370 ವಿಧಿ ರದ್ದು ದೇಶಪ್ರೇಮಿಗಳಿಗೆ ಸಂಭ್ರಮದ ಕ್ಷಣ

ರಾಷ್ಟ್ರೀಯ ಏಕತಾ ಅಭಿಯಾನದಲ್ಲಿ ಕುಡಚಿ ಶಾಸಕ ರಾಜೀವ್‌

Team Udayavani, Sep 19, 2019, 5:10 AM IST

q-23

ಪುತ್ತೂರು: ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿ ಸಂವಿಧಾನದ ವಿಧಿ 370 ಹಾಗೂ 35 ಎ ರದ್ದಾಗುವ ಮೂಲಕ ಕಣಿವೆ ರಾಜ್ಯ ಭಾರತದ ಜತೆಗೆ ಸಂಪೂರ್ಣ ವಿಲೀನಗೊಂಡಿರುವುದು ದೇಶದ ಗಾಳಿ, ನೀರು ಸೇವಿಸುವ ಯಾವುದೇ ದೇಶಪ್ರೇಮಿಗೆ ಅತ್ಯಂತ ಸಂತೋಷದ ಹಾಗೂ ಜೀವಮಾನದಲ್ಲಿ ಮರೆಯಲಾಗದ ಕ್ಷಣ ಎಂದು ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ್‌ ಬಣ್ಣಿಸಿದರು.

ಒಂದು ದೇಶ ಒಂದು ಸಂವಿಧಾನ ಕಲ್ಪನೆಯೊಂದಿಗೆ ಸಾರ್ವಜನಿಕ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಬುಧವಾರ ಪೂರ್ವಾಹ್ನ ನಗರದ ಕೋ ಆಪರೇಟಿವ್‌ ಟೌನ್‌ ಬ್ಯಾಂಕಿನ ಸಭಾಂಗಣದಲ್ಲಿ ಪುತ್ತೂರು ಬಿಜೆಪಿ ಆಯೋಜಿಸಿದ ರಾಷ್ಟ್ರೀಯ ಏಕತೆ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.

ದೇಶದ ಶೇ. 1ರಷ್ಟು ಜನಸಂಖ್ಯೆಯಿದ್ದ ಜಮ್ಮು- ಕಾಶ್ಮೀರಕ್ಕೆ ಬಜೆಟ್‌ನ ಶೇ. 11ರಷ್ಟು ಅನುದಾನ ವ್ಯಯವಾಗುತ್ತಿತ್ತು. ಆದರೂ ಶಾಂತಿ ನೆಲೆಸುವಂತೆ ಮಾಡಲು ಸಾಧ್ಯವಾಗಿರಲಿಲ್ಲ. 70 ವರ್ಷಗಳಲ್ಲಿ 40 ಸಾವಿರ ನರಮೇಧ, ಉಗ್ರಗಾಮಿ ಚಟುವಟಿಕೆಗಳ ತಾಣವಾಗಿತ್ತು. ಆದರೆ ಶಾಂತಿ ತರಲು ವಿರುದ್ಧವಾಗಿದ್ದ ವಿಧಿಗಳ ರದ್ದತಿಯ ಮೂಲಕ ಎಲ್ಲವೂ ಈಗ ತಹಬದಿಗೆ ಬರುತ್ತಿದೆ ಎಂದರು.

ದೇಶದ ಪ್ರತಿಯೊಬ್ಬ ಪ್ರಜೆಗೆ ಸಮಾನತೆ, ಸ್ವಾತಂತ್ರ್ಯ, ಆತ್ಮಗೌರವದ ಹಕ್ಕನ್ನು ಸಂವಿಧಾನ ಪ್ರತಿಪಾದಿಸಿದರೂ ಜಮ್ಮು ಕಾಶ್ಮೀರದಲ್ಲಿ ಪ್ರಜೆಗಳಿಗೆ ಈ ಅವಕಾಶವನ್ನೇ ನೀಡಿರಲಿಲ್ಲ. ಸಂವಿಧಾನದ ಮೂಲ ಉದ್ದೇಶಕ್ಕೆ ವಿರುದ್ಧ ನಿಯಮಗಳನ್ನು ಇಲ್ಲಿ ಹೇರಳಾಗಿತ್ತು. ಇದರ ವಿರುದ್ಧ 1959ರಿಂದ ಹಲವು ಪ್ರಕರಣಗಳು ದಾಖ ಲಾಗಿದ್ದರೂ ನ್ಯಾಯಾಲಯವೇ ಕೈಚೆಲ್ಲಿತ್ತು ಎಂದರು.

ದಿಟ್ಟ ನಿರ್ಧಾರ
ಸರದಾರ್‌ ವಲ್ಲಭಭಾಯಿ ಪಟೇಲ್‌ ಅವರಿಂದ ಹಿಡಿದು ಜನಸಂಘದ ಸಂಸ್ಥಾಪಕ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಮೊದಲಾದವರು ಅಖಂಡ ಭಾರತಕ್ಕಾಗಿ ನಿರಂತರ ಹೋರಾಟ ನಡೆಸಿದರು.

ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರು ಚಾಣಾಕ್ಷತನ ಹಾಗೂ ದಿಟ್ಟ ನಿರ್ಧಾರದಿಂದ ಒಂದು ಹನಿ ರಕ್ತವೂ ಬೀಳದೆ, ಅಖಂಡ ಭಾರತದ ಸಂಕಲ್ಪ ಸಾಕಾರವಾಗುತ್ತಿದೆ. ಮುಂದೆ ಪಾಕ್‌ ಆಕ್ರಮಿತ ಕಾಶ್ಮೀರವೂ ಭಾರತದ ಕೈವಶವಾಗಲಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಹಿರಿಯ ಕಾರ್ಯಕರ್ತ ಯು. ಪೂವಪ್ಪ, ದೇಶದ ಅಖಂಡತೆಗೆ ಅಡ್ಡಿಯಾಗಿದ್ದ ವಿಧಿಯ ರದ್ದತಿಯ ಮೂಲಕ ಈ ನಿಟ್ಟಿನಲ್ಲಿ ಹೋರಾಟ ಮಾಡಿದ ನೂರಾರು ರಾಷ್ಟ್ರಭಕ್ತರ ತ್ಯಾಗ ಫಲ ನೀಡಿದೆ ಎಂದರು.

ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಪುತ್ತೂರು ಪ್ರಭಾರಿ ಕಿಶೋರ್‌ ಕುಮಾರ್‌, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್‌ ಕುಂಪಳ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ ಉಪಸ್ಥಿತರಿದ್ದರು.

ಸಮ್ಮಾನ
ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಕುಡುಚಿ ಕ್ಷೇತ್ರದ ಶಾಸಕ ಪಿ. ರಾಜೀವ್‌ ಹಾಗೂ ವಿಭಾಗ ಸಹ ಪ್ರಭಾರಿಯಾಗಿ ಆಯ್ಕೆಯಾದ ಗೋಪಾಲಕೃಷ್ಣ ಹೇರಳೆ ಅವರನ್ನು ಸಮ್ಮಾನಿಸಲಾಯಿತು.

ಬಿಜೆಪಿ ನಗರ ಕಾರ್ಯದರ್ಶಿ ಗೌರಿ ಬನ್ನೂರು ವಂದೇ ಮಾತರಂ ಹಾಡಿದರು. ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸ್ವಾಗತಿಸಿ, ನಗರ ಮಂಡಲದ ಅಧ್ಯಕ್ಷ ಜೀವಂದರ್‌ ಜೈನ್‌ ವಂದಿಸಿದರು. ಚಂದ್ರಶೇಖರ ಬಪ್ಪಳಿಗೆ ಕಾರ್ಯಕ್ರಮ ನಿರ್ವಹಿಸಿದರು.

ಸಮಸ್ಯೆಗಳಿಗೆ ನೆಹರೂ ಕಾರಣ
ಜಮ್ಮು – ಕಾಶ್ಮೀರಕ್ಕೆ ಸಂಬಂಧಪಟ್ಟ ಎಲ್ಲ ಸಮಸ್ಯೆಗಳಿಗೆ ಮಾಜಿ ಪ್ರಧಾನಿ ದಿ| ಜವಾಹರಲಾಲ್‌ ನೆಹರೂ ಅವರೇ ನೇರ ಕಾರಣ. ನೆಹರೂ ಅವರ ವಿಲಾಸ, ವಿಹಾರ, ವಿದ್ಯಾಭ್ಯಾಸಕ್ಕೆ ಪ್ರೀತಿಯ ಜಾಗವಾಗಿದ್ದ ಜಮ್ಮು ಕಾಶ್ಮೀರವನ್ನು ಭಾರತದ ಜತೆ ವಿಲೀನವಾಗದಂತೆ ನೋಡಿಕೊಂಡರು. ತಾವೇ ಕಾಶ್ಮೀರದ ವಿಚಾರವನ್ನು ವಿಶ್ವಸಂಸ್ಥೆಗೆ ಕೊಂಡೊಯ್ದರು. ಕಾಶ್ಮೀರದಲ್ಲಿ ಪ್ರತ್ಯೇಕ ಕಾನೂನು ಹಾಗೂ ಅಧಿಕಾರ ರೂಪಿಸಲು ಅವಕಾಶ ಮಾಡಿಕೊಟ್ಟರು. 35 ಎ ವಿಧಿಯನ್ನು ವಿಶೇಷ ಆದೇಶದ ಮೂಲಕ ಜಾರಿಗೊಳಿಸಿದರು. ಕೆಲವೇ ವ್ಯಕ್ತಿ, ಕುಟುಂಬಗಳನ್ನು ಓಲೈಸಲು ನೆಹರೂ ಈ ವಿಧಿಗಳನ್ನು ಜಾರಿ ಮಾಡಿದ್ದರು ಎಂದು ಪಿ. ರಾಜೀವ್‌ ಆರೋಪಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.