ಬೆಳ್ತಂಗಡಿ: ಪ್ರವಾಹ ಸಾಗಿದ ಊರಿಗೆ ನೆರವಿನ ಮಹಾಪೂರ

ಅಳಿದುಳಿದ ಮನೆಗಳ ಸ್ವಚ್ಛತೆಗೆ ಯುವಕರಿಂದ ಕರ ಸೇವೆ

Team Udayavani, Aug 14, 2019, 5:00 AM IST

s-25

ಬೆಳ್ತಂಗಡಿ: ಭೀಕರ ಪ್ರವಾಹದಿಂದ ತತ್ತರಿಸಿದ ಬೆಳ್ತಂಗಡಿ ತಾ|ನ ಸಂತ್ರಸ್ತರ ಮೊರೆ ಆಲಿಸಲು ಜಿಲ್ಲೆ, ಹೊರ ಜಿಲ್ಲೆ ರಾಜ್ಯದಿಂದೆಲ್ಲೆಡೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ.

ಪ್ರವಾಹ ಸಾಗಿದ ಊರುಗಳೆಲ್ಲ ಛಿದ್ರವಾಗಿ ನೆಲಸಮವಾಗಿರುವ ನಡು ವೆಯೇ ಸಂತ್ರಸ್ತರ ನೆರವಿಗೆ ಯುವ ಕರು, ಸಂಘ-ಸಂಸ್ಥೆಗಳು ಕೈಜೋಡಿ ಸಿವೆ. ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರು, ಜಿಲ್ಲಾಡಳಿತ, ಜನಪ್ರತಿನಿಧಿ ಗಳು, ಯುವಕರು, ಬಿಜೆಪಿ ಕಾರ್ಯ ಕರ್ತರು, ಎನ್ನೆಸ್ಸೆಸ್‌., ಎನ್‌ಸಿಸಿ, ಸ್ಕೌಟ್ಸ್‌ ಗೈಡ್ಸ್‌, ಆರ್‌ಎಸ್‌ಎಸ್‌, ಎಸ್‌ಕೆ. ಎಸ್‌ಎಸ್‌ಎಫ್‌, ಎಸ್‌ಎಸ್‌ಎಫ್‌, ಎಸ್‌ಡಿಪಿಐ ಸಹಿತ ಹತ್ತಾರು ಸಂಘ ಸಂಸ್ಥೆಗಳು ಪ್ರತಿನಿತ್ಯ ಸಂತ್ರಸ್ತರ ನೆರವಿಗೆ ಧಾವಿಸುತ್ತಿದೆ.

ಮನೆ ಸ್ವಚ್ಛತೆ
ಪ್ರವಾಹದಿಂದ ನೆಲೆ ಕಳೆದುಕೊಂಡ 275 ಮಂದಿಯ ಮನೆಗಳ ಅವಶೇಷ ನೋಡಲು ತೆರಳಿದ ಮನೆ ಮಂದಿ ಕಣ್ಣು ತುಂಬಿಕೊಂಡಿದೆ. ದಿಡುಪೆ ಸಹಿತ ಮಲವಂತಿಗೆ, ಚಾರ್ಮಾಡಿ ಪ್ರದೇಶದವರು ತಮ್ಮ ನೆಲೆಗಳತ್ತ ತೆರಳಲು ಭಯಭೀತರಾಗಿದ್ದು, ತಾತ್ಕಾಲಿಕ ಕೇಂದ್ರ ದಲ್ಲೇ ಜೀವನ ಸಾಗಿಸುತ್ತಿದ್ದಾರೆ. 300ಕ್ಕೂ ಹೆಚ್ಚು ಹಾನಿಗೊಳಗಾದ ಮನೆಗಳ ಸ್ವಚ್ಛತೆ ಸವಾಲಾಗಿರುವ ನಡುವೆಯೇ ಸ್ವಯಂ ಸೇವಕರು, ಯುವಕರ ತಂಡ ದಿನಕ್ಕೆ 5 ಮನೆ ಗಳಂತೆ ಆಯ್ದು ಸ್ವಚ್ಛತೆಗೆ ಮುಂದಾಗುತ್ತಿವೆ.

ಶ್ರಮಿಕದಲ್ಲಿ ತುಂಬಿದ ಸಾಮಗ್ರಿ
ಶಾಸಕ ಹರೀಶ್‌ ಪೂಂಜ ಕಚೇರಿ ಶ್ರಮಿಕಕ್ಕೆ ನೆರೆ ಸಂತ್ರಸ್ತರಿಗೆ ಹತ್ತಾರು ಟನ್‌ ದಿನಬಳಕೆ ಸಾಮಗ್ರಿಗಳು ಬಂದಿವೆ. 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು, ಯುವಕರು ದುಡಿಯುತ್ತಿದ್ದಾರೆ. ಮನೆ ಸ್ವಚ್ಛತೆ, ಬಟ್ಟೆ ಬರೆ ವಿತರಣೆ, ಪಶುಗಳಿಗೆ ಆಹಾರ ನೀಡಲು ಅಲ್ಲಲ್ಲಿ ಯುವಕರನ್ನು ನೇಮಿಸಲಾಗಿದೆ.

ಆರೆಸ್ಸೆಸ್‌ ಕಾರ್ಯಾಚರಣೆ
ಕಡಬದ 20, ಮರ್ದಾಳದ 35 ಮಂದಿ ಸಹಿತ ಸುಮಾರು 200 ಮಂದಿ ಆರೆಸ್ಸೆಸ್‌ನ ಸ್ವಯಂಸೇವಕರು ಕುಕ್ಕಾವು, ಚಾರ್ಮಾಡಿ, ಫರ್ಲಾನಿ, ಮಲವಂತಿಗೆ ಪ್ರದೇಶದಲ್ಲಿ ಮನೆ ಗಳ ಸ್ವಚ್ಛತೆಗೆ ಮುಂದಾಗಿದಾರೆ. ಇವರಿಗೆ ಮುಂಡಾಜೆ ಕಾಲೇಜಿನ 20 ಮಂದಿ ಸಾಥ್‌ ನೀಡಿದ್ದು, ಈಗಾಗಲೇ 15 ಮನೆಗಳ ಕೆಸರು ತೆಗೆದು ಸ್ವಚ್ಛತೆಗೆ ಕೈಜೋಡಿಸಿದ್ದಾರೆ. ಹಲವು ಕಡೆಗಳಲ್ಲಿ ನದಿ ಪಥ ಬದಲಿಸಿದ್ದು, ಅಂತಹ ಸ್ಥಳಗಳಲ್ಲಿ ನದಿಯ ಪಥ ಯಥಾಸ್ಥಿತಿಗೆ ಮರಳಿಸುವ ಕೆಲಸ ನಿರಂತರವಾಗಿ ಸಾಗುತ್ತಿದೆ.

ಎಸ್‌ಡಿಪಿಐ, ಎಸ್ಕೆಎಸ್ಸೆಸ್ಸೆಫ್
ಎಸ್‌ಡಿಪಿಐ ಸಹಿತ ಇತರ ಮುಸ್ಲಿಂ ಸಂಘ-ಸಂಸ್ಥೆಗಳ 100ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ನಿರಂತರ ಸಂಪರ್ಕ ನಿರ್ಮಾಣ ಹಾಗೂ ಮರ ತೆರವು ಸಹಿತ ಸಂತ್ರಸ್ತರಿಗೆ ಆಹಾರ ಸಾಮಾಗ್ರಿ ವಿತರಿಸುವಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ.

ಬದಲಾದ ಹಳ್ಳಿಯ ಚಿತ್ರಣ
ನೆರೆ ಹಾವಳಿಗೆ ಹಳ್ಳಿಗಳು ಹೇಳಹೆಸರಿಲ್ಲದಂತೆ ಬದಲಾಗಿ ಹೋಗಿವೆ. ಮನೆಯೊಳಗೆ ಆಳೆತ್ತರ ಮರಳಿನ ರಾಶಿ ತುಂಬಿಕೊಂಡಿದೆ. ಬಿಕೋ ಎನ್ನುತ್ತಿರುವ ಮನೆಯೊಳಗೆ ಯಜಮಾನನಿಲ್ಲದೆ ಮೂಕ ಪ್ರಾಣಿಗಳು ಆಕ್ರಂದನ ಮಾಡುತ್ತಿವೆ.

ಭೀಕರ ಪ್ರವಾಹದಿಂದುಂಟಾದ ಹಾನಿ ನೋಡಲು ಜನ ಬೆಳ್ತಂಗಡಿಗೆ ಆಗಮಿಸುತ್ತಿದ್ದಾರೆ. ಇವರನ್ನು ನಿಭಾಯಿಸುವುದೇ ಪೊಲೀಸ್‌ ಇಲಾಖೆಗೆ ಸವಾಲಾಗಿದೆ. ಮತ್ತೂಂದೆಡೆ ಕೆಲಸ ಕಾರ್ಯ ನಡೆಯುತ್ತಿರುವ ಮಧ್ಯೆ ಸ್ಥಳಕ್ಕೆ ಭೇಟಿ ನೀಡುವವರನ್ನು ನಿಯಂತ್ರಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.

ಸಮೀಕ್ಷೆ ಬಳಿಕ ಕೃಷಿ ಹಾನಿ ಚಿತ್ರಣ
ಸೇತುವೆಯಲ್ಲಿ ಸಿಲುಕಿರುವ ಮರ ತೆರವಿಗೆ ಕ್ರೇನ್‌ ಬಳಸಲಾಗಿದೆ. ಸೇತುವೆ ಸಂಪರ್ಕಕ್ಕೆ 10 ದಿನಗಳೊಳಗಾಗಿ ತಾತ್ಕಾಲಿಕ ಕ್ರಮಕ್ಕೆ ಕಾರ್ಯಾಚರಣೆ ಹಮ್ಮಿ ಕೊಳ್ಳಲಾಗಿದೆ. ಪ್ರತಿ ಗ್ರಾಮದಲ್ಲಿ ಶೇ.10ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಕೃಷಿ ಹಾನಿ ಸಮೀಕ್ಷೆ ಬಳಿಕ ಒಟ್ಟು ಚಿತ್ರಣ ಲಭ್ಯವಾಗಲಿದೆ.

– ಗಣಪತಿ ಶಾಸ್ತ್ರಿ, ತಹಶೀಲ್ದಾರ್‌

ತೇಲಿ ಬಂದಿವೆ ಬೆಳೆ ಬಾಳುವ ಮರಗಳು
ಪ್ರವಾಹದಲ್ಲಿ 10,000ಕ್ಕೂ ಹೆಚ್ಚು ಮರಗಳು ತೇಲಿಬಂದಿವೆ. ಬೀಟೆ, ಸಾಗುವಾನಿ, ಹಲಸು, ಹೆಬ್ಬಲಸು, ಮಾವು, ಪೊನ್ನೆ, ಮರುವ ಸಹಿತ ಹತ್ತಾರು ಜಾತಿಗಳ ಮರಗಳು ಸೇತುವೆ ಕಂಬಿ, ತೋಟಗಳ ಮಧ್ಯೆ ಎಲ್ಲೆಂದರಲ್ಲಿ ಎಸೆದಂತಿವೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.