ಕಾಲು ಹೋದರೂ ಭರವಸೆಯಿಂದ ಬದುಕು ಕಟ್ಟಿಕೊಂಡ ಛಲಗಾರ

 ಅಪಘಾತದಲ್ಲಿ ಕಾಲು, ಪಾದ ಕಳೆದುಕೊಂಡ ಅಬ್ದುಲ್‌ ಖಾದರ್‌ ; ಮೊದಲಿಗೆ ಬಟ್ಟೆ, ಈಗ ಮೀನು ವ್ಯಾಪಾರ ಮಾಡಿ ಜೀವನಕ್ಕೆ ಆಧಾರ

Team Udayavani, Nov 17, 2019, 4:19 AM IST

nn-21

ಅರಂತೋಡ: ಬದುಕು ನಾವು ಅಂದುಕೊಂಡಂತೆ ಇರುವುದಿಲ್ಲ. ಅದೆಷ್ಟೋ ಆಕಸ್ಮಿಕ ತಿರುವುಗಳು ಘಟಿಸುತ್ತವೆ. ಆದರೂ ಎದೆಗುಂದದೆ ಸಾಧನೆ ಮಾಡುವವರಿದ್ದಾರೆ. ಒಂದು ಕಾಲು ಹಾಗೂ ಮತ್ತೂಂದು ಪಾದವನ್ನು ಸಂಪೂರ್ಣ ಕಳೆದುಕೊಂಡಿದ್ದರೂ ಗೂನಡ್ಕದ ಅಬ್ದುಲ್‌ ಖಾದರ್‌ ಅವರು ಮೀನು ಮಾರಾಟ ಮಾಡಿ ಸ್ವಾವಲಂಬಿ ಜೀವನ ನಡೆಸುತ್ತ ಮಾದರಿಯಾಗಿದ್ದಾರೆ.

ಗೂನಡ್ಕದ ಮೋಯ್ದಿನ್‌ ಕುಂಞಿ ಅವರ ನಾಲ್ವರು ಮಕ್ಕಳಲ್ಲಿ ಅಬ್ದುಲ್‌ ಖಾದರ್‌ ಒಬ್ಬರು. ಅವರು ತನ್ನ 12ನೇ ವಯಸ್ಸಿನಲ್ಲಿ ಮಾಣಿ- ಮೈಸೂರು ರಸ್ತೆಯ ಗೂನಡ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ಸು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಲಾರಿ ಅಬ್ದುಲ್‌ ಖಾದರ್‌ ಅವರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಖಾದರ್‌ ಅವರ ಒಂದು ಕಾಲು ಸಂಪೂರ್ಣ ತುಂಡಾಗಿ ಇನ್ನೊಂದು ಕಾಲಿನ ಪಾದ ಮುರಿಯಿತು. ದೀರ್ಘ‌ಕಾಲ ಚಿಕಿತ್ಸೆ ಪಡೆಯಬೇಕಾಯಿತು. ಮೂರನೇ ತರಗತಿಯಲ್ಲಿ ಓದುತ್ತಿದ್ದ ಅವರು ಈ ಕಾರಣಕ್ಕಾಗಿಯೇ ಶಾಲೆಯನ್ನೂ ತೊರೆಯಬೇಕಾಯಿತು.

ಕಳೆದುಕೊಳ್ಳದ ಭರವಸೆ
ಕಾಲು ಕಳೆದುಕೊಂಡರೂ ಖಾದರ್‌ ಬದುಕಿನಲ್ಲಿ ಭರವಸೆ ಕಳೆದುಕೊಳ್ಳದೆ ಕೆಲವು ವರ್ಷಗಳ ಕಾಲ ಬೀದಿಗಳಲ್ಲಿ ವ್ಯಾಪಾರ ಮಾಡಿದರು. ಕಾಲು ಕಳೆದುಕೊಂಡ ತನ್ನನ್ನು ಯಾರು ಮದುವೆಯಾಗಲು ಮುಂದೆ ಬರುತ್ತಾರೆ ಎಂಬ ಆತಂಕವೂ ಅವರಿಗಿತ್ತು. ಆದರೆ, ತಮ್ಮದೇ ಊರಿನ ಅಬ್ದುಲ್ಲ ಅವರು ಮಗಳು ಅಮೀನಾ ಮನೆಯವರ ಒಪ್ಪಿಗೆಯೊಂದಿಗೆ ಖಾದರ್‌ ಅವರನ್ನು ಮದುವೆಯಾದರು. ಬದುಕಿನಲ್ಲಿ ಹೊಸ ಧೈರ್ಯ, ಭರವಸೆ ತುಂಬಿದರು.

ಸುಮಾರು 20 ವರ್ಷಗಳ ಕಾಲ ಬಟ್ಟೆ ವ್ಯಾಪಾರ ನಡೆಸಿದ ಅಬ್ದುಲ್‌ ಖಾದರ್‌ ಪ್ರಸ್ತುತ ಮೀನು ವ್ಯಾಪಾರ ಮಾಡುತ್ತಿದ್ದಾರೆ. ಸರಕಾರದಿಂದ ರಿಯಾಯಿತಿ ದರದಲ್ಲಿ ದೊರೆತ ಮೂರು ಚಕ್ರದ ಸ್ಕೂಟರ್‌ನಲ್ಲಿ ಸುಳ್ಯದ ಮೀನು ಮಾರುಕಟ್ಟೆಯಿಂದ ಸುಮಾರು 25 ಕೆ.ಜಿ. ಮೀನು ಖರೀದಿಸಿ, ಕೊಯಿನಾಡು ತನಕ ಮೀನು ಮಾರಾಟ ಮಾಡುತ್ತಾರೆ. ಪತ್ನಿ, ಇಬ್ಬರು ಮಕ್ಕಳೊಂದಿಗೆ ಅಬ್ದುಲ್‌ ಖಾದರ್‌ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ನಿರಾಸೆಗೊಳ್ಳದೆ ಬದುಕು ಕಟ್ಟಿಕೊಂಡೆ
ನಾನು ಕಾಲು ಕಳೆದುಕೊಂಡ ಮೇಲೆ ಜೀವನದಲ್ಲಿ ನಿರಾಸೆಗೊಂಡಿಲ್ಲ. ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಆಲೋಚಿಸಿ ಬಟ್ಟೆ ವ್ಯಾಪಾರ ಆರಂಭಿಸಿದೆ. ಬಳಿಕ ಬಟ್ಟೆ ವ್ಯಾಪಾರ ಕಡಿಮೆಯಾಗುತ್ತ ಬಂತು. ಈಗ ಮೀನು ವ್ಯಾಪಾರ ಆರಂಭಿಸಿದ್ದೇನೆ. ವ್ಯಾಪಾರ ಪರವಾಗಿಲ್ಲ. ನಾನು ಎಲ್ಲದಕ್ಕೂ ಮನೆಯವರನ್ನು ಅವಲಂಬಿಸುವುದು ಸರಿಯಾಗುವುದಿಲ್ಲ. ನನಗೆ ಆರೋಗ್ಯ ಅಷ್ಟು ಸರಿ ಇಲ್ಲ. ಮದ್ದಿಗೆ ಸ್ವಲ್ಪ ಹಣ ಬೇಕಾಗುತ್ತದೆ. ಇದಕ್ಕೆಲ್ಲ ವ್ಯಾಪಾರದಲ್ಲಿ ಬಂದ ಹಣ ಹೊಂದಾಣಿಯಾಗುತ್ತದೆ.
 - ಅಬ್ದುಲ್‌ ಖಾದರ್‌ ಗೂನಡ್ಕ, ಸಂಚಾರಿ ಮೀನು ವ್ಯಾಪಾರಿ

– ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.