ಬಲ್ಯ ಪಟ್ನೂರಿನಲ್ಲಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ
Team Udayavani, Apr 23, 2019, 6:36 AM IST
ಕಡಬ: ಉಪ್ಪಿನಂಗಡಿ- ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಪಟ್ನೂರಿನಲ್ಲಿ ಸೋಮವಾರ ಅಪರಾಹ್ನ ಬೈಕ್ ಮತ್ತು ಮಾರುತಿ ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೈಕ್ ಸವಾರ ಬಲ್ಯ ಗ್ರಾಮದ ಕಕ್ಕೆಮಜಲು ರಾಮಣ್ಣ ಗೌಡರ ಪುತ್ರ ಶಿವಪ್ರಸಾದ್ (24), ಕಾರಿನಲ್ಲಿದ್ದ ಕಡಬ ಹಳೆಸ್ಟೇಷನ್ ನಿವಾಸಿಗಳಾದ ಅಬ್ರಹಾಂ (52), ಶಾಲಿ (50) ಹಾಗೂ ಸಿಂಧೂ (40) ಎಂದು ಗಾಯಗೊಂಡವರು.
ಪೈಂಟಿಂಗ್ ವೃತ್ತಿಯ ಶಿವಪ್ರಸಾದ್ ಕಡಬದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದಾಗ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.
ಶಿವಪ್ರಸಾದ್ ಪುತ್ತೂರಿನ ಹಾಗೂ ಕಾರು ಪ್ರಯಾಣಿಕರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ