ಕೊಳೆ ರೋಗಕ್ಕೆ 9.52 ಕೋ.ರೂ. ಪರಿಹಾರ ಪಾವತಿ: ಐವನ್‌


Team Udayavani, Jun 16, 2019, 9:25 AM IST

z-32

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕೊಳೆ ರೋಗದಿಂದ ಸಂತ್ರಸ್ತರಾಗಿರುವ ಕೃಷಿಕರಿಗೆ ಈವರೆಗೆ 9.52 ಕೋಟಿ ರೂ. ಅನುದಾನ ಪಾವತಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ತಿಳಿಸಿದರು. ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ಶನಿವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ತಹಶೀಲ್ದಾರ್‌ ಅವರಲ್ಲಿ ವಿವರ ಪಡೆದ ಅವರು, ತಾಲೂಕಿನಲ್ಲಿ ಕೊಳೆ ರೋಗ ದಿಂದ ಸಂತ್ರಸ್ತರಾಗಿರುವ 19,112 ಕೃಷಿಕರಿಂದ ಅರ್ಜಿ ಬಂದಿದ್ದು, 16,971 ಮಂದಿಗೆ ಸಹಕಾರಿ ಸಂಘಗಳಲ್ಲಿ ಹಾಗೂ 999 ಮಂದಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಈವರೆಗೆ 9.52 ಕೋಟಿ ರೂ. ಅನುದಾನ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ ಎಂದು ತಿಳಿಸಿದರು.

63,075 ಎಕ್ರೆ ಕೃಷಿಭೂಮಿ ಮಂಜೂರು
ಅಕ್ರಮ – ಸಕ್ರಮ ಯೋಜನೆಗಳಲ್ಲಿ ಈಗಾಗಲೇ 18,124 ಮಂದಿ ಕೃಷಿಕರಿಗೆ 63,075 ಎಕ್ರೆ ಕೃಷಿಭೂಮಿ ನೀಡಲಾಗಿದೆ. ಹೊಸದಾಗಿ ಅರ್ಜಿನಮೂನೆ 57ರಲ್ಲಿ 31,123 ಅರ್ಜಿಗಳು ಬಂದಿದ್ದು, ಪರಿಶೀಲನೆಯಲ್ಲಿವೆ. 94ಸಿಯಲ್ಲಿ 33,354 ಅರ್ಜಿ ಬಂದಿದ್ದು, 14,132 ಮಂಜೂರಾಗಿ, 13,269 ತಿರಸ್ಕೃತಗೊಂಡಿವೆ. 5,953 ಪರಿಶೀಲನೆಯಲ್ಲಿದೆ. 94ಸಿಸಿಯಲ್ಲಿ 738 ಅರ್ಜಿಗಳಲ್ಲಿ 268 ಪರಿಶೀಲನೆಯಲ್ಲಿದೆ ಎಂದು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ತಿಳಿಸಿದರು. ಉಳಿದಿರುವ ಅರ್ಜಿ ಪರಿಶೀಲಿಸಿ ಶೀಘ್ರ ಮಂಜೂರು ಮಾಡು ವಂತೆ ಐವನ್‌ ಸೂಚಿಸಿದರು.

ಡಿ.ಸಿ. ಮನ್ನಾ ಜಮೀನು: ವಿಶೇಷ ಸಭೆ
ಜಿಲ್ಲೆಯಲ್ಲಿರುವ ಡಿ.ಸಿ. ಮನ್ನಾ ಜಮೀನಿನ ಸಮಸ್ಯೆಗೆ ಪರಿಹಾರ ಕಾಣುವಂತೆ ದಲಿತ ಮುಖಂಡರು ಬೇಡಿಕೆ ಮುಂದಿಟ್ಟಾಗ, ಬೆಳ್ತಂಗಡಿಯಲ್ಲಿ 61 ಎಕ್ರೆ ಜಮೀನು ಮಾತ್ರ ಲಭ್ಯವಿದ್ದು, ಅದನ್ನು ಅರ್ಹರಿಗೆ ಹಂಚಲು ಅರ್ಜಿ ಕರೆಯಲಾಗಿದೆ. 398 ಅರ್ಜಿಗಳು ಬಂದಿದ್ದು, ಅದನ್ನು ಪರಿಶೀಲಿಸಲಾಗುತ್ತಿದೆ. 570 ಎಕ್ರೆ ಡಿ.ಸಿ. ಮನ್ನಾ ಜಮೀನು ಬೇರೆ ಉದ್ದೇಶಗಳಿಗೆ ಹಂಚಿಕೆಯಾಗಿದೆ ಹಾಗೂ 410 ಎಕ್ರೆ ಜಮೀನು ಅತಿಕ್ರಮಣವಾಗಿದೆ ಎಂದು ತಿಳಿಸಿದರು.

ಅತಿಕ್ರಮಣವಾಗಿರುವ ಹಾಗೂ ಇತರ ಉದ್ದೇಶಗಳಿಗೆ ಹಂಚಿಕೆಯಾಗಿರುವ ಜಮೀನನ್ನು ಕೂಡಲೇ ವಶಪಡಿಸಿ ದಲಿತರಿಗೆ ಹಂಚಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವರ್ಗ, ವಿವಿಧ ತಾ| ಮಟ್ಟದ ಅಧಿಕಾರಿಗಳ, ದಲಿತ ಮುಖಂಡರೊಂದಿಗೆ ಜಿಲ್ಲಾಮಟ್ಟದಲ್ಲಿ ವಿಶೇಷ ಸಭೆ ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಕೂಡಲೇ ಸಭೆ ಕರೆಯುವಂತೆ ಸೂಚಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಹಕ್ಕುಪತ್ರ: ಮನವಿ
ಕಾಟಾಜೆ ಪ್ರದೇಶದಲ್ಲಿ ಸುಮಾರು 40 ಆದಿವಾಸಿ ಕುಟುಂಬಗಳು 1992ರಲ್ಲಿ ಅರ್ಜಿ ಸಲ್ಲಿಸಿದಾಗ, ಸರ್ವೇ ನಡೆದು ಕಂದಾಯ ಭೂಮಿಯೆಂದು ಗುರುತಿಸಲಾಗಿದ್ದರೂ ಹಕ್ಕುಪತ್ರ ನೀಡಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ದೂರುದಾರರು ಗಮನ ಸೆಳೆದರು. ಇನ್ನುಳಿದಂತೆ ತಣ್ಣೀರುಪಂಥ ಪಾಲೇದು ಎಂಬಲ್ಲಿ ಅಂಬೇಡ್ಕರ್‌ಭವನಕ್ಕೆ 2 ವರ್ಷಗಳ ಹಿಂದೆ ಅನುದಾನ ಮಂಜೂರುಗೊಂಡಿದ್ದರೂ ಕಟ್ಟಡ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ಮನವಿ ಸಲ್ಲಿಸಿ ದರು. ಈ ಬಗ್ಗೆ ತಹಶೀಲ್ದಾರ್‌ ಬಳಿ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಐವನ್‌ ಭರವಸೆ ನೀಡಿದರು.

ಪ್ರತಿಗ್ರಾಮಗಳಲ್ಲಿ ರುದ್ರಭೂಮಿ ಅಗತ್ಯ ವಾಗಿ ಇರಬೇಕು ಎಂಬುದು ಸರಕಾರದ ಸೂಚನೆಯಿದ್ದು, ಅದಕ್ಕೆ ಅಗತ್ಯ ಜಾಗ ಮೀಸಲಿಸಬೇಕು. ಮನೆ ನಿವೇಶನಗಳಿಗೆ ಸಾಕಷ್ಟು ಅರ್ಜಿಗಳು ಕಾಯುತ್ತಿದ್ದು, ಸರಕಾರಿ ಜಾಗಗಳನ್ನು ಮೀಸಲಿರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಕ್ಕುಪತ್ರಗಳನ್ನು ಹಾಗೂ ವಿವಿಧ ಯೋಜನೆ ಫಲಾನುಭವಿಗಳಿಗೆ ಪಿಂಚಣಿ ಗಳನ್ನು ವಿತರಿಸಲಾಯಿತು.

ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಮಾಜಿ ಶಾಸಕ ಕೆ. ವಸಂತಬಂಗೇರ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಸದಸ್ಯರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಕೃತಿ ವಿಕೋಪ ನಿಧಿಯ ಕುರಿತು ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಚರ್ಚಿಸಿ, ತಾಲೂಕಿನಲ್ಲಿ 24 ಲಕ್ಷ ರೂ. ಅನುದಾನ ಲಭ್ಯವಿದೆ. ಮಳೆಯಿಂದ ಹಾನಿಗೊಳಗಾದ ಮನೆ ಸಹಿತ ಇತರ ಭಾಗಶಃಹಾನಿಗೊಳಗಾಗಿದ್ದಲ್ಲಿ ಗರಿಷ್ಠ ಪರಿಹಾರ ಒದಗಿಸಲು ಪ್ರಯತ್ನಿಸಿ. ಹಾನಿ ಸಂದರ್ಭ ಜನಪ್ರತಿನಿಧಿಗಳ ಆಗಮನಕ್ಕೆ ನಿರೀಕ್ಷಿಸದೆ ಅಧಿಕಾರಿಗಳೇ ಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಿ ವರದಿ ಸಿದ್ಧಪಡಿಸುವಂತೆ ಸಲಹೆ ನೀಡಿದರು.

ಪ್ರತಿ ತಾಲೂಕುಗಳಲ್ಲಿ ಸರಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಹಾಗೂ ಅಧಿಕಾರಿಗಳ ಸಭೆಯನ್ನು ಕರೆದು ಪಿಂಚಣಿ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯವನ್ನು ಮಾಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಭರವಸೆ ನೀಡಿದರು.

ಪ್ರಕೃತಿ ವಿಕೋಪ: ಗರಿಷ್ಠ ಪರಿಹಾರ

ಪ್ರಕೃತಿ ವಿಕೋಪ ನಿಧಿಯ ಕುರಿತು ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಚರ್ಚಿಸಿ, ತಾಲೂಕಿನಲ್ಲಿ 24 ಲಕ್ಷ ರೂ. ಅನುದಾನ ಲಭ್ಯವಿದೆ. ಮಳೆಯಿಂದ ಹಾನಿಗೊಳಗಾದ ಮನೆ ಸಹಿತ ಇತರ ಭಾಗಶಃಹಾನಿಗೊಳಗಾಗಿದ್ದಲ್ಲಿ ಗರಿಷ್ಠ ಪರಿಹಾರ ಒದಗಿಸಲು ಪ್ರಯತ್ನಿಸಿ. ಹಾನಿ ಸಂದರ್ಭ ಜನಪ್ರತಿನಿಧಿಗಳ ಆಗಮನಕ್ಕೆ ನಿರೀಕ್ಷಿಸದೆ ಅಧಿಕಾರಿಗಳೇ ಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಿ ವರದಿ ಸಿದ್ಧಪಡಿಸುವಂತೆ ಸಲಹೆ ನೀಡಿದರು.

ಪಿಂಚಣಿದಾರರೊಂದಿಗೆ ಸಭೆ

ಪ್ರತಿ ತಾಲೂಕುಗಳಲ್ಲಿ ಸರಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಹಾಗೂ ಅಧಿಕಾರಿಗಳ ಸಭೆಯನ್ನು ಕರೆದು ಪಿಂಚಣಿ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯವನ್ನು ಮಾಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಭರವಸೆ ನೀಡಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.