20 ಅಂಗನವಾಡಿಗಳಿಗೆ ಆರ್‌ಟಿಸಿ ಇಲ್ಲ!


Team Udayavani, Jun 21, 2019, 5:00 AM IST

39

ಸ್ವಂತ ಕಟ್ಟಡವಿದ್ದರೂ ನಿವೇಶನವೇ ಇಲ್ಲ

ಪುತ್ತೂರು: ಪುತ್ತೂರು ತಾಲೂ ಕಿನಲ್ಲಿ ಕಾರ್ಯಾಚರಿಸುತ್ತಿರುವ ಒಟ್ಟು 370 ಅಂಗನವಾಡಿ ಕೇಂದ್ರಗಳ ಕೇಂದ್ರಗಳಿಗೆ ಸ್ವಂತ ಕಟ್ಟಡವಿದ್ದರೂ ನಿವೇಶನ ಇಲ್ಲದಾಗಿದೆ. ಅವುಗಳ ಆರ್‌ಟಿಸಿ (ಪಹಣಿ ಪತ್ರ) ಇನ್ನೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕೈ ಸೇರಿಲ್ಲ. 3 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡವನ್ನೂ ಹೊಂದಿಲ್ಲ.

ಪ್ರಾರಂಭದಲ್ಲಿ ತಾಲೂಕಿನ 22 ಅಂಗನವಾಡಿ ಕೇಂದ್ರಗಳಿಗೆ ಆರ್‌ಟಿಸಿ ಆಗಿರಲಿಲ್ಲ. ಆದರೆ ಬೊಬ್ಬೆಕೇರಿ ಹಾಗೂ ಇಡ್ಯಡ್ಕ ಅಂಗನವಾಡಿ ಕೇಂದ್ರಗಳಿಗೆ ಆರ್‌ಟಿಸಿ ಅಂತಿಮಗೊಂಡಿರುವ ಹಿನ್ನೆಲೆಯಲ್ಲಿ ಇನ್ನೂ 20 ಅಂಗನವಾಡಿ ಕೇಂದ್ರಗಳಿಗೆ ಆರ್‌ಟಿಸಿ ಆಗಬೇಕಿದೆ. ಈ ಎಲ್ಲ ಅಂಗನವಾಡಿ ಕೇಂದ್ರಗಳು ಪ್ರಸ್ತುತ ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿದ್ದರೂ ಕಡಬ ತಾಲೂಕು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಿದರೆ ಬಹುತೇಕ ಕೇಂದ್ರಗಳು ಕಡಬಕ್ಕೆ ಸೇರುತ್ತವೆ.

ಸದ್ಯಕ್ಕೆ ಇವು ಪುತ್ತೂರು ಸಿಡಿಪಿಒ ವ್ಯಾಪ್ತಿಯಲ್ಲಿದ್ದರೂ ಅದರ ಆರ್‌ಟಿಸಿ ಪ್ರಕ್ರಿಯೆ ಪುತ್ತೂರು ಹಾಗೂ ಕಡಬ ತಹಶೀಲ್ದಾರ್‌ ವ್ಯಾಪ್ತಿಗೆ ಬರುತ್ತದೆ. ತಾಲೂಕಿನ 370 ಅಂಗನವಾಡಿ ಕೇಂದ್ರಗಳ ಪೈಕಿ ಮೂರಕ್ಕೆ ಮಾತ್ರ ಸ್ವಂತ ಕಟ್ಟಡ ಇಲ್ಲ. ಆರ್‌ಟಿಸಿ ಇಲ್ಲದೇ ಇರುವ 20 ಅಂಗನವಾಡಿ ಕೇಂದ್ರಗಳೂ ಸ್ವಂತ ಕಟ್ಟಡದಲ್ಲೇ ಕಾರ್ಯಾಚರಿಸುತ್ತಿವೆ.

ಪ್ರಸ್ತುತ ಮಠ ಅಂಗನವಾಡಿ ಕೇಂದ್ರಕ್ಕೆ ಸ್ಥಳ ನಿಗದಿಯಾಗಿದ್ದು, ಸ್ವಂತ ಕಟ್ಟಡವಿಲ್ಲ. ಪಂಜಿಗುಡ್ಡೆ ಅಂಗನವಾಡಿ ಕೇಂದ್ರಕ್ಕೂ ಸ್ಥಳವಿದ್ದು, ಪ್ರಸ್ತುತ ಎರಡೂ ಅಂಗನವಾಡಿ ಕೇಂದ್ರಗಳ ಕಟ್ಟಡದ ಅನುದಾನಕ್ಕಾಗಿ ಕಡತವನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗಿದೆ. ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ವಾಳ್ಯ ಅಂಗನವಾಡಿ ಕೇಂದ್ರಕ್ಕೆ ದಾನಿಯೊಬ್ಬರು ನಿವೇಶನ ನೀಡಿದ್ದು, ಪ್ರಸ್ತುತ ಅದರ ಕಡತ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿದೆ.

ಕೇವಲ ಮೂರಕ್ಕೆ ಕಟ್ಟಡವಿಲ್ಲ
ಪುತ್ತೂರು ತಾಲೂಕಿನಲ್ಲಿರುವ ಒಟ್ಟು 370 ಅಂಗನವಾಡಿ ಕೇಂದ್ರ ಗಳ ಪೈಕಿ 367 ಕೇಂದ್ರಗಳು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಮೂರು ಅಂಗನವಾಡಿ ಕೇಂದ್ರಗಳು ಮಾತ್ರ ಸ್ವಂತ ಕಟ್ಟಡವನ್ನು ಹೊಂದಿಲ್ಲ. ಉಪ್ಪಿನಂಗಡಿ ಸಮೀಪದ ಮಠ ಅಂಗನವಾಡಿ ಕೇಂದ್ರಕ್ಕೆ ಈ ಹಿಂದೆ ಸ್ವಂತ ಕಟ್ಟಡವಿತ್ತು. ಆದರೆ ಹೆದ್ದಾರಿ ವಿಸ್ತರಣೆ ಭೂಸ್ವಾಧೀನದ ಸಂದರ್ಭ ಕಟ್ಟಡವನ್ನು ಕೆಡವಲಾಗಿತ್ತು.

ಆರ್‌ಟಿಸಿ ಇಲ್ಲದ ಕೇಂದ್ರಗಳು
ತಾಲೂಕಿನ ಬಾಲವನ, ಕೂರ್ನಡ್ಕ-1, ಅಮ್ಚಿನಡ್ಕ, ಕುದ್ಕಾರು ಕೂರ, ಮಜ್ಜಾರಡ್ಕ, ಸರ್ವೆ, ತೆಂಕಿಲ, ಕೋಡಿಂಬಾಳ ಮುರಾಜೆ, ದೋಳ್ಪಾಡಿ ಕೂರೇಲು, ಮರ್ಧಾಳ ಕೆರ್ಮಾಯಿ, ಬಜತ್ತೂರು ಹೊಸಗದ್ದೆ, ಶಿರಾಡಿ ಪದಂಬಳ, ಗಾಳಿಬೆಟ್ಟು, ಮರ್ಧಾಳ, ಉಪ್ಪಿನಂಗಡಿ ಚರ್ಚ್‌, 34ನೇ ನೆಕ್ಕಿಲಾಡಿ ಸಂತೆಕಟ್ಟೆ, ನೆಲ್ಯಾಡಿ ಪೇಟೆ, ಕೌಕ್ರಾಡಿ ಕಟ್ಟೆಮಜಲು, ಐತ್ತೂರು 72 ಕಾಲನಿ ಹಾಗೂ ಐತೂರು ಎನ್‌ಕೂಪ್‌ ಅಂಗನವಾಡಿ ಕೇಂದ್ರಗಳಿಗೆ ಆರ್‌ಟಿಸಿ ಆಗುವುದಕ್ಕೆ ಬಾಕಿ ಇದೆ.

ತಹಶೀಲ್ದಾರ್‌ಗಳ ಜತೆ ಚರ್ಚೆ
ಒಟ್ಟು 22 ಅಂಗನವಾಡಿಗಳಿಗೆ ಆರ್‌ಟಿಸಿ ಬಾಕಿ ಇದೆ. ಪ್ರಸ್ತುತ 2 ಅಂಗನವಾಡಿ ಕೇಂದ್ರಗಳ ಆರ್‌ಟಿಸಿ ಪೂರ್ಣಗೊಂಡಿದೆ. ಉಳಿದ 20 ಆರ್‌ಟಿಸಿಗಳ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಸಂಬಂಧಪಟ್ಟ ತಹಶೀಲ್ದಾರ್‌ಗಳ ಬಳಿ ಚರ್ಚಿಸಿದ್ದೇನೆ. ಮೂರು ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೂ ಪ್ರಯತ್ನಗಳು ನಡೆಯುತ್ತಿವೆ.
– ಭಾರತಿ ಜೆ.ಎ. ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಪ್ರಭಾರ), ಪುತ್ತೂರು

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.