ಬೀಡಿ ಲೇಬಲ್‌ ಹಚ್ಚುತ್ತಿದ್ದಾಕೆ ರಾಜ್ಯಕ್ಕೆ 6ನೇ ಸ್ಥಾನಿ


Team Udayavani, Apr 30, 2019, 6:14 AM IST

beedi

ಉಪ್ಪಿನಂಗಡಿ: ಕಾಲೇಜಿನಿಂದ ಬಂದು ಮನೆಯಲ್ಲಿ ಬೀಡಿ ಲೇಬಲ್‌ ಹಾಕಿ ಓದಿರುವ ಹುಡುಗಿಯೋರ್ವಳು ದ್ವಿತೀಯ ಪಿಯುಸಿಯಲ್ಲಿ 600ರಲ್ಲಿ 589 ಅಂಕ ಗಳಿಸಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದಿದ್ದಾಳೆ. ಯಾವುದೇ ಸೌಲಭ್ಯ ಇಲ್ಲದಿದ್ದರೂ ಇಚ್ಛಾಶಕಿ ಇದ್ದರೆ ಸಾಧನೆ ಸಾಧ್ಯ ಎನ್ನುವುದನ್ನು ತೋರಿಸಿಕೊಟ್ಟಿದ್ದಾಳೆ.

ದ.ಕ. ಜಿಲ್ಲೆಯ ಪುತ್ತೂರಿನ ಅಂಬಿಕಾ ವಿದ್ಯಾಲಯದ ದ್ವಿತೀಯ ಪಿಯುಸಿ ಪಿಸಿಎಂಬಿ ವಿದ್ಯಾರ್ಥಿನಿ, ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ನಾಗೇಶ್‌ – ವನಜಾ ದಂಪತಿಯ ಪುತ್ರಿ ಸ್ನೇಹಾ ಈ ಸಾಧಕಿ.

ತಂದೆ ಬೀಡಿ ಫ್ಯಾಕ್ಟರಿಯಲ್ಲಿ ಕಾರ್ಮಿಕ. ತಾಯಿ ಗೃಹಿಣಿ. ಬರುವ ಆದಾಯ ಕುಟುಂಬ ನಿರ್ವಹಣೆಗೆ ಸಾಕಾಗದ ಕಾರಣ ಮನೆಯಲ್ಲಿ ಬೀಡಿಗೆ ಲೇಬಲ್‌ ಹಾಕುವ ಹೆಚ್ಚುವರಿ ಕಾಯಕ ಇವರದ್ದು. ಮಕ್ಕಳಿಬ್ಬರು ಇದರಲ್ಲಿ ಸಹಭಾಗಿಗಳು.

ಸ್ನೇಹಾ ಸಾಯಂಕಾಲ ಮನೆಗೆ ಬಂದ ಕೂಡಲೇ ಪಠ್ಯ ಸಂಬಂಧಿ ಕೆಲಸಗಳನ್ನು ಪೂರೈಸಿ ರಾತ್ರಿ 8.30ರಿಂದ 11ರ ವರೆಗೆ ಬೀಡಿ ಲೇಬಲ್‌ ಹಾಕುವ ಕಾಯಕದಲ್ಲಿ ತೊಡಗುತ್ತಿದ್ದರು.

ಮತ್ತೆ ನಸುಕಿನಲ್ಲಿ 5.30ರ ವೇಳಗೆ ಎದ್ದು ಓದುತ್ತಿದ್ದರು. ಓರಗೆಯ ಮಕ್ಕಳೆಲ್ಲ ಬಸ್‌ ನಿಲ್ದಾಣವರೆಗೆ ಹೆತ್ತವರ ವಾಹನದಲ್ಲಿ ಹೋದರೆ ಸ್ನೇಹಾ ನಡೆದುಕೊಂಡೇ ನಿಲ್ದಾಣ ತಲುಪುತ್ತಿದ್ದರು. ಆದರೆ ಆಕೆ ಮಾಡಿರುವ ಸಾಧನೆ ಮಾತ್ರ ಎಲ್ಲರಿಗೂ ಮಾದರಿಯಾಗಿದೆ.

ವಿದ್ಯಾಸಂಸ್ಥೆ, ಪೋಷಕರಿಗೆ ಸಮರ್ಪಣೆ
ಅಂದು 10ನೇ ತರಗತಿಯಲ್ಲಿ ಶೇ. 94.8 ಅಂಕ ಗಳಿಸಿದಾಗ “ಮುಂದಕ್ಕೆ ಎಲ್ಲಿ ಕಲಿಯುತ್ತೀ’ ಎಂಬ ಅಪ್ಪನ ಪ್ರಶ್ನೆಗೆ ಅಂಬಿಕಾ ವಿದ್ಯಾಲಯದಲ್ಲಿ ಕಲಿಯುವ ಆಸೆ ಇದೆ ಎಂದಿದ್ದೆ. ಶೇ. 98ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ಅಲ್ಲಿ ಉಚಿತ ಶಿಕ್ಷಣವಿತ್ತು. ನನಗೆ ಅಂಕ ಸ್ವಲ್ಪ ಕಡಿಮೆಯಿದ್ದರಿಂದ ಪೂರ್ಣ ಶುಲ್ಕ ಪಾವತಿಸಬೇಕಿತ್ತು. ತಂದೆಯವರು ನನ್ನ ಆಸೆಗೆ ನೀರೆರೆದು ಪೋಷಿಸಿದರು. ಅದಕ್ಕಾಗಿ ನನ್ನ ಶ್ರೇಯಸ್ಸು ವಿದ್ಯಾಲಯಕ್ಕೆ ಮತ್ತು ಹೆತ್ತವರಿಗೆ ಸಮರ್ಪಿತವಾಗಿದೆ ಎನ್ನುತ್ತಾರೆ ಸ್ನೇಹಾ.

ಮೆಡಿಕಲ್‌ಓದುವೆ
ನೀಟ್‌ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದರೆ ಮೆಡಿಕಲ್‌ ಓದುವೆ. ಇಲ್ಲವಾದರೆ ವೆಟರ್ನರಿ ಅಥವಾ ತೋಟಗಾರಿಕಾ ಕ್ಷೇತ್ರದತ್ತ ಗಮನ ಹರಿಸುವೆ.

– ಸ್ನೇಹಾ

ಸಾಧನೆ ತೃಪ್ತಿ ತಂದಿದೆ
ಬಡತನವಿದ್ದರೂ ಮಗಳು ಎಸೆಸೆಲ್ಸಿ ಯಲ್ಲಿ ಶೇ. 94.8 ಅಂಕ ಗಳಿಸಿದ್ದಳು. ಅವರಿವರ ಸಹಕಾರದಿಂದ ಪಿಯುಸಿಗೆ ಸೇರಿಸಿದೆ. ಈಗ ಅವಳ ಸಾಧನೆಯಿಂದ ತುಂಬಾ ಖುಷಿಯಾಗಿದೆ.
– ನಾಗೇಶ್‌, ತಂದೆ

ಮಾಹಿತಿ ಕೊಡಿ
ನಿಮ್ಮ ಪರಿಸರದಲ್ಲೂ ಇಂತಹ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿದ್ದಲ್ಲಿ 8095192817 ನಂಬರ್‌ಗೆ ವಾಟ್ಸಪ್‌ ಮಾಡಿ. ನಾವು ಅವರನ್ನು ಮಾತನಾಡಿಸಿ ಸಾಧನೆಯ ಕುರಿತು ಈ ಅಂಕಣದಲ್ಲಿ ಪ್ರಕಟಿಸುತ್ತೇವೆ.
– ಸಂಪಾದಕ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.