ಸದಸ್ಯರ ಬೆರಳಚ್ಚು ಸಂಗ್ರಹ ಪೂರ್ಣ

  ಬಂಟ್ವಾಳ ತಾಲೂಕು: ಪಡಿತರ ಚೀಟಿ ಇ-ಕೆವೈಸಿ ಪ್ರಕ್ರಿಯೆ

Team Udayavani, Jan 9, 2020, 4:21 AM IST

8

ಬಂಟ್ವಾಳ: ಸರಕಾರವು ಪಡಿತರ ಚೀಟಿ ಹೊಂದಿರುವ ಸದಸ್ಯರ ಇ-ಕೆವೈಸಿ (ಬೆರಳಚ್ಚು)ಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಸಂಗ್ರಹಿಸುವ ಕಾರ್ಯ ಪ್ರಾರಂಭಿಸಿದ್ದು, ಬಂಟ್ವಾಳದಲ್ಲಿ ಮೂರು ವಿಧಗಳ ಒಟ್ಟು 83,869 ಪಡಿತರ ಚೀಟಿಗಳಲ್ಲಿ ಈತನಕ ಒಟ್ಟು 1,28,063 ಸದಸ್ಯರು ಬೆರಳಚ್ಚು ನೀಡಿದ್ದಾರೆ.

ತಾಲೂಕಿನಲ್ಲಿ ಒಟ್ಟು 100 ನ್ಯಾಯಬೆಲೆ ಅಂಗಡಿಗಳಿದ್ದು, ಪ್ರಸ್ತುತ ಮೂರು ದಿನಗಳಿಂದ ಸರ್ವರ್‌ ಸಮಸ್ಯೆಯಿಂದ ಬೆರಳಚ್ಚು ಸಂಗ್ರಹ ಪ್ರಕ್ರಿಯೆ ನಡೆದಿಲ್ಲ. ಕಳೆದ ಅಕ್ಟೋಬರ್‌ ತಿಂಗಳಲ್ಲಿ ಈ ಪ್ರಕ್ರಿಯೆ ಆರಂಭಗೊಳಿಸಲಾಗಿದ್ದು, ಆದರೆ ಸರ್ವರ್‌ ಸಮಸ್ಯೆ ಕಾಡುತ್ತಿರುವುದರಿಂದ ಬೆರಳಚ್ಚು ಸಂಗ್ರಹ ಪ್ರಕ್ರಿಯೆ ವೇಗವಾಗಿ ನಡೆದಿಲ್ಲ. ಜತೆಗೆ ಜನರೂ ಸೂಕ್ತ ರೀತಿಯ ಸ್ಪಂದನೆ ನೀಡಿಲ್ಲ.

ಎಪಿಎಲ್‌ (ಆದ್ಯತೇತರ), ಬಿಪಿಎಲ್‌(ಆದ್ಯತಾ) ಹಾಗೂ ಅಂತ್ಯೋದಯ ಪಡಿತರ ಚೀಟಿಯ ಕುಟುಂಬದ ಸದಸ್ಯರು ಇಕೆವೈಸಿ ನೀಡಬೇಕಿದ್ದು, ಈಗಾಗಲೇ ಅದರ ಅಂತಿಮ ದಿನಾಂಕವನ್ನು ಮಾ. 31ರ ವರೆಗೆ ವಿಸ್ತರಿಸಲಾಗಿದೆ. ಪಡಿತರ ಚೀಟಿಯಲ್ಲಿ ಹೆಸರಿರುವ ಎಲ್ಲ ಸದಸ್ಯರು ಅದನ್ನು ಕಡ್ಡಾಯವಾಗಿ ಮಾಡಬೇಕಿದ್ದು, ಆದರೆ ಎಲ್ಲರೂ ಜತೆಯಾಗಿ ತೆರಳಬೇಕಿಲ್ಲ ಎಂಬ ಮಾಹಿತಿಯನ್ನೂ ನೀಡಿದೆ.
ಸರಕಾರವು ಈ ಹಿಂದೆ ಬೆರಳಚ್ಚು ಸಂಗ್ರಹ ಪ್ರಕ್ರಿಯೆಗೆ ಜ. 31ರ ಗಡುವು ನೀಡಿದ್ದು, ಅದರ ದಿನಾಂಕ ಹತ್ತಿರ ಬರುತ್ತಿದ್ದಂತೆ ಒತ್ತಡ ಅಧಿಕಗೊಂಡು ಸರ್ವರ್‌ ಸಮಸ್ಯೆ ಕಂಡು ಬಂದಿದೆ ಎಂದು ಮೂಲಗಳು ತಿಳಿಸು ತ್ತಿದ್ದು, ಹೀಗಾಗಿ ದಿನಾಂಕವನ್ನು ಮಾ. 31ರ ವರೆಗೆ ವಿಸ್ತರಿಸುವ ಜತೆಗೆ ಸರ್ವರ್‌ ಬದಲಾವಣೆಗೂ ಮುಂದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆ ವೇಗವಾಗಿ ಸಾಗಬಹುದು ಎಂದು ಆಹಾರ ಶಾಖೆಯ ಸಿಬಂದಿ ನಿರೀಕ್ಷಿಸುತ್ತಿದ್ದಾರೆ.

ಬಹುತೇಕ ನ್ಯಾಯಬೆಲೆ ಅಂಗಡಿಗಳು ಗ್ರಾಮೀಣ ಭಾಗ ದಲ್ಲೇ ಇರುವುದರಿಂದ ಕೆಲವೊಂದೆಡೆ ನೆಟ್‌ವರ್ಕ್‌ ಸಮಸ್ಯೆಗಳೂ ಕಾಡುತ್ತಿವೆ. ಈ ಕುರಿತು ಹಿಂದಿನಿಂದಲೂ ಆರೋಪಗಳು ಕೇಳಿಬರುತ್ತಿದ್ದು, ಹೀಗಾಗಿ ನೆಟ್‌ವರ್ಕ್‌ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸುವ ಕಾರ್ಯ ನಡೆಯಬೇಕಿದೆ.

ಬಂಟ್ವಾಳ ತಾಲೂಕಿನಲ್ಲಿ 5,977 ಅಂತ್ಯೋದಯ ಪಡಿತರ ಚೀಟಿಗಳಿದ್ದು, 31,009 ಸದಸ್ಯರಿದ್ದಾರೆ. ಅದರಲ್ಲಿ 1,365 ಪಡಿತರ ಚೀಟಿಯ 6,218 ಮಂದಿ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. 55,851 ಬಿಪಿಎಲ್‌(ಆದ್ಯತಾ) ಪಡಿತರ ಚೀಟಿಯಲ್ಲಿ 2,30,909 ಸದಸ್ಯರಿದ್ದು, ಅದರಲ್ಲಿ 24,693 ಚೀಟಿಗಳ 99,644 ಮಂದಿ ಇ-ಕೆವೈಸಿ ಪೂರ್ಣಗೊಳಿಸಿ ದ್ದಾರೆ. 22,041 ಎಪಿಎಲ್‌ (ಆದ್ಯತೇತರ) ಪಡಿತರ ಚೀಟಿ ಗಳಲ್ಲಿ 1,00,115 ಸದಸ್ಯರಿದ್ದು, ಅದರಲ್ಲಿ 5,406 ಚೀಟಿಗಳ 22201 ಮಂದಿ ಇಕೆವೈಸಿ ಪೂರ್ಣಗೊಳಿಸಿದ್ದಾರೆ ಎಂದು ತಾ| ಕಚೇರಿಯ ಮೂಲಗಳು ತಿಳಿಸಿವೆ.

ಸರ್ವರ್‌ ಸಮಸ್ಯೆಗೆ ಪರಿಹಾರ
ಅಕ್ಟೋಬರ್‌ನಲ್ಲಿ ಇ-ಕೆವೈಸಿ ಪ್ರಾರಂಭಗೊಂಡಿದ್ದು, ಸರ್ವರ್‌ ಸಮಸ್ಯೆಯಿಂದ ಕಳೆದ 3 ದಿನಗಳಲ್ಲಿ ಬೆರಳಚ್ಚು ಸಂಗ್ರಹ ಕಾರ್ಯ ನಡೆದಿಲ್ಲ. ಪ್ರಸ್ತುತ ಸರಕಾರದ ಸುತ್ತೋಲೆ ಬಂದಿದ್ದು, ಸರ್ವರ್‌ ಸಮಸ್ಯೆಗೆ ಪರಿಹಾರ ನೀಡಲು ತಂತ್ರಜ್ಞಾನ ಬದಲಾವಣೆ ಮಾಡಿ ಜ. 10ರ ಬಳಿಕ ಬೆರಳಚ್ಚು ಪ್ರಕ್ರಿಯೆ ವೇಗ ವಾಗಿ ಸಾಗುವ ಸಾಧ್ಯತೆ ಇದೆ.
 - ಶ್ರೀನಿವಾಸ್‌, ಆಹಾರ ಶಿರಸ್ತೇದಾರರು, ತಾಲೂಕು ಕಚೇರಿ, ಬಂಟ್ವಾಳ

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.