ಅಜ್ಜಾವರ: ಅಶಕ್ತ ಕುಟುಂಬಕ್ಕೆ ಇಂದು ಮನೆ ಹಸ್ತಾಂತರ

ತಹಶೀಲ್ದಾರ್‌ ಕುಂಞಿ ಅಹ್ಮದ್‌ ಸಮಾಜಮುಖೀ ಕಾರ್ಯಕ್ಕೆ ದಾನಿಗಳ ಬೆಂಬಲ

Team Udayavani, Sep 21, 2019, 4:00 AM IST

u-43

ಅಜ್ಜಾವರ: ಸುಳ್ಯ ತಹಶೀಲ್ದಾರ್‌ ಕುಂಞಿ ಅಹ್ಮದ್‌ ನೇತೃತ್ವದಲ್ಲಿ ಅಶಕ್ತ ಕುಟುಂಬಕ್ಕೆ ದಾನಿಗಳು ಹಾಗೂ ಸಂಘಟನೆಗಳ ನೆರವಿನಿಂದ ಅಜ್ಜಾವರದಲ್ಲಿ ನಿರ್ಮಿಸಲಾದ ಮನೆಯನ್ನು ಸೆ. 21ರಂದು ಹಸ್ತಾಂತರಿಸಲಾಗುವುದು.

ಅಜ್ಜಾವರ ಗ್ರಾಮದ ಅಡ³ಂಗಾಯ ಕಲ್ತಡ್ಕ ಪರಿಸರದಲ್ಲಿ ಮಹಮ್ಮದ್‌ ಕುಂಞಿ ಕುಟುಂಬ ಸಣ್ಣ ಗುಡಿಸಲಿಗೆ ಟಾರ್ಪಲ್‌ ಹಾಕಿ ವಾಸವಾಗಿತ್ತು. ಏಳು ಸದಸ್ಯರಿರುವ ಈ ಕುಟುಂಬಕ್ಕೆ 20 ವರ್ಷಗಳಿಂದ ಈ ಜೋಪಡಿಯೇ ಆಧಾರವಾಗಿತ್ತು. ಈ ಸಲದ ಭಾರೀ ಮಳೆಗೆ ಗುಡಿಸಲು ಸೋರುತ್ತಿತ್ತು. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ದಿಕ್ಕೇ ತೋಚಂದಾಗಿತ್ತು.

ಅಧಾರವಾಯಿತು “ಬೆಳಕು’
ಅಶಕ್ತ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಮಹಮ್ಮದ್‌ ಕುಂಞಿ ಕುಟುಂಬಕ್ಕೆ ಆಸರೆಯಾಗಿದೆ. ಕಳೆದ ತಿಂಗಳು ಅಡ³ಂಗಾಯ ನಿವಾಸಿ ರಾಮಣ್ಣ ನಾಯ್ಕ ಕುಟುಂಬಕ್ಕೆ ಬೆಳಕು ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗಿತ್ತು. ಮಹಮ್ಮದ್‌ ಕುಂಞಿ ಅವರ ಪುತ್ರ ಅಪಘಾತವೊಂದರ ಬಳಿಕ ಅಶಕ್ತರಾಗಿದ್ದಾರೆ. ಈ ಕುಟುಂಬಕ್ಕೆ ಯಾವುದೇ ದಾಖಲೆಗಳಿಲ್ಲದ ಕಾರಣ ಸರಕಾರದ ಸವಲತ್ತು ಸಿಕ್ಕಿರಲಿಲ್ಲ. ಮನೆ ನಂಬರ್‌ ಇಲ್ಲದೆ ಪಡಿತರ ಚೀಟಿ, ಆಧಾರ್‌ ಮೊದಲಾದವೂ ಮರೀಚಿಕೆಯಾಗಿದ್ದವು. ವಸತಿ ಯೋಜನೆ ಸೌಲಭ್ಯಕ್ಕೂ ಇದೇ ಅಡ್ಡಿಯಾಗಿತ್ತು. ಈಗ ಆ ಕುಟುಂಬವೂ ಬೆಳಕು ಕಾಣುವಂತಾಗಿದೆ.

ದಾನಿ, ಸಂಘಟನೆಗಳ ನೆರವು
ಅಜ್ಜಾವರ ಗ್ರಾಮಸ್ಥರು ಅಡ³ಂಗಾಯದ ಈ ಕುಟುಂಬದ ಕುರಿತು ತಹಶೀಲ್ದಾರ್‌ಗೆ
ಮಾಹಿತಿ ನೀಡಿದ್ದರು. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಲೋಕೇಶ್‌ ಗುಡ್ಡಮನೆ ಹಾಗೂ ವಿನೋದ್‌ ಲಸ್ರಾದೊ ನೆರವಿನಿಂದ ಶೀಘ್ರವಾಗಿ ಮನೆ ನಿರ್ಮಿಸಲಾಗಿದೆ. ಸುಳ್ಯದ ಅಂಗಡಿ ಮಾಲಕರು ಕಟ್ಟಡ ಸಾಮಗ್ರಿ ಒದಗಿಸಿದ್ದಾರೆ.

ದಾನಿಗಳು ಸಿಮೆಂಟ್‌, ಕಲ್ಲು, ಇಟ್ಟಿಗೆ, ಶೀಟ್‌, ಪೈಂಟ್‌ ಇತ್ಯಾದಿ ನೀಡಿದ್ದಾರೆ. ಉಬರಡ್ಕ ಯುವಕ ಮಂಡಲ ನೆರವಿನ ಹಸ್ತ ಚಾಚಿದೆ. ಯುವ ಬ್ರಿಗೇಡ್‌, ಎಸ್ಕೆಎಸ್ಸೆಸ್ಸೆಫ್ ವಿಖಾಯ, ಎಸ್ಸೆಸ್ಸೆಫ್ ಸಂಘಟನೆಗಳ ಶ್ರಮದಾನದಿಂದ ಕೇವಲ 18 ದಿನಗಳಲ್ಲಿ 2.25 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣವಾಗಿದೆ.

ಬೆಳಕು-3 ಬೆಳ್ಳಾರೆಯಲ್ಲಿ
ಬೆಳಕು ಯೋಜನೆಯ ಮೂರನೆ ಮನೆಯನ್ನು ಬೆಳ್ಳಾರೆಯ ಅಶಕ್ತ ಕುಟುಂಬವೊಂದಕ್ಕೆ ನಿರ್ಮಿಸಲಾಗುವುದು. ಮನೆಗೆ ಬೇಕಾಗಿರುವ ಕಟ್ಟಡ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶನಿವಾರವೇ ಕೆಲಸ ಆರಂಭವಾಗಲಿದೆ ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ.

ಇಂದು ಮನೆ ಹಸ್ತಾಂತರ
ಕಲ್ತಡ್ಕದಲ್ಲಿ ನಿರ್ಮಾಣವಾಗಿರುವ “ಬೆಳಕು’ ಮನೆಯ ಹಸ್ತಾಂತರ ಸೆ. 21ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಶಾಸಕ ಎಸ್‌. ಅಂಗಾರ ಅವರು ಮನೆಯನ್ನು ಮಹಮ್ಮದ್‌ ಕುಂಞಿ ಕುಟುಂಬಕ್ಕೆ ಹಸ್ತಾಂತರಿಸಲಿದ್ದಾರೆ. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್‌ ಕುಂಞಿ ಅಹಮ್ಮದ್‌ ಭಾಗವಹಿಸುವರು.

ಸಹಕಾರ ಮಾದರಿ
ಮಹಮ್ಮದ್‌ ಅವರ ಕುಟುಂಬವು ಟಾರ್ಪಲ್‌ ಹಾಕಿ ಸಣ್ಣ ಗುಡಿಸಲಿನಲ್ಲಿ ವಾಸವಾಗಿತ್ತು. ಅದು ಹಾನಿಯಾಗಿ ಯಾವುದೇ ಸವಲತ್ತುಗಳಿಲ್ಲದೆ ಮನೆ ನಿರ್ಮಿಸಲು ಅಶಕ್ತವಾಗಿದ್ದ ಬಗ್ಗೆ ನನ್ನ ಗಮನಕ್ಕೆ ಬಂದಾಗ ದಾನಿಗಳನ್ನು ಸಂಪರ್ಕಿಸಿದೆವು. ಇಲ್ಲಿನ ಜನರ ಸಹಕಾರ ಶ್ಲಾಘನೀಯ. ಶೀಘ್ರವಾಗಿ ಬೇಕಾದ ಎಲ್ಲ ಸಾಮಗ್ರಿಗಳನ್ನು ಕೊಟ್ಟು ಸಹಕರಿಸಿದ್ದಾರೆ.
– ಕುಂಞಿ ಅಹ್ಮದ್‌, ತಹಶೀಲ್ದಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.