ಬಿ.ಸಿ. ರೋಡ್‌, ಬಂಟ್ವಾಳ ಪೇಟೆ ರಸ್ತೆಗಳಲ್ಲಿ ಹೊಂಡ

 ಸುಗಮ ವಾಹನ ಸಂಚಾರಕ್ಕೆ ಸಮಸ್ಯೆ ; ಶೀಘ್ರ ದುರಸ್ತಿಗೆ ಆಗ್ರಹ

Team Udayavani, Jan 23, 2020, 11:29 PM IST

kaa-38

ಬಂಟ್ವಾಳ : ಗ್ರಾಮೀಣ ಭಾಗ ಗಳಲ್ಲಿ ಸಾಮಾನ್ಯವಾಗಿ ರಸ್ತೆಗಳಲ್ಲಿ ಹೊಂಡ ಬಿದ್ದರೆ ಅದರ ದುರಸ್ತಿಗೆ ಕ್ರಮ ಕೈಗೊಳ್ಳುವುದು ಕಡಿಮೆ. ಆದರೆ ಪ್ರಸ್ತುತ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ, ಬಿ.ಸಿ. ರೋಡ್‌ ಪೇಟೆಯ ರಸ್ತೆಗಳಲ್ಲಿ ಹೊಂಡ ಸೃಷ್ಟಿಯಾಗಿದ್ದರೂ, ಕನಿಷ್ಠ ತೇಪೆ ಕಾರ್ಯವೂ ಆಗಿಲ್ಲ ಎಂಬ ಆರೋಪಗಳಿವೆ.

ಬಂಟ್ವಾಳ ನಗರದಲ್ಲಿ ಸಾಗುವ ಮುಖ್ಯ ರಸ್ತೆಯ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬಿ.ಸಿ. ರೋಡ್‌-ಕೈಕುಂಜೆ ರಸ್ತೆಯ ಬಿ.ಸಿ. ರೋಡ್‌ ಜಂಕ್ಷನ್‌ನಲ್ಲೇ ಸಾಕಷ್ಟು ಹೊಂಡಗಳು ಸೃಷ್ಟಿ ಯಾಗಿದ್ದು, ವಾಹನಗಳು ಎದುಬಿದ್ದು ಸಾಗುತ್ತಿವೆ. ಇದರ ಜತೆಗೆ ಇತರ ಒಳರಸ್ತೆಗಳ ಹೊಂಡಗಳಿಗೂ ಮುಕ್ತಿ ನೀಡಬೇಕಿದೆ.

ಬಿ.ಸಿ. ರೋಡ್‌ ಜಂಕ್ಷನ್‌ನಿಂದ ಮಿನಿ ವಿಧಾನಸೌಧದವರೆಗೂ ಸಾಕಷ್ಟು ಹೊಂಡ ಗಳಿವೆ. ತಾ.ಪಂ. ಸಂಪರ್ಕ ರಸ್ತೆಯಲ್ಲೂ ಹೊಂಡ ಸೃಷ್ಟಿಯಾಗಿದೆ. ಶಾಶ್ವತ ಪರಿಹಾರಕ್ಕೆ ಯೋಜನೆ ರೂಪು ಗೊಂಡಿದ್ದರೂ ತಾತ್ಕಾಲಿಕ ಪರಿ ಹಾರ ನೀಡುವ ನಿಟ್ಟಿನಲ್ಲಿ ಕನಿಷ್ಠ ತೇಪೆ ಕಾರ್ಯವನ್ನಾದರೂ ಮಾಡಬೇಕಿದೆ ಎಂದು ಸಾರ್ವ ಜನಿಕರು ಆಗ್ರಹಿಸುತ್ತಿದ್ದಾರೆ.

ಬಂಟ್ವಾಳ ಬೈಪಾಸ್‌ ಮೂಲಕ ಸಾಗುವ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿ ನಡೆ ಯುತ್ತಿರುವುದರಿಂದ, ಹೆದ್ದಾರಿಯಲ್ಲಿ ಸಾಗ ಬೇಕಿರುವ ಹೆಚ್ಚಿನ ಸಂಖ್ಯೆಯ ವಾಹನಗಳು ಬಂಟ್ವಾಳ ಪೇಟೆ ಮೂಲಕವೇ ಸಾಗುತ್ತಿರುವುದರಿಂದ ಹೊಂಡ ಮುಚ್ಚಲು ಶೀಘ್ರ ಕ್ರಮ ಕೈಗೊಳ್ಳಬೇಕಿದೆ.

ಮಳೆಗಾಲದ ದುರಸ್ತಿಯಾಗಿಲ್ಲ !
ಕಳೆದ ಮಳೆಗಾಲದಲ್ಲೇ ಈ ಹೊಂಡಗಳು ಕಂಡುಬಂದಿದ್ದು, ಅದರಲ್ಲಿ ನೀರು ನಿಂತ ಪರಿಣಾಮ ವಾಹನಗಳು ಸಾಗುವ ವೇಳೆ ನೀರು ಎರಚಿ ಪಾದಾಚಾರಿಗಳು ಒದ್ದೆಯಾದ ಘಟನೆಯೂ ಸಂಭವಿಸಿತ್ತು. ನೀರು ನಿಂತು ಹೊಂಡಗಳಿರುವುದು ತಿಳಿಯದೆ ವಾಹನ ಚಾಲಕರು, ಸವಾರ ರಿಗೂ ತೊಂದರೆಯುಂಟಾಗಿತ್ತು.

ಸಾಮಾನ್ಯವಾಗಿ ಮಳೆ ಕಾರಣದಿಂದ ಹಾನಿಯಾದ ರಸ್ತೆಗಳಿಗೆ ತೇಪೆ ಕಾರ್ಯ ನಡೆಯುತ್ತದೆಯಾದರೂ ಇಲ್ಲಿ ತೇಪೆ ಕಾರ್ಯವೂ ನಡೆದಿಲ್ಲ. ಹೆದ್ದಾರಿ ಸಮಸ್ಯೆ ಗಳಿಗೆ ಮುಕ್ತಿ ಸಿಕ್ಕರೂ ನಗರ ಒಳಭಾಗದ ರಸ್ತೆಗಳಲ್ಲಿ ತೊಂದರೆ ಸಾಕಷ್ಟಿದೆ. ಈ ಕುರಿತು ಪುರಸಭೆ ಗಮನಹರಿಸಬೇಕಿದೆ ಎಂದು ಜನತೆ ಅಭಿಪ್ರಾಯಿಸುತ್ತಿದ್ದಾರೆ.

ರಸ್ತೆಯಲ್ಲೇ ಮ್ಯಾನ್‌ಹೋಲ್‌
ಬಿ.ಸಿ. ರೋಡ್‌ನಿಂದ ಬಂಟ್ವಾಳ ಪೇಟೆಗೆ ಸಾಗುವ ರಸ್ತೆಯಲ್ಲಿ ಮೇಲ್ಭಾಗಕ್ಕೆ ಕಾಣುವ ರೀತಿಯಲ್ಲಿ ರಸ್ತೆಯಲ್ಲೇ ಮ್ಯಾನ್‌ಹೋಲ್‌ಗ‌ಳಿದ್ದು, ಇದೂ ವಾಹನಗಳ ಸಂಚಾರಕ್ಕೆ ತೊಂದರೆ ನೀಡುತ್ತಿದೆ. ರಸ್ತೆಯ ಹೊಂಡಗಳು, ಮ್ಯಾನ್‌ಹೋಲ್‌ಗ‌ಳು ದೊಡ್ಡ ವಾಹನಗಳ ಸಂಚಾರಕ್ಕೆೆR ತೊಂದರೆ ನೀಡದೇ ಇದ್ದರೂ ಸಣ್ಣ ವಾಹನಗಳಿಗೆ ಸಾಕಷ್ಟು ತೊಂದರೆ ನೀಡುತ್ತಿವೆ. ಪೈಪ್‌ ಕಾಮಗಾರಿ ವೇಳೆ ರಸ್ತೆಯನ್ನು ಅಗೆದು ಹಾಗೇ ಬಿಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅನುದಾನ ಬಂದರೆ ದುರಸ್ತಿ
ಅನುದಾನ ಬಂದ ತತ್‌ಕ್ಷಣ ದುರಸ್ತಿಗೆ ಕ್ರಮ ಕೈಗೊಳ್ಳುತ್ತೇವೆ. ಪ್ರಸ್ತುತ ಯಾವುದೇ ಅನುದಾನಗಳು ಬಂದಿಲ್ಲ. ಶಾಸಕರ ನಗರ ಸುಂದರೀಕರಣ ಯೋಜನೆಯಲ್ಲಿ ಬಿ.ಸಿ. ರೋಡ್‌ನ‌ ಕೈಕುಂಜೆ ರಸ್ತೆಯ ಪ್ರಾರಂಭದ ಭಾಗಕ್ಕೆ 2 ಕೋ. ರೂ.ಗಳ ಕ್ರಿಯಾಯೋಜನೆ ಆಗಿದೆ ಎನ್ನಲಾಗುತ್ತಿದೆ. ಅನುದಾನ ಬಂದರೆ ರಸ್ತೆಗಳ ಹೊಂಡಗಳಿಗೆ ತೇಪೆ ಹಾಕುವ ಕಾರ್ಯ ಮಾಡಲಾಗುವುದು.
 - ಲೀನಾ ಬ್ರಿಟ್ಟೋ, ಮುಖ್ಯಾಧಿಕಾರಿ, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.