ಪ್ರಾ. ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ನೇಮಿಸಿ

ಪಾಣಾಜೆ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಗ್ರಹ

Team Udayavani, Aug 20, 2019, 5:00 AM IST

w-35

ಈಶ್ವರಮಂಗಲ: ಪಾಣಾಜೆ ಗ್ರಾ.ಪಂ. ಸಾಮಾನ್ಯ ಸಭೆ ಪಂಚಾಯತ್‌ ಅಧ್ಯಕ್ಷ ನಾರಾಯಣ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಂದು ತಿಂಗಳಿನಿಂದ ವೈದ್ಯಾಧಿಕಾರಿಗಳು ಇಲ್ಲ. ಪ್ರತಿನಿತ್ಯ ನೂರಾರು ರೋಗಿಗಳು ಆಸ್ಪತ್ರೆಗೆ ಬಂದು ಹೋಗುತ್ತಿದ್ದಾರೆ. ಇದರಿಂದ ತೊಂದರೆಯಾಗುತ್ತಿದೆ. ಗುತ್ತಿಗೆ ಆಧಾರದಲ್ಲಿ ಆಯ್ಕೆಯಾದವರೂ ಉನ್ನತ ವ್ಯಾಸಂಗಕ್ಕೆ ಹೋಗಿದ್ದಾರೆ. ಕೂಡಲೇ ಕೇಂದ್ರಕ್ಕೆ ವೈದ್ಯಾಧಿಕಾರಿಗಳನ್ನು ನೇಮಿಸುವಂತೆ ಸದಸ್ಯರು ಆಗ್ರಹಿಸಿದರು.

ಪಂಚಾಯತ್‌ ಅಧ್ಯಕ್ಷ ನಾರಾಯಣ ಪೂಜಾರಿ ಮಾತನಾಡಿ, ವೈದ್ಯಾಧಿಕಾರಿಗಳು, ಸಿಬಂದಿ ಯಾವುದೇ ಮಾಹಿತಿ ನೀಡಿಲ್ಲ. ಗ್ರಾಮಸಭೆಯಲ್ಲಿಯೂ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಖಾಯಂ ವೈದ್ಯಾಧಿಕಾರಿ ನೇಮಕ ಮಾಡುವಂತೆ ತಾಲೂಕು ಆರೋಗ್ಯಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ವೈದ್ಯಾಧಿಕಾರಿಗಳನ್ನು ನೇಮಕ ಮಾಡದಿದ್ದರೆ ಪಂಚಾಯತ್‌ ವತಿಯಿಂದ ಪ್ರತಿಭಟನೆಗೆ ಸಿದ್ಧತೆ ನಡೆಸುವುದಾಗಿ ಸದಸ್ಯರು ಎಚ್ಚರಿಸಿದರು. ಶೀಘ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳನ್ನು ನೇಮಕ ಮಾಡುವಂತೆ ಸಂಬಂಧಪಟ್ಟವರನ್ನು ಕೇಳಿಕೊಳ್ಳುವ ನಿರ್ಣಯ ಕೈಗೊಳ್ಳಲಾಯಿತು.

ವಿಶೇಷ ಪ್ಯಾಕೇಜ್‌ ನೀಡಲಿ
ಮಳೆಗಾಲದಲ್ಲಿ ಅತಿವೃಷ್ಟಿ ಮತ್ತು ಬೇಸಗೆಯಲ್ಲಿ ಅನಾವೃಷ್ಟಿಯಿಂದ ರೈತರ ಬೆಳೆ ನಾಶವಾಗಿದೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಪ್ರವಾಹ ಪರಿಸ್ಥಿತಿ ಇಲ್ಲದಿದ್ದರೂ ಕೃಷಿ ನಾಶವಾಗಿದೆ. ಪರಿಹಾರ ನೀಡಬೇಕು. ರಾಜ್ಯ ಸರಕಾರ ಪಾಣಾಜೆ ಗ್ರಾಮಕ್ಕೆ ವಿಶೇಷ ಪ್ಯಾಕೇಜ್‌ ನೀಡುವಂತೆ ಸದಸ್ಯರು ಆಗ್ರಹಿಸಿದರು. ಕೊಳವೆಬಾವಿ ನಿರ್ಬಂಧ ತೆಗೆದು ಹಾಕಬೇಕು ಎಂದು ಸದಸ್ಯ ಶಾಹುಲ್ ಹಮೀದ್‌ ಹೇಳಿದರು. ಈ ಬಗ್ಗೆ ಚರ್ಚೆಯಾಗಿ ಸರಕಾರ ವಿಶೇಷ ಪ್ಯಾಕೇಜ್‌ ನೀಡುವಂತೆ ನಿರ್ಣಯಿಸಲಾಯಿತು.

ತಳ್ಳುಗಾಡಿ: ಕ್ರಮ ಇಲಾಖೆಗೆ
ಲೋಕೋಪಯೋಗಿ ರಸ್ತೆ ಅಂಚಿನಲ್ಲಿರುವ ತಳ್ಳುಗಾಡಿಗಳ ಕುರಿತು ಇಲಾಖೆಯೇ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಜಗನ್ಮೋಹನ ರೈ, ಶಾಹುಲ್ ಹಮೀದ್‌, ಮೈಮುನತ್ತುಲ್ ಮೆಹ್ರಾ, ರತ್ನ ಕುಮಾರಿ, ಯಶೋದಾ ವೈ., ಮಮತಾ, ಲೆಕ್ಕ ಸಹಾಯಕ ಧನುಷ್‌ ಉಪಸ್ಥಿತರಿದ್ದರು.

ಪಿಡಿಒ ಚಂದ್ರಮತಿ ಸ್ವಾಗತಿಸಿ, ವಂದಿಸಿದರು. ಸಿಬಂದಿ ವಿಶ್ವನಾಥ ನಾಯ್ಕ, ಅರುಣ್‌ ಕುಮಾರ್‌ ಎ., ರೂಪಶ್ರೀ, ಸೌಮ್ಯಲತಾ ಸಹಕರಿಸಿದರು.

ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್ ಟವರ್‌ನ ಉಪಯೋಗವಿಲ್ಲದಂತೆ ಆಗಿದೆ. ಆವಶ್ಯಕ ಇರುವ ಸಂದರ್ಭದಲ್ಲಿ ಉಪಯೋಗಕ್ಕೆ ಬರುವುದಿಲ್ಲ ಎಂದು ಸದಸ್ಯರು ಹೇಳಿದರು. ಮೇಲಾಧಿಕಾರಿಗಳು ಸ್ಪಂದಿಸದಿದ್ದರೆ ಗ್ರಾಹಕರನ್ನು ಸೇರಿಸಿ ತೀವ್ರ ಹೋರಾಟ ನಡೆಸುವುದಾಗಿ ಸದಸ್ಯರು ಹೇಳಿದರು.

ಸದಸ್ಯ ಶಾಹುಲ್ ಹಮೀದ್‌ ಮಾತನಾಡಿ, ಕುಡಿಯುವ ನೀರಿನ ಬಳಕೆದಾರರು ಹಣ ಪಾವತಿಸಿದ್ದಾರೆಯೇ? ಎಂದು ಪ್ರಶ್ನಿಸಿದರು. ಹಲವು ವರ್ಷದಿಂದ ಕುಡಿಯುವ ನೀರಿನ ಬಿಲ್ಲು 3 ಲಕ್ಷ ರೂ. ಬಾಕಿ ಇದೆ ಎಂದು ಪಿಡಿಒ ಹೇಳಿದರು. ಬಿಲ್ಲು ಕಟ್ಟದ ಬಳಕೆದಾರರಿಗೆ ನೋಟಿಸ್‌ ಜಾರಿ ಮಾಡಿ ಬಾಕಿ ಇರುವ ಹಣವನ್ನು 7 ದಿನದಲ್ಲಿ ಪಾವತಿಸುವುದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವುದಾಗಿ ತೀರ್ಮಾನಿಸಲಾಯಿತು.

ಬಿಎಸ್ಸೆನ್ನೆಲ್ ವಿರುದ್ಧ ಹೋರಾಟ
ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್ ಟವರ್‌ನ ಉಪಯೋಗವಿಲ್ಲದಂತೆ ಆಗಿದೆ. ಆವಶ್ಯಕ ಇರುವ ಸಂದರ್ಭದಲ್ಲಿ ಉಪಯೋಗಕ್ಕೆ ಬರುವುದಿಲ್ಲ ಎಂದು ಸದಸ್ಯರು ಹೇಳಿದರು. ಮೇಲಾಧಿಕಾರಿಗಳು ಸ್ಪಂದಿಸದಿದ್ದರೆ ಗ್ರಾಹಕರನ್ನು ಸೇರಿಸಿ ತೀವ್ರ ಹೋರಾಟ ನಡೆಸುವುದಾಗಿ ಸದಸ್ಯರು ಹೇಳಿದರು.

ಬಿಲ್ ಕಟ್ಟದ ಗ್ರಾಹಕರಿಗೆ ನೋಟಿಸ್‌
ಸದಸ್ಯ ಶಾಹುಲ್ ಹಮೀದ್‌ ಮಾತನಾಡಿ, ಕುಡಿಯುವ ನೀರಿನ ಬಳಕೆದಾರರು ಹಣ ಪಾವತಿಸಿದ್ದಾರೆಯೇ? ಎಂದು ಪ್ರಶ್ನಿಸಿದರು. ಹಲವು ವರ್ಷದಿಂದ ಕುಡಿಯುವ ನೀರಿನ ಬಿಲ್ಲು 3 ಲಕ್ಷ ರೂ. ಬಾಕಿ ಇದೆ ಎಂದು ಪಿಡಿಒ ಹೇಳಿದರು. ಬಿಲ್ಲು ಕಟ್ಟದ ಬಳಕೆದಾರರಿಗೆ ನೋಟಿಸ್‌ ಜಾರಿ ಮಾಡಿ ಬಾಕಿ ಇರುವ ಹಣವನ್ನು 7 ದಿನದಲ್ಲಿ ಪಾವತಿಸುವುದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವುದಾಗಿ ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.