ರಾಜ್ಯಕ್ಕೆ ಆರೋಗ್ಯ ಮಂತ್ರಿಯನ್ನು ಕೊಟ್ಟ ಹೆಮ್ಮೆಯ ಶಾಲೆ

ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಕಳ್ಳಿಗೆ

Team Udayavani, Dec 5, 2019, 5:54 AM IST

fd-4

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1913 ಶಾಲೆ ಆರಂಭ
1995ರ ಬಳಿಕ ಹಿ.ಪ್ರಾ. ಶಾಲೆಯಾಗಿ ಮೇಲ್ದರ್ಜೆಗೆ

ಬಂಟ್ವಾಳ: ಐತಿಹಾಸಿಕ ನೆತ್ತರಕೆರೆಯ ದಂಡೆಯಲ್ಲೇ ಬೆಳೆದು ನಿಂತಿರುವ ಕಳ್ಳಿಗೆ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ರಾಜ್ಯಕ್ಕೆ ಆರೋಗ್ಯ ಮಂತ್ರಿಯನ್ನು ಕೊಟ್ಟ ಹೆಮ್ಮೆಯನ್ನೂ ಗಳಿಸಿಕೊಂಡಿದೆ. 1913ರಲ್ಲಿ ಈ ಶಾಲೆ ಪ್ರಾರಂಭಗೊಂಡಿದೆ ಎಂದು ದಾಖಲೆಗಳು ಹೇಳುತ್ತಿದ್ದರೂ ಅದಕ್ಕೂ ಒಂದಷ್ಟು ವರ್ಷಗಳ ಹಿಂದೆ ಈ ಶಾಲೆ ಮುಳಿಹುಲ್ಲಿನ ಛಾವಣಿಯ, ಮಣ್ಣಿನ ಗೋಡೆಯ ಗುಡಿಸಲಿನಲ್ಲಿ ನಡೆಯುತ್ತಿತ್ತು ಎನ್ನಲಾಗುತ್ತಿದೆ.

ಒಮ್ಮೆ ಶಾಲೆಯು ಕುಸಿದ ಸಂದರ್ಭ ಸ್ಥಳೀಯ ವೆಂಕಪ್ಪಯ್ಯ ರಾವ್‌ ಹೊಗೆಗದ್ದೆ ಅವರ ಮನೆಯಲ್ಲಿ ಶಾಲೆ ನಡೆದಿತ್ತು. ತುಂಬೆ, ಪುದು, ಕೊಡಾಣ್‌ ಹಾಗೂ ಕಳ್ಳಿಗೆ ಗ್ರಾಮಕ್ಕೆ ಇದು ಏಕೈಕ ಶಾಲೆಯಾಗಿತ್ತು. ಈಗ ಇಲ್ಲಿ 5 ಸರಕಾರಿ ಪ್ರಾಥಮಿಕ ಕಾಗೂ 2 ಸರಕಾರಿ ಪ್ರೌಢಶಾಲೆಗಳಿವೆ. ಪ್ರಾರಂಭದಲ್ಲಿ ಇಲ್ಲಿ 1ರಿಂದ 5ನೇ ತರಗತಿಗಳು ಮಾತ್ರ ಇದ್ದು, 1995ರ ಬಳಿಕ ಹಿ.ಪ್ರಾ. ಶಾಲೆಯಾಗಿ ಮೇಲ್ದರ್ಜೆಗೇರಿತ್ತು. ಆರ್‌ಎಸ್‌ಎಸ್‌ನ ಮೋಹನ್‌ಜಿ ಭಾಗವತ್‌, ಸಂತೋಷ್‌ಜೀ ಮೊದಲಾದ ಗಣ್ಯರು, ರಾಜಕೀಯ ನಾಯಕರು ಈ ಶಾಲೆಗೆ ಭೇಟಿ ನೀಡಿದ್ದಾರೆ.

ಹಳೆ ವಿದ್ಯಾರ್ಥಿ ಆರೋಗ್ಯ ಸಚಿವರು
60ರ ದಶಕದಲ್ಲಿ ಸುರತ್ಕಲ್‌ ಶಾಸಕರಾಗಿದ್ದ ಡಾ| ಕೆ. ನಾಗಪ್ಪ ಆಳ್ವ ಅವರು ಇದೇ ಕಳ್ಳಿಗೆ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ರಾಜ್ಯ ಸರಕಾರದ ಆರೋಗ್ಯ ಮಂತ್ರಿ, ಮೈಸೂರು ಪ್ರಾಂತದ ರಾಜ್ಯಸಭಾ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಖ್ಯಾತ ಕೈ ಬರಹ ವಿಶ್ಲೇಷಕಿ ಡಾ| ನೂತನ ರಾವ್‌ ಅವರೂ ಕಳ್ಳಿಗೆಯ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದರು. ಬೆಂಗಳೂರಿನ ಪ್ರಸಿದ್ಧ ಉದ್ಯಮಿ ಮುಂಡಾಜೆಗುತ್ತು ಚಿಕ್ಕರಾಜೇಂದ್ರ ಶೆಟ್ಟಿ, ಪ್ರಗತಿಪರ ಕೃಷಿಕ ನಾರಾಯಣ ರಾವ್‌, ಉದ್ಯಮಿ ವೆಂಕಟ ರಾವ್‌, ಎಂಜಿನಿಯರ್‌ ಸುಬ್ರಹ್ಮಣ್ಯ ರಾವ್‌ ಮೊದಲಾದ ಗಣ್ಯರು ಈ ಶಾಲೆಯಲ್ಲೇ ಕಲಿತ್ತಿದ್ದಾರೆ.

ದತ್ತು ಪಡೆದು ಅಭಿವೃದ್ಧಿ
ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದನ್ನು ಕಂಡ ಸ್ಥಳೀಯ ನವೋದಯ ಮಿತ್ರಕಲಾ ವೃಂದವು ಶಾಲೆಯನ್ನು ದತ್ತು ಪಡೆದು, ದತ್ತು ಸಮಿತಿ ಅಧ್ಯಕ್ಷ ಸುರೇಶ್‌ ಭಂಡಾರಿ ಅರ್ಬಿ ಅಧ್ಯಕ್ಷತೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿತ್ತು. ಉದ್ಯಮಿ ಎಂ. ಚಿಕ್ಕರಾಜೇಂದ್ರ ಶೆಟ್ಟಿ ಅವರ ಕುಟುಂಬ ಶಾಲೆಗೆ 13 ಲಕ್ಷ ರೂ. ವೆಚ್ಚದ ಕೊಡುಗೆ ನೀಡಿದೆ. ಎಸ್‌ಡಿಎಂಸಿ ಅಧ್ಯಕ್ಷ ದಾಮೋದರ ನೆತ್ತರಕೆರೆ ಅಧ್ಯಕ್ಷತೆಯಲ್ಲಿ ಸಮಿತಿಯು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದೆ.

ಪ್ರಸ್ತುತ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 121 ವಿದ್ಯಾರ್ಥಿಗಳು, ಪೂರ್ವ ಪ್ರಾಥಮಿಕದಲ್ಲಿ 45 ವಿದ್ಯಾರ್ಥಿಗಳು ಸಹಿತ ಒಟ್ಟು 165 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಟ್ಟು 5 ಮಂದಿ ಖಾಯಂ ಶಿಕ್ಷಕರು, ಒಬ್ಬರು ಅತಿಥಿ ಶಿಕ್ಷಕಿ ಹಾಗೂ ಮೂರು ಮಂದಿ ಗೌರವ ಶಿಕ್ಷಕಿಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಾಲೆಯು ಹಾಲಿ 2.07 ಎಕ್ರೆ ಜಾಗವಿದ್ದು, ಕಟ್ಟಡಗಳು, ಬಾವಿ ಇದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಕರಾಟೆ, ಸಂಗೀತ ಮೊದಲಾದ ಸೃಜನಾತ್ಮಕ ಚಟುವಟಿಕೆಗಳನ್ನು ಕಲಿಸಲಾಗುತ್ತಿದೆ.

ಶತಮಾನ ಕಂಡ ಈ ಶಾಲೆ ಕಳ್ಳಿಗೆ ಗ್ರಾಮದ ಹೆಮ್ಮೆಯ ವಿದ್ಯಾಲಯವಾಗಿದೆ. ಶಾಲಾಭಿವೃದ್ಧಿ ಸಮಿತಿ, ಶಾಲಾ ದತ್ತು ಸಮಿತಿ ಹಾಗೂ ಜನ ಸಮುದಾಯದವರು ಶಾಲೆಯ ಪ್ರಗತಿಗೆ ಬೆನ್ನೆಲುಬು ಆಗಿ ನಿಂತಿರುವುದು ಬಹಳ ಹೆಮ್ಮೆಯ ವಿಚಾರ.
-ಗುಣರತ್ನಾ, ಮುಖ್ಯ ಶಿಕ್ಷಕಿ

1962-65ರಲ್ಲಿ ತಾನು ಕಲಿಯುವ ವೇಳೆಗೆ ಶಾಲೆಯು ಏಕೋಪಾಧ್ಯಾಯ ಶಾಲೆಯಾಗಿದ್ದು, ಆಗ ಭೋಜ ಮಾಸ್ಟರ್‌ ಶಿಕ್ಷಕರಿದ್ದರು. ಕೇವಲ ಒಂದು ಹಾಲ್‌ನ ರೀತಿಯ ಮುಳಿಹುಲ್ಲಿನ ಕಟ್ಟಡದಲ್ಲಿ ಶಾಲೆ ನಡೆಯುತ್ತಿತ್ತು. ಅದು ಒಮ್ಮೆ ಕುಸಿದು, ಬಳಿಕ ಸ್ಥಳೀಯರೊಬ್ಬರ ಮನೆಯಲ್ಲಿ ಶಾಲೆ ನಡೆದಿತ್ತು. ಶಾಲೆಯು ಬಹಳ ಇತಿಹಾಸವನ್ನು ಹೊಂದಿದ್ದು, ಅನೇಕ ಮಹನೀಯರು ಅಲ್ಲಿ ಕಲಿತಿದ್ದಾರೆ.
-ಮುಂಡಾಜೆಗುತ್ತು ಚಿಕ್ಕರಾಜೇಂದ್ರ ಶೆಟ್ಟಿ, ಉದ್ಯಮಿ, ಬೆಂಗಳೂರು, ಹಳೆ ವಿದ್ಯಾರ್ಥಿ

- ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.