“ಕಲೆ, ಕಲಾವಿದರ ಉಳಿಸುವ ಶಿಕ್ಷಣ ಶ್ಲಾಘನೀಯ’

 ಕುಸುಮಸಾರಂಗ ಘಟಕದ ರಂಗ ಶಿಕ್ಷಣ ಶಿಬಿರ ಉದ್ಘಾಟನೆ

Team Udayavani, May 20, 2019, 6:00 AM IST

b-16

ಸುಬ್ರಹ್ಮಣ್ಯ: ಆಧುನಿಕತೆಯ ಪ್ರಭಾವದ ನಡುವೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಸಾಂಸ್ಕೃತಿಕ ಪ್ರಜ್ಞೆ ಉಳಿದಿದೆ. ಕಲೆ ಮತ್ತು ಕಲಾವಿದರ‌ನ್ನು ಉಳಿಸಿಕೊಳ್ಳುವ ರಂಗಕಲೆಯ ತರಬೇತಿಗಳು ಕಾಲೇಜಿನಲ್ಲಿ ನಡೆಯುತ್ತಿರುವುದು ಶ್ಲಾಘನೀಯ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಸುಬ್ರಹ್ಮಣ್ಯ ಕೆಎಸ್‌ಎಸ್‌ ಕಾಲೇಜಿನ ಸಭಾಂಗಣದಲ್ಲಿ ರವಿವಾರ ಉದ್ಘಾಟನೆ ಗೊಂಡ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಂಗ ಘಟಕ ಕುಸುಮ ಸಾರಂಗದ 27ನೇ ವರ್ಷದ ರಂಗ ಶಿಕ್ಷಣ ಶಿಬಿರ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಲೇಜಿನ ಕುಸುಮಸಾರಂಗ ರಂಗ ಘಟಕವೂ ಏಳು-ಬೀಳುಗಳ ಮಧ್ಯೆಯೂ 27 ವರ್ಷಗಳ ಸುದೀರ್ಘ‌ ಕಾಲ ಚಟುವಟಿಕೆ ನಡೆಸಿ ವಿದ್ಯಾರ್ಥಿಗಳಿಗೆ ವೇದಿಕೆ ಒದಗಿಸುತ್ತಿವೆ. ಕಲೆ ಉಳಿಸುವ ಇಂತಹ ಕಾರ್ಯಗಳಿಗೆ ದೇವಸ್ಥಾನದ ವತಿ ಯಿಂದ ಪೂರ್ಣ ಪ್ರೋತ್ಸಾಹ, ಸಹಕಾರ ನೀಡಲಾಗುವುದು ಎಂದರು.

ಮಂಗಳೂರು ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೊ| ವೇದವರಂಗ ಶಿಬಿರವನ್ನು ಉದ್ಘಾಟಿಸಿದರು. ಶಿಬಿರದ ನಿರ್ದೇಶಕಿ ದಾಕ್ಷಾಯಿಣಿ ಭಟ್‌, ಕುಸುಮ ಸಾರಂಗದ ಪೂರ್ವ ನಿರ್ದೇಶಕ ತುಕಾರಾಮ ಯೇನೆಕಲ್ಲು, ರಂಗಕರ್ಮಿ ಜಯಪ್ರಕಾಶ ಬಿಳಿನೆಲೆ, ಪೂರ್ವ ವಿದ್ಯಾಥಿಗಳಾದ ರಾಮಚಂದ್ರ, ಮಮತಾ ಎ. ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರೊ| ಉದಯ ಕುಮಾರ್‌ ಕೆ. ಪ್ರಸ್ತಾವನೆಗೈದು ಸ್ವಾಗತಿಸಿ ದರು. ಕುಸುಮ ಸಾರಂಗ ರಂಗ ಘಟಕದ ಸಂಚಾಲಕ ಡಾ| ಗೋವಿಂದ ಎನ್‌.ಎಸ್‌. ರಂಗ ಶಿಕ್ಷಣದ ನಡೆದು ಬಂದ ಹಾದಿ ಕುರಿತು ಬೆಳಕು ಚೆಲ್ಲಿದರು. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ| ಸುಬ್ಬಪ್ಪ ಕೈಕಂಬ, ಪೂರ್ವ ವಿದ್ಯಾಥಿಗಳು, ನಾಟಕ ತರಬೇತಿ ಪಡೆಯಲಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಉಪನ್ಯಾಸಕ ವಿನ್ಯಾಸ್‌ ಎಚ್‌. ವಂದಿಸಿದರು. ವರ್ಷಾ ಪ್ರಾರ್ಥಿಸಿ, ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

ಪುಣ್ಯದ ಕೆಲಸ
ರಂಗಭೂಮಿಯಲ್ಲಿ ವರ್ತಮಾನಕ್ಕೆ ತಕ್ಕಂತೆ ಕಲೆಯನ್ನು ಕರಗತ ಮಾಡಿಕೊಳ್ಳುವುದು ಆವಶ್ಯಕ. ಇದೇ ಸಂಸ್ಥೆಯಲ್ಲಿ ಪೂರ್ವ ವಿದ್ಯಾರ್ಥಿಯಾಗಿದ್ದು, ರಂಗ ಕಲೆಯಲ್ಲಿ ತೊಡಗಿಸಿಕೊಂಡು ಇಂದು ಹೊರಗೆ ಪ್ರಾಧ್ಯಾಪಕನಾಗಿದ್ದರೂ ಕಲಿತ ಕಾಲೇಜಿನಲ್ಲಿ ಗುರು ಹಿರಿಯರ ಸಮ್ಮುಖ ರಂಗ ಶಿಕ್ಷಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಸಂತೋಷದಾಯಕ. ಕಲಿತ ಸಂಸ್ಥೆಯಲ್ಲಿ ಮತ್ತೆ ಓಡಾಡುವ, ಭಾಗವಹಿಸುವ ಅವಕಾಶ ಸಿಗುವುದು ಪುಣ್ಯದ ಕೆಲಸ ಎಂದು ಶಿಬಿರ ಉದ್ಘಾಟಿಸಿದ ಪ್ರೊ| ವೇದವರಂಗ ಹೇಳಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.