ಅಡ್ಕಾರು ಮಾವಿನಕಟ್ಟೆ ಬಳಿ ಭೀಕರ ಅಪಘಾತ: ಇಬ್ಬರು ಸಾವು
Team Udayavani, Oct 11, 2019, 6:49 PM IST
ಸುಳ್ಯ : ಕಳೆದ ವಾರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಸ್ಥಳದಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಇನೋವಾ ವಾಹನ ಪರಸ್ಪರ ಢಿಕ್ಕಿ ಹೊಡೆದುಕೊಂಡು ಇನೋವಾದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರು ಸಮೀಪದ ಮಾವಿನಕಟ್ಟೆ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಕೆದಿಲ ಕಂಪ ನಿವಾಸಿ ಅಬ್ದುಲ್ ಖಾದರ್ ರವರ ಪುತ್ರ ಮಜೀದ್ ( 32 ) ಮತ್ತು ಪುತ್ತೂರು ತಾಲೂಕು ಕಬಕ ನಿವಾಸಿ ಉಮ್ಮರ್ ಅವರ ಪುತ್ರ ಮಹಮ್ಮದ್ ಸಾದಿಕ್ ( 31 ) ಸ್ಥಳದಲ್ಲೇ ಮೃತಪಟ್ಟರು. ಮೃತದೇಹಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ನಲ್ಲಿ ತರಲಾಗಿದೆ. ಇನೋವಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸುಳ್ಯದ ವಿದ್ಯಾಸಾಗರ ರಾವ್ ಅವರು ತನ್ನ ಕಾರಿನಲ್ಲಿ ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಇನೋವಾ ಕಾರು (KA 22 N.7974) ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿತ್ತು. ಬಸ್ (KL 15 A 1747) ಕೇರಳ ಬಸ್ ಸುಳ್ಯದ ಕಡೆಗೆ ಬರುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು