ ದಾಖಲಾಗುತ್ತಿದೆ. ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್‌ ಕೊಠಡಿ, ರಂಗಮಂದಿರ ಮತ್ತು ಸುಸಜ್ಜಿತ ಅಡುಗೆ ಕೋಣೆಯ ಆವಶ್ಯಕತೆ ಇದೆ.
-ಗೀತಾ ಕುಮಾರಿ ಕೆ.ಎಸ್‌., ಪ್ರಭಾರ ಮುಖ್ಯ ಶಿಕ್ಷಕಿ.

ನನ್ನ ಪ್ರಾಥಮಿಕ ಶಿಕ್ಷಣಕ್ಕೆ ಉತ್ತಮ ಅಡಿಪಾಯ ನೀಡಿದ ಶಾಲೆ ಶತಮಾನದ ಸಂಭ್ರಮದ ಸಿದ್ಧತೆಯಲ್ಲಿದೆ. ನನ್ನ ತಂದೆ ಈ ಶಾಲೆಯ ಬೆಳವಣಿಗೆಗೆ ವಿಶೇಷ ಕಾಳಜಿ ತೋರಿದ್ದರು. ನನ್ನ ಸಹೋದರ ಉರ್ದಿಲಗುತ್ತು ರಾಮಪ್ರಸಾದ್‌ ರೈ ಸಹಕಾರ ನೀಡುತ್ತಿದ್ದಾರೆೆ. ನಾನು ಕಲಿತ ಶಾಲೆಯು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂಬುದು ನನ್ನ ಮನದಾಳದ ಹಾರೈಕೆ.
-ಡಾ| ಅನಸೂಯಾ ಕಿಶೋರ್‌ ಶೆಟ್ಟಿ, ಹಳೆ ವಿದ್ಯಾರ್ಥಿನಿ.

-  ಮಹೇಶ್‌ ಮಾಣಿ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.